SHIVAMOGGA LIVE NEWS
SAGARA | ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಗೆ ಆಹ್ವಾನ ನೀಡದೆ ಪಿಡಿಒ ಶಿಷ್ಟಾಚಾರ (PROTOCOL) ಉಲ್ಲಂಘನೆ ಮಾಡಿದ್ದಾರೆ. ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಾಡಕಲಸಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ನೀಡಿದ್ದಾರೆ.
ನಾಡಕಲಸಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ತಾಲೂಕು ಪಂಚಾಯಿತಿ ಇಒ ಪುಷ್ಪಾ ಆರ್.ಕಮ್ಮಾರ್ ಅವರಿಗೆ ದೂರು ನೀಡಿದರು.
(PROTOCOL)
ಏನಿದು ಪ್ರಕರಣ?
ಅ.14ರಂದು ನಾಡಕಲಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೋಡಿ ಎಸ್.ಟಿ. ಕಾಲೋನಿಯ ರಸ್ತೆ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಲಾಯಿತು. ಈ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ ಮತ್ತು ಸದಸ್ಯರಿಗೆ ಆಹ್ವಾನ ನೀಡಿರಲಿಲ್ಲ ಎಂದು ಆರೊಪಿಸಲಾಗಿದೆ. ಈ ಮೂಲಕ ಪಿಡಿಒ ಅವರು ಶಿಷ್ಟಾಚಾರ (PROTOCOL) ಉಲ್ಲಂಘನೆ ಮಾಡಿದ್ದಾರೆ. ಇದನ್ನು ಪ್ರಶ್ನಿಸಿದರೆ ಉಡಾಫೆಯ ಉತ್ತರ ನೀಡುತ್ತಿದ್ದಾರೆ ಎಂದು ರತ್ನಮ್ಮ ಆರೋಪಿಸಿದ್ದಾರೆ.
ಗ್ರಾಮ ಪಂಚಾಯಿತಿ ಸದಸ್ಯರಾದ ಮಹಾಬಲೇಶ್ ಕೌತಿ, ಸಂತೋಷ್ ಮರಸ, ಸವಿತಾ ನಾಗರಾಜ್, ದಲಿತ ಸಂಘರ್ಷ ಸಮಿತಿಯ ರೇವಪ್ಪ ಹೊಸಕೊಪ್ಪ, ಬಂಗಾರಪ್ಪ ಶುಂಠಿಕೊಪ್ಪ, ಶೇಖರ ಬಾಳಗೋಡು, ನಟರಾಜ್ ಗೇರುಬೀಸು ಸೇರಿದಂತೆ ಹಲವರು ಇದ್ದರು.
ಕ್ಲಿಕ್ ಮಾಡಿ ಇದನ್ನೂ ಓದಿ | ‘ಸೌದಿ ದೇಶದಲ್ಲಿ ಕೆಲಸ’, ನಂಬಿ ಮೆಸೇಜ್ ಮಾಡಿದ ಹೊಸನಗರದ ವ್ಯಕ್ತಿಗೆ ಲಕ್ಷ ಲಕ್ಷ ಮೋಸ, ಹೇಗಾಯ್ತು?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.