ತಹಶೀಲ್ದಾರ್‌ ನೇತೃತ್ವದಲ್ಲಿ ದಾಳಿ, ಕಾರು ಸಹಿತ ಇಬ್ಬರು ಯುವಕರು ಅರೆಸ್ಟ್‌, ಏನಿದು ಕೇಸ್?

ಸಾಗರ: ತಾಲೂಕಿನ ಅರಳಿಕೊಪ್ಪದಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 330 ಗ್ರಾಂ ಗಾಂಜಾವನ್ನು ತಹಸೀಲ್ದಾ‌ರ್‌ ಡಾ.ಆರ್.ಪ್ರತಿಭಾ ನೇತೃತ್ವದ ತಂಡ ಹಾಗೂ ನಗರ ಪೊಲೀಸ್ ಠಾಣೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಖಚಿತ ಮಾಹಿತಿ ಮೇರೆಗೆ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಿ, ಗಾಂಜಾ ಹಾಗೂ ಕಾರನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ.

Tahasildhar-Dr-Prathibha-team-raid-two-arrested

ತಾಲೂಕಿನಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಸಹಿಸುವುದಿಲ್ಲ. ಅಕ್ರಮ ಗಾಂಜಾ ಸಾಗಣೆ ಮೂಲ ಹಾಗೂ ಕಿಂಗ್‌ ಪಿನ್‌ಗಳನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ತಹಸೀಲ್ದಾರ್ ಡಾ.ಆರ್.ಪ್ರತಿಭಾ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮ ಆಡಳಿತಾಧಿಕಾರಿ ಸಂತೋಷ್, ಸಮೇದ್, ಪೊಲೀಸ್ ಇನ್‌ಸ್ಪೆಕ್ಟರ್‌ ಪುಲ್ಲಯ್ಯ ರಾಥೋಡ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಇದ್ದರು.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion