ಶಿವಮೊಗ್ಗ ಲೈವ್.ಕಾಂ | SAGARA NEWS | 6 ಆಗಸ್ಟ್ 2020
ಶರಾವತಿ ನದಿ ನಡುವೆಯೇ ಲಾಂಚ್ ನಿಂತಿದ್ದು, ಪ್ರಾಯಣಿಕರು ಆತಂಕಕ್ಕೀಡಾಗಿದ್ದಾರೆ. ಹಸಿರುಮಕ್ಕಿ ಲಾಂಚ್ ನಡುನೀರಲ್ಲೇ ನಿಂತಿದೆ.
ಸಾಗರದ ಹುಲಿದೇವರ ಬನದಿಂದ ಹೊಸನಗರ ತಾಲೂಕು ಕೆ.ಬಿ.ಕ್ರಾಸ್ ಸಮೀಪಕ್ಕೆ ಹಿನ್ನೀರಿನಲ್ಲಿ ಸಂಪರ್ಕ ಕಲ್ಪಿಸಲಿದೆ ಈ ಲಾಂಚ್. ನಡು ನೀರಲ್ಲೇ ಲಾಂಚ್ ನಿಂತಿದೆ. ಅಡುಗೆ ಅನಿಲ ಸಿಲಿಂಡರ್ ತುಂಬಿರುವ ವಾಹನ, ಕಾರುಗಳು, ಬೈಕುಗಳು ಲಾಂಚ್ನಲ್ಲಿವೆ. ಹಲವು ಪ್ರಯಾಣಿಕರು ಇದ್ದು ಆತಂಕಕ್ಕೀಡಾಗಿದ್ದಾರೆ.
ರಕ್ಷಣಾ ಕಾರ್ಯ ಪ್ರಗತಿಯಲ್ಲಿ
ಲಾಂಚ್ ಅನ್ನು ಸುರಕ್ಷಿತವಾಗಿ ದಡಕ್ಕೆ ಸೇರಿಸುವ ಪ್ರಯತ್ನ ಆರಂಭವಾಗಿದೆ. ತೆಪ್ಪದ ಮೂಲಕ ಲಾಂಚ್ಗೆ ಹಗ್ಗ ಕಟ್ಟಿ ಅದನ್ನು ದಡಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಕ್ರೇನ್ ಮೂಲಕ ಲಾಂಚ್ ಅನ್ನು ದಡಕ್ಕೆ ಎಳೆಯುವ ಯತ್ನವು ನಡೆಯುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸಾಗರದಿಂದ ಕೊಲ್ಲೂರಿಗೆ ಸಂಪರ್ಕ ಕಲ್ಪಿಸು ಸಮೀಪದ ಮಾರ್ಗ ಇದಾಗಿದೆ. ಹಾಗಾಗಿ ಹೆಚ್ಚು ಪ್ರಯಾಣಿಕರು ಈ ಲಾಂಚ್ ಬಳಿಸಿ ಪ್ರಯಾಣಿಸುತ್ತಾರೆ. ಈಗ ರಕ್ಷಣಾ ಕಾರ್ಯದ ವಿಡಿಯೋ ರಿಪೋರ್ಟ್ ಇಲ್ಲಿದೆ.
https://www.facebook.com/liveshivamogga/videos/219979252648014/?t=15
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200