ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS |10 JANUARY 2023
ಸಾಗರ : ಪ್ರಸಿದ್ಧ ಕ್ಷೇತ್ರ ಸಿಗಂದೂರು (sigandur) ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಸಂಕ್ರಾಂತಿ (sankranti) ಅಂಗವಾಗಿ ಜ.14 ಮತ್ತು 15ರಂದು ಜಾತ್ರಾ (jatre) ಮಹೋತ್ಸವ ನಡೆಯಲಿದೆ. ಜ.14ರಂದು ಬೆಳಗ್ಗೆ ಸೀಗೆಕಣಿವೆಯಲ್ಲಿ ನಟ ರಾಘವೇಂದ್ರ ರಾಜಕುಮಾರ್ ಅವರು ಜಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ಧರ್ಮದರ್ಶಿ ಡಾ. ಎಸ್.ರಾಮಪ್ಪ (dr. ramappa) ತಿಳಿಸಿದ್ದಾರೆ.

ಮೂಲ ಸ್ಥಳದಲ್ಲಿ ಪ್ರಥಮ ಪೂಜೆ
ಜ.14ರಂದು ಬೆಳಗಿನ ಜಾವ 2 ಗಂಟೆಗೆ ಆಲಯ ಶುದ್ಧಿ ನಡೆಯಲಿದೆ. ಬೆಳಗ್ಗೆ 7ಕ್ಕೆ ಚೌಡೇಶ್ವರಿ ದೇವಿಯ ಮೂಲ ಸ್ಥಳವಾದ ಸೀಗೆ ಕಣವೆಯಲ್ಲಿ ಪ್ರಥಮ ಪೂಜೆ ನೆರವೇರಲಿದೆ. ಬಳಿಕ ಧರ್ಮಾಧಿಕಾರಿ ನೇತೃತ್ವದಲ್ಲಿ ಪೂರ್ಣ ಕುಂಭ ಕಳಶದೊಂದಿಗೆ ಜ್ಯೋತಿ ರೂಪದ ದೇವಿಯನ್ನು ಈಗಿನ ಸಿಗಂದೂರು (sigandur) ದೇವಸ್ಥಾನಕ್ಕೆ ಮೆರವಣಿಗೆಯಲ್ಲಿ ತರಲಾಗುತ್ತದೆ. ವಡನ್ ಬೈಲು ಪದ್ಮಾವತಿ ದೇವಸ್ಥಾನದ ಧರ್ಮದರ್ಶಿ ವೀರರಾಜಯ್ಯ ಜೈನ್ ಅವರು ಜಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಪೂಜೆ, ಧಾರ್ಮಿಕ ಸಭೆ, ಯಕ್ಷಗಾನ
ಜ.14ರಂದು ದೇವಿಗೆ ಹೂವಿನ ಅಲಂಕಾರ, ಪೂಜೆ, ಮಹಾಭಿಷೇಕ, ಆಭರಣ ಪೂಜೆ, ಚಂಡಿಕಾ ಹವನ, ನವ ಚಂಡಿಕಾ ಹವನ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಧಾರ್ಮಿಕ ಸಭೆ ಆಯೋಜಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಗೌರವ ಸಮರ್ಪಣೆ ಮಾಡಲಾಗುತ್ತದೆ. ಸಂಜೆ 5 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. 5.30ಕ್ಕೆ ಗಂಗಾರತಿ, ಸಿಡಿಮದ್ದು ಪ್ರದರ್ಶನವಿರಲಿದೆ. ರಾತ್ರಿ 10.30ರಿಂದ ಯಕ್ಷಗಾನ ಪ್ರದರ್ಶನವಿರಲಿದೆ.

ಮುಂಜಾನೆಯಿಂದಲೆ ವಿಶೇಷ ಪೂಜೆ
ಜ.15ರಂದು ಮುಂಜಾನೆ 4 ಗಂಟೆಯಿಂದಲೇ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಮಧ್ಯಾಹ್ನ 2 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ರಾತ್ರಿ 8ಕ್ಕೆ ಗಾನ ವೈಭವ ನಡೆಯಲಿದೆ. ಭಕ್ತರು ಕೋವಿಡ್ ನಿಯಮಗಳನ್ನು ಪಾಲಿಸಿ ಜಾತ್ರೆಯಲ್ಲಿ ಪಾಲ್ಗೊಳ್ಳುವಂತೆ ಧರ್ಮದರ್ಶಿ ಡಾ.ರಾಮಪ್ಪ ಅವರು ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವೈಭವದ ತೆಪ್ಪೋತ್ಸವ, ಕಣ್ತುಂಬಿಕೊಂಡು ಪುನೀತರಾದ ಭಕ್ತ ಸಮೂಹ, ಮೆರಗು ಹೆಚ್ಚಿಸಿದ ಸಿಡಿಮದ್ದು
LATEST NEWS
- ದಿಢೀರ್ ರಸ್ತೆಗೆ ಬಂದು ಕಾರಿನ ಮೇಲೆ ಜಿಗಿದ ಕಾಡುಕೋಣ

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? | 10 ಫೆಬ್ರವರಿ 2026

- ಶಿವಮೊಗ್ಗ ವಿಮಾನ ನಿಲ್ದಾಣ, ಕೇಂದ್ರ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದ ರಾಘವೇಂದ್ರ

- ಶಿವಮೊಗ್ಗದಲ್ಲಿ ಉಚಿತ ಆರ್ಯುವೇದ ಆರೋಗ್ಯ ತಪಾಸಣಾ ಶಿಬಿರ, ಈಗಲೇ ಹೆಸರು ನೋಂದಣಿಗೆ ಸೂಚನೆ

- ಶಿವಮೊಗ್ಗ ಕೋಟೆ ಮಾರಿಕಾಂಬಾ ಜಾತ್ರೆ ಸಿದ್ಧತೆ ಜೋರು, ಪ್ರಚಾರ ಶುರು

About The Editor
ನಿತಿನ್ ಆರ್.ಕೈದೊಟ್ಲು


CLICK HERE TO JOIN SHIVAMOGGA LIVE WHATSAPP GROUP



