SHIVAMOGGA LIVE NEWS, 19 DECEMBER 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಾಗರ : ಕೆಎಸ್ಆರ್ಟಿಸಿ ಬಸ್ (Bus) ನಿಲುಗಡೆ ಮಾಡದೆ ಇರುವುದನ್ನು ಖಂಡಿಸಿ ಗ್ರಾಮಸ್ಥರು, ವಿದ್ಯಾರ್ಥಿಗಳು ರಸ್ತೆತಡೆ ನಡೆಸಿ ಪ್ರತಿಭಟಿಸಿದರು. ಸಾಗರ ತಾಲೂಕು ತಾಲ್ಲೂಕಿನ ಕಾನ್ಲೆ ಮಾರ್ಗದಲ್ಲಿ ಸಾಗರಕ್ಕೆ ಸಂಚರಿಸುವ ಬಸ್ಗಳು ನಿಲುಗಡೆ ನೀಡದಿರುವುದಕ್ಕೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಿಂದ ಕಾನ್ಲೆ ಮಾರ್ಗವಾಗಿ ಸಾಗರಕ್ಕೆ ಸಂಚರಿಸುವ ಕೆಎಸ್ಆರ್ಟಿಸಿ ಬಸ್ಗಳನ್ನು ಎಲ್ಲಾ ಕಡೆ ನಿಲುಗಡೆ ಮಾಡಬೇಕು. ಈ ಬಸ್ನಲ್ಲಿ ವಿದ್ಯಾರ್ಥಿಗಳು ಸಿರಿವಂತೆ, ಸಾಗರದ ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ಬಸ್ ನಿಲುಗಡೆ ಮಾಡದೆ ಇರುವುದರಿಂದ ತೊಂದರೆಯಾಗುತ್ತಿದೆ. ಈ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಲಾಗಿದೆ. ಆದರೂ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಕಾರರು ದೂರಿದರು.

ಇದನ್ನೂ ಓದಿ » ಆನಂದಪುರದಲ್ಲಿ ಎಲ್ಇಡಿ ಟಿವಿ, ಹೋಂ ಥಿಯೇಟರ್ ಕಳ್ಳತನ, ಹೇಗಾಯ್ತು ಘಟನೆ?
ಸ್ಥಳಕ್ಕೆ ಬಂದ ಕೆಎಸ್ಆರ್ಟಿಸಿ ಅಧಿಕಾರಿಗಳು ಬಸ್ ನಿಲುಗಡೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಟ್ಟರು.

ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಅಶೋಕ್ ಬರದವಳ್ಳಿ, ಪ್ರಮುಖರಾದ ತುಕಾರಾಮ್ ಶಿರವಾಳ, ಶಿವಮೂರ್ತಿ ಮಂಡಗಳಲೆ, ಅಣ್ಣಪ್ಪ ಕಾನ್ಲೆ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಇದನ್ನೂ ಓದಿ » ದೇವರ ದರ್ಶನ ಮುಗಿಸಿ ಭದ್ರಾವತಿಯಲ್ಲಿ ಮನೆಗೆ ಮರಳಿದ ಕುಟುಂಬಕ್ಕೆ ಕಾದಿತ್ತು ಶಾಕ್
LATEST NEWS
- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

- MRPಗಿಂತಲು ಹೆಚ್ಚು ವಸೂಲಿ, ಫ್ಲಿಪ್ಕಾರ್ಟ್ ಸಂಸ್ಥೆಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ

- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು





