ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA NEWS | 6 ಆಗಸ್ಟ್ 2020
ಶರಾವತಿ ನದಿ ನಡುವೆಯೇ ಲಾಂಚ್ ನಿಂತಿದ್ದು, ಪ್ರಾಯಣಿಕರು ಆತಂಕಕ್ಕೀಡಾಗಿದ್ದಾರೆ. ಹಸಿರುಮಕ್ಕಿ ಲಾಂಚ್ ನಡುನೀರಲ್ಲೇ ನಿಂತಿದೆ.
ಸಾಗರದ ಹುಲಿದೇವರ ಬನದಿಂದ ಹೊಸನಗರ ತಾಲೂಕು ಕೆ.ಬಿ.ಕ್ರಾಸ್ ಸಮೀಪಕ್ಕೆ ಹಿನ್ನೀರಿನಲ್ಲಿ ಸಂಪರ್ಕ ಕಲ್ಪಿಸಲಿದೆ ಈ ಲಾಂಚ್. ನಡು ನೀರಲ್ಲೇ ಲಾಂಚ್ ನಿಂತಿದೆ. ಅಡುಗೆ ಅನಿಲ ಸಿಲಿಂಡರ್ ತುಂಬಿರುವ ವಾಹನ, ಕಾರುಗಳು, ಬೈಕುಗಳು ಲಾಂಚ್ನಲ್ಲಿವೆ. ಹಲವು ಪ್ರಯಾಣಿಕರು ಇದ್ದು ಆತಂಕಕ್ಕೀಡಾಗಿದ್ದಾರೆ.
ರಕ್ಷಣಾ ಕಾರ್ಯ ಪ್ರಗತಿಯಲ್ಲಿ
ಲಾಂಚ್ ಅನ್ನು ಸುರಕ್ಷಿತವಾಗಿ ದಡಕ್ಕೆ ಸೇರಿಸುವ ಪ್ರಯತ್ನ ಆರಂಭವಾಗಿದೆ. ತೆಪ್ಪದ ಮೂಲಕ ಲಾಂಚ್ಗೆ ಹಗ್ಗ ಕಟ್ಟಿ ಅದನ್ನು ದಡಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಕ್ರೇನ್ ಮೂಲಕ ಲಾಂಚ್ ಅನ್ನು ದಡಕ್ಕೆ ಎಳೆಯುವ ಯತ್ನವು ನಡೆಯುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸಾಗರದಿಂದ ಕೊಲ್ಲೂರಿಗೆ ಸಂಪರ್ಕ ಕಲ್ಪಿಸು ಸಮೀಪದ ಮಾರ್ಗ ಇದಾಗಿದೆ. ಹಾಗಾಗಿ ಹೆಚ್ಚು ಪ್ರಯಾಣಿಕರು ಈ ಲಾಂಚ್ ಬಳಿಸಿ ಪ್ರಯಾಣಿಸುತ್ತಾರೆ. ಈಗ ರಕ್ಷಣಾ ಕಾರ್ಯದ ವಿಡಿಯೋ ರಿಪೋರ್ಟ್ ಇಲ್ಲಿದೆ.
https://www.facebook.com/liveshivamogga/videos/219979252648014/?t=15
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






