ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಸಾಗರ: ಪ್ರಸಿದ್ಧ ಶ್ರೀ ಮಾರಿಕಾಂಬ ದೇವಿಯ ಮೆರವಣಿಗೆಯ ಸಂದರ್ಭ ಜನದಟ್ಟಣೆಯಲ್ಲಿ ಕಳ್ಳರು, ವೃದ್ಧರೊಬ್ಬರ ಕೊರಳಿನಲ್ಲಿದ್ದ ₹1.05 ಲಕ್ಷ ಮೌಲ್ಯದ ಚಿನ್ನದ ಸರ (gold chain) ದೋಚಿದ್ದಾರೆ. ಜೆ.ಸಿ. ರಸ್ತೆಯ ಕಾಳಿಕಾಂಬಾ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ.
ಸಂಗಮೇಶ್ವರ ರಸ್ತೆ ನಿವಾಸಿ ಶ್ರೀಕಾಂತ ವಜ್ರ ಶೇಠ್ ಅವರು ಚಿನ್ನದ ಸರ ಕಳೆದುಕೊಂಡವರು. ಫೆಬ್ರವರಿ 12ರ ಮಧ್ಯರಾತ್ರಿ ಮಾರಿಕಾಂಬಾ ದೇವಿಯನ್ನು ವನಕ್ಕೆ ಬಿಡುವ ಮೆರವಣಿಗೆ ಸಾಗುತ್ತಿತ್ತು. ಈ ವೇಳೆ ಜೆ.ಸಿ. ರಸ್ತೆಯ ದೇವಸ್ಥಾನದ ಬಳಿ ನಿಂತಿದ್ದ ಶ್ರೀಕಾಂತ ಅವರ ಕೊರಳಿನಲ್ಲಿದ್ದ ಹವಳದ ಪದಕ ಇರುವ ₹1,05,000 ಮೌಲ್ಯದ 19 ಗ್ರಾಂ ತೂಕದ ಬಂಗಾರದ ಚೈನ್ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸಾಕು ನಾಯಿಗಳ ಜಗಳ, ಕೈ ಕೈ ಮಿಲಾಯಿಸಿದ ಮಾಲೀಕರು, ಆಗಿದ್ದೇನು?
LATEST NEWS
- ಶಿವಮೊಗ್ಗದ ಡೇಂಜರ್ ಹಂಪ್ಗಳಿಗೆ 24 ಗಂಟೆಯ ಗಡುವು, ಬೈಕ್ನಲ್ಲಿ ಕಮಿಷನರ್ ಸಿಟಿ ರೌಂಡ್ಸ್

- ಶಿವಮೊಗ್ಗ, ಸಾಗರದಲ್ಲಿ ಕೆಲಸ ಹುಡುಕ್ತಿದ್ದೀರಾ? ಫೆಬ್ರವರಿ 18ರಂದು ನಡೆಯಲಿದೆ ಸಂದರ್ಶನ

- ಶಿವಮೊಗ್ಗ ಲೈವ್ BIG IMPACT, ಡೇಂಜರಸ್ ಹಂಪ್ಗಳಿಂದ ಶೀಘ್ರ ಮುಕ್ತಿ, ಮಹತ್ವದ ಮೀಟಿಂಗ್

- ಕೋಟೆ ಮಾರಿಕಾಂಬೆಗೆ 1 ಕೆಜಿ 600 ಗ್ರಾಂ ತೂಕದ ಚಿನ್ನದ ಮುಖವಾಡ

- ಫುಡ್ ಕೋರ್ಟ್ನಿಂದ ಹೊರ ಬಂದ ವ್ಯಕ್ತಿಯ ಕಾಲಿನ ಮೇಲೆ ಬೈಕ್ ಹತ್ತಿಸಿ, ಕಲ್ಲಿನಿಂದ ಹೊಡೆದು ಹಲ್ಲೆ

About The Editor
ನಿತಿನ್ ಆರ್.ಕೈದೊಟ್ಲು






