‘ಶರಾವತಿ ನದಿಗಾಗಿ’ ಮಾದರಿಯಲ್ಲೇ ಸಾಗರ ತಾಲೂಕಲ್ಲಿ ಮತ್ತೊಂದು ಹೋರಾಟಕ್ಕೆ ಸಿದ್ಧತೆ, ಹೋರಾಟ ಸಮಿತಿ ಅಸ್ಥಿತ್ವಕ್ಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 19 ಆಗಸ್ಟ್ 2019

‘ಶರಾವತಿ ನದಿಗಾಗಿ’ ಹೋರಾಟದ ಮಾದರಿಯಲ್ಲೇ ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಹೋರಾಟಕ್ಕೆ ವೇದಿಕೆ ಸಿದ್ಧವಾಗಿದೆ. ಹೋರಾಟ ಸಮಿತಿಯು ಅಸ್ಥಿತ್ವಕ್ಕೆ ಬಂದಿದೆ.

ಕಲ್ಲೊಡ್ಡು ಜಲಾಶಯ ನಿರ್ಮಾಣ ವಿರೋಧಿಸಿ ಹೋರಾಟಕ್ಕೆ ರೂಪುರೇಷೆ ಸಿದ್ಧವಾಗುತ್ತಿದೆ. ಕಲ್ಲೊಡ್ಡು ಯೋಜನೆ ವಿರೋಧ ಸಮಿತಿ ಅಸ್ಥಿತ್ವಕ್ಕೆ ಬಂದಿದ್ದು ಗೌರವಾಧ್ಯಕ್ಷರಾಗಿ ಬರೂರು ವೀರೇಶ್ ಗೌಡ, ಅಧ್ಯಕ್ಷರಾಗಿ ಟಾಕಪ್ಪ ಕುಂದೂರು, ಕಾರ್ಯದರ್ಶಿಯಾಗಿ ಮಂಜುನಾಥ್ ಮಡಿವಾಳನಕಟ್ಟೆ ಅವರಿಗೆ ಜವಾಬ್ದಾರಿ ನೀಡಲಾಗಿದೆ.

ಹೇಗಿರುತ್ತೆ ಯೋಜನೆ ವಿರುದ್ಧದ ಹೋರಾಟ?

ಶರಾವತಿ ನದಿಗಾಗಿ ಹೋರಾಟದ ಮಾದರಿಯಲ್ಲೇ ಕಲ್ಲೊಡ್ಡು ಯೋಜನೆ ವಿರೋಧಿ ಹೋರಾಟ ನಡೆಸಲು ಯೋಜಿಸಲಾಗಿದೆ. ‘ಶರಾವತಿ ನದಿಗಾಗಿ ಹೋರಾಟ ಸಮಿತಿಯವರು ಮತ್ತು ಹೋರಾಟಗಾರರನ್ನು ಭೇಟಿಯಾಗಿ ಬೆಂಬಲ ಕೇಳುತ್ತೇವೆ. ಯೋಜನೆ ವ್ಯಾಪ್ತಿಯ ಹಳ್ಳಿಗಳು ಮಾತ್ರವಲ್ಲದೆ, ಇಡೀ ತಾಲೂಕಿನಲ್ಲಿ ಜನಜಗೃತಿ ಮೂಡಿಸುತ್ತೇವೆ’ ಎಂದು ಹೋರಾಟ ಸಮಿತಿ ಅಧ್ಯಕ್ಷ ಟಾಕಪ್ಪ ಕುಂದೂರು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ.

ಏನಿದು ಕಲ್ಲೊಡ್ಡು ಯೋಜನೆ? ವಿರೋಧ ಯಾಕೆ?

ಸಾಗರ ತಾಲೂಕಿನ ಬರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದೂರು ಸಮೀಪ ಕಲ್ಲೊಡ್ಡು ಜಲಾಶಯ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿದೆ. ಕುಂದೂರು, ಕೊರ್ಲಿಕೊಪ್ಪ, ಮಿಡಿನಾಗರ ಭಾಗದ ತಗ್ಗು ಪ್ರದೇಶದಲ್ಲಿ ನೀರಿನ ಹರಿವಿದೆ. ಗುತ್ತಳ್ಳಿ ಭಾಗದಲ್ಲಿ ಕೆರೆಯಿಂದ ಹೊರಡುವ ಈ ಹರಿವು ಮುಂದೆ ಅಂಬ್ಲಿಗೊಳ ಜಲಾಶಯದ ಚಾನಲ್ ನೀರನ್ನು ಸೇರುತ್ತದೆ. ಈ ಭಾಗದ ತಗ್ಗು ಪ್ರದೇಶದಲ್ಲಿ ಜಲಾಶಯ ನಿರ್ಮಾಣ ಮಾಡುವುದು ಸರ್ಕಾರದ ಯೋಚನೆ.

69168487 906383006389787 2016443379755253760 n.jpg? nc cat=103& nc oc=AQnvUCSlDX1liptFGLc3l57jIBl1KM8wPv6mZCDp3iWMX3P3Wn21q5ueAeBIcLhtcSw& nc ht=scontent.fblr13 1

ಸಾಗರ ಮತ್ತು ಶಿಕಾರಿಪುರ ಗಡಿ ಭಾಗದಲ್ಲಿ ಕಲ್ಲೊಡ್ಡು ಜಲಾಶಯ ನಿರ್ಮಿಸಲು ಯೋಜಿಸಲಾಗಿದೆ. ಇದರಿಂದ ಶಿಕಾರಿಪುರ ತಾಲೂಕಿನ ನೀರಿನ ಸಮಸ್ಯೆ ನೀಗಲಿದೆ. ಆದರೆ, ಲಿಂಗನಮಕ್ಕಿ ಜಲಾಶಯ ನಿರ್ಮಾಣದಿಂದ ಸಾಗರ ತಾಲೂಕಿನ ಬಹುಭಾಗ ಜಲಾವೃತವಾಗಿದೆ. ಅಲ್ಲದೆ ನೆಲೆ ಕಳೆದುಕೊಂಡ ಸಂತ್ರಸ್ತರಿಗೆ ಇನ್ನು ಪರಿಹಾರ ಸಿಕ್ಕಿಲ್ಲ. ಈಗ ಕಲ್ಲೊಡ್ಡು ಯೋಜನೆ ಆರಂಭವಾದರೆ ಮತ್ತಷ್ಟು ಮನೆ, ಜಮೀನು, ಅರಣ್ಯ ಮುಳುಗಡೆಯಾಗಲಿದೆ. ಜನರು ಸಂತ್ರಸ್ತರಾಗಲಿದ್ದಾರೆ. ಹಾಗಾಗಿ ಈ ಭಾಗದಲ್ಲಿ ವಿರೋಧದ ಕೂಗು ಎದ್ದಿದೆ.

ಹೋರಾಟ ಸಮಿತಿ ಅಸ್ಥಿತ್ವಕ್ಕೆ ಬಂದಿದ್ದು, ಸಾಮಾಜಿಕ ಜಾಲತಾಣದಲ್ಲೂ ಯೋಜನೆಯ ಅನಾನುಕೂಲದ ಕುರಿತು ಮಾಹಿತಿ ಹಂಚಲಾಗುತ್ತಿದೆ. ಶರಾವತಿ ನದಿಗಾಗಿ ಹೋರಾಟದ ಮಾದರಿಯಲ್ಲೇ ತೀವ್ರ ಸ್ವರೂಪದ ಹೋರಾಟ ನಡೆಸಲು ಈ ಭಾಗದ ಜನರು ತೀರ್ಮಾನಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 19, 2019

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment