SHIVAMOGGA LIVE NEWS | 10 MAY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SAGARA : ನೀರಿನ ಮಟ್ಟ ಇಳಿಕೆಯಾದ ಹಿನ್ನೆಲೆ ಶರಾವತಿ ಹಿನ್ನೀರು ಭಾಗದ ಹಸಿರುಮಕ್ಕಿ ಲಾಂಚ್ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಳೆ ಕೊರತೆ ಮತ್ತು ಭಾರಿ ಬಿಸಿಲಿನ ಪರಿಣಾಮ ಶರಾವತಿ ನದಿಯಲ್ಲಿ ನೀರಿನ ಮಟ್ಟ ತಗ್ಗಿದೆ.
ನೀರಿನ ಆಳದಲ್ಲಿದ್ದ ಮರದ ದಿಮ್ಮಿಗಳು ಮೇಲೆ ಬರುತ್ತಿವೆ. ಇವು ಲಾಂಚ್ಗೆ ತಾಗಿ ಹಾನಿ ಉಂಟು ಮಾಡಲಿವೆ. ಈ ಹಿನ್ನೆಲೆ ಲಾಂಚ್ ಸೇವೆ ತಾತ್ಕಾಲಿಕ ಅವಧಿಗೆ ಸ್ಥಗಿತಗೊಳಿಸಲಾಗಿದೆ. ಮಳೆ ಬಂದು ನೀರಿನ ಮಟ್ಟ ಹೆಚ್ಚಳವಾಗುವವರೆಗೆ ಹಸಿರುಮಕ್ಕಿ ಲಾಂಚ್ ಸೇವೆ ಇರುವುದಿಲ್ಲ. ಕಳೆದ ಒಂದು ವಾರದಿಂದ ಲಾಂಚ್ನಲ್ಲಿ ಜನರ ಜೊತೆಗೆ ಲಘು ಮತ್ತು ದ್ವಿಚಕ್ರ ವಾಹನಗಳನ್ನು ಮಾತ್ರ ದಾಟಿಸಲಾಗುತ್ತಿತ್ತು. ಈಗ ಲಾಂಚ್ ಸೇವೆ ಸಂಪೂರ್ಣಗ ಸ್ಥಗಿತವಾಗಿದೆ.
ಸುತ್ತಿ ಬಳಸಿ ಸಾಗರ ತಲುಪಬೇಕಿದೆ
ಹಸಿರುಮಕ್ಕಿ ಲಾಂಚ್ ಸೇವೆ ತಾತ್ಕಾಲಿಕ ಸ್ಥಗಿತದಿಂದ ಸಾಗರದಿಂದ ದಕ್ಷಿಣ ಕನ್ನಡದ ಪ್ರಮುಖ ಮಾರ್ಗ ಬಂದ್ ಆದಂತಾಗಿದೆ. ಈಗ ದಕ್ಷಿಣ ಕನ್ನಡದಿಂದ ಸಾಗರಕ್ಕೆ ಬರುವವರು ನಗರ, ಹೊಸನಗರ ಮಾರ್ಗವಾಗಿ ಸಾಗರಕ್ಕೆ ತಲುಪಬೇಕಾಗಿದೆ. ಇನ್ನು, ಹೊಸನಗರ ತಾಲೂಕಿನ ನಿಟ್ಟೂರು, ಸಂಪೆಕಟ್ಟೆ, ಕೊಲ್ಲೂರು ಭಾಗದ ಜನರ ಓಡಾಟಕ್ಕೂ ಅಡಚಣೆಯಾಗಿದೆ. ಈ ಭಾಗದ ನಿವಾಸಿಗಳು ಸಾಗರ ತಲುಪಲು 40 ಕಿ.ಮೀ ಸುತ್ತಿ ಬಳಸಿ ತೆರಳಬೇಕಿದೆ.
ತಿಂಗಳು ಮೊದಲೆ ಸೇವೆ ಸ್ಥಗಿತ
ಸಾಮನ್ಯವಾಗಿ ಮೇ ತಿಂಗಳ ಕೊನೆ ಅಥವಾ ಜೂನ್ ತಿಂಗಳಲ್ಲಿ ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತವಾಗುತ್ತಿತ್ತು. ಆದರೆ ತೀವ್ರ ಮಳೆ ಕೊರೆತೆಯ ಪರಿಣಾಮ ಈ ಬಾರಿ ಒಂದು ಒಂದು ತಿಂಗಳು ಮೊದಲೇ ಲಾಂಚ್ ಸಂಚಾರ ನಿಲ್ಲಿಸಿದೆ. ಮಳೆ ಆರಂಭವಾಗಿ, ಶರಾವತಿ ಹಿನ್ನೀರಿನ ಮಟ್ಟ ಏರಿಕೆಯಾದರಷ್ಟೆ ಲಾಂಚ್ ಸೇವೆ ಪುನಾರಂಭವಾಗಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಡೀ ದಿನದ ಹವಾಮಾನ ವರದಿ
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






