SHIVAMOGGA LIVE NEWS | 10 MAY 2024
SAGARA : ನೀರಿನ ಮಟ್ಟ ಇಳಿಕೆಯಾದ ಹಿನ್ನೆಲೆ ಶರಾವತಿ ಹಿನ್ನೀರು ಭಾಗದ ಹಸಿರುಮಕ್ಕಿ ಲಾಂಚ್ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಮಳೆ ಕೊರತೆ ಮತ್ತು ಭಾರಿ ಬಿಸಿಲಿನ ಪರಿಣಾಮ ಶರಾವತಿ ನದಿಯಲ್ಲಿ ನೀರಿನ ಮಟ್ಟ ತಗ್ಗಿದೆ.
![]() |
ನೀರಿನ ಆಳದಲ್ಲಿದ್ದ ಮರದ ದಿಮ್ಮಿಗಳು ಮೇಲೆ ಬರುತ್ತಿವೆ. ಇವು ಲಾಂಚ್ಗೆ ತಾಗಿ ಹಾನಿ ಉಂಟು ಮಾಡಲಿವೆ. ಈ ಹಿನ್ನೆಲೆ ಲಾಂಚ್ ಸೇವೆ ತಾತ್ಕಾಲಿಕ ಅವಧಿಗೆ ಸ್ಥಗಿತಗೊಳಿಸಲಾಗಿದೆ. ಮಳೆ ಬಂದು ನೀರಿನ ಮಟ್ಟ ಹೆಚ್ಚಳವಾಗುವವರೆಗೆ ಹಸಿರುಮಕ್ಕಿ ಲಾಂಚ್ ಸೇವೆ ಇರುವುದಿಲ್ಲ. ಕಳೆದ ಒಂದು ವಾರದಿಂದ ಲಾಂಚ್ನಲ್ಲಿ ಜನರ ಜೊತೆಗೆ ಲಘು ಮತ್ತು ದ್ವಿಚಕ್ರ ವಾಹನಗಳನ್ನು ಮಾತ್ರ ದಾಟಿಸಲಾಗುತ್ತಿತ್ತು. ಈಗ ಲಾಂಚ್ ಸೇವೆ ಸಂಪೂರ್ಣಗ ಸ್ಥಗಿತವಾಗಿದೆ.
ಸುತ್ತಿ ಬಳಸಿ ಸಾಗರ ತಲುಪಬೇಕಿದೆ
ಹಸಿರುಮಕ್ಕಿ ಲಾಂಚ್ ಸೇವೆ ತಾತ್ಕಾಲಿಕ ಸ್ಥಗಿತದಿಂದ ಸಾಗರದಿಂದ ದಕ್ಷಿಣ ಕನ್ನಡದ ಪ್ರಮುಖ ಮಾರ್ಗ ಬಂದ್ ಆದಂತಾಗಿದೆ. ಈಗ ದಕ್ಷಿಣ ಕನ್ನಡದಿಂದ ಸಾಗರಕ್ಕೆ ಬರುವವರು ನಗರ, ಹೊಸನಗರ ಮಾರ್ಗವಾಗಿ ಸಾಗರಕ್ಕೆ ತಲುಪಬೇಕಾಗಿದೆ. ಇನ್ನು, ಹೊಸನಗರ ತಾಲೂಕಿನ ನಿಟ್ಟೂರು, ಸಂಪೆಕಟ್ಟೆ, ಕೊಲ್ಲೂರು ಭಾಗದ ಜನರ ಓಡಾಟಕ್ಕೂ ಅಡಚಣೆಯಾಗಿದೆ. ಈ ಭಾಗದ ನಿವಾಸಿಗಳು ಸಾಗರ ತಲುಪಲು 40 ಕಿ.ಮೀ ಸುತ್ತಿ ಬಳಸಿ ತೆರಳಬೇಕಿದೆ.
ತಿಂಗಳು ಮೊದಲೆ ಸೇವೆ ಸ್ಥಗಿತ
ಸಾಮನ್ಯವಾಗಿ ಮೇ ತಿಂಗಳ ಕೊನೆ ಅಥವಾ ಜೂನ್ ತಿಂಗಳಲ್ಲಿ ಹಸಿರುಮಕ್ಕಿ ಲಾಂಚ್ ಸೇವೆ ಸ್ಥಗಿತವಾಗುತ್ತಿತ್ತು. ಆದರೆ ತೀವ್ರ ಮಳೆ ಕೊರೆತೆಯ ಪರಿಣಾಮ ಈ ಬಾರಿ ಒಂದು ಒಂದು ತಿಂಗಳು ಮೊದಲೇ ಲಾಂಚ್ ಸಂಚಾರ ನಿಲ್ಲಿಸಿದೆ. ಮಳೆ ಆರಂಭವಾಗಿ, ಶರಾವತಿ ಹಿನ್ನೀರಿನ ಮಟ್ಟ ಏರಿಕೆಯಾದರಷ್ಟೆ ಲಾಂಚ್ ಸೇವೆ ಪುನಾರಂಭವಾಗಲಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಡೀ ದಿನದ ಹವಾಮಾನ ವರದಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200