ಸಿನಿಮಾ ನಟ, ರಂಗಭೂಮಿ ಕಲಾವಿದ ಯೇಸು ಪ್ರಕಾಶ್‌ ಇನ್ನಿಲ್ಲ, ಸಾಗರದಲ್ಲಿ ಅಂತಿಮ ದರ್ಶನ, ರಂಗ ನಮನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 31 MARCH 2024

SAGARA : ಖ್ಯಾತ ರಂಗಭೂಮಿ ಕಲಾವಿದ, ಚಿತ್ರನಟ ಯೇಸು ಪ್ರಕಾಶ್ (58) ಶನಿವಾರ ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಯೇಸು ಪ್ರಕಾಶ್ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೃತರಿಗೆ ಪತ್ನಿ, ಪುತ್ರ, ಇಬ್ಬರು ಪುತ್ರಿಯರಿದ್ದಾರೆ.

ರಂಗ ನಮನದ ಮೂಲಕ ಶ್ರದ್ಧಾಂಜಲಿ

ಸಾಗರ ಸಮೀಪದ ಪುರಪ್ಪೆಮನೆಯ ಕಲ್ಲುಕೊಪ್ಪ ಗ್ರಾಮದವರಾದ ಯೇಸು ಪ್ರಕಾಶ್ ಚಲನಚಿತ್ರ ಮತ್ತು ರಂಗಭೂಮಿಯಲ್ಲಿ ನಿರಂತರವಾಗಿ ತೊಡಗಿಕೊಂಡಿದ್ದರು. ನೀನಾಸಂ ಸಂಸ್ಥೆಯೊಂದಿಗೆ ಗುರುತಿಸಿಕೊಂಡಿದ್ದರು. ನಟನೆಯ ಜತೆಯಲ್ಲಿ ಸಾಮಾಜಿಕ ಹೋರಾಟಗಳಲ್ಲೂ ತಮ್ಮನ್ನು ಗುರುತಿಸಿಕೊಂಡಿದ್ದರು. ಭಾನುವಾರ ಬೆಳಗ್ಗೆ ಅವರ ಸ್ವಗ್ರಹದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಇದೇ ವೇಳೆ ರಂಗ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಆಪ್ತರು ತಿಳಿಸಿದ್ದಾರೆ.

ಇದನ್ನೂ ಓದಿ – ಸಾಲ ಹಿಂತಿರುಗಿಸಿದ ಸ್ನೇಹಿತ, ಹಣ ಎಣಿಸುವಾಗ ಕಾದಿತ್ತು ಆಘಾತ, ಗೆಳೆಯನ ವಿರುದ್ಧವೇ ಕೇಸ್‌, ಕಾರಣವೇನು?

ಯಾವೆಲ್ಲ ಸಿನಿಮಾದಲ್ಲಿ ಅಭಿನಯಿಸಿದ್ದರು?

ನಿರ್ದೇಶಕ ಎಸ್.ನಾರಾಯಣ್ ಮಗ ಪಂಕಜ್ ಅಭಿನಯದ ಮೊದಲ ಸಿನಿಮಾ ‘ವೀರು‌’ ಚಿತ್ರದಿಂದ ಯೇಸು ಪ್ರಕಾಶ್‌ ಅವರು ಕನ್ನಡ ಸಿನಿಮಾಗಳಲ್ಲಿ ಅಭಿನಯ ಆರಂಭಿಸಿದ್ದರು. ಪುನೀತ್ ರಾಜ್​ಕುಮಾರ್ ಅಭಿನಯದ ‘ಯಾರೇ ಕೂಗಾಡಲಿ’, ದರ್ಶನ್​ ನಟನೆಯ ‘ಸಾರಥಿ’ ಸಿನಿಮಾದಲ್ಲಿ‌ ಕಾಡುಜನರ ನಾಯಕ, ‘ಯೋಧ’ ಸಿನಿಮಾದಲ್ಲಿ ರೌಡಿ ಜಯರಾಜ್, ‘ರಾಜಾಹುಲಿ‌’ ಸಿನಿಮಾದಲ್ಲಿ ಮೇಘನಾ ರಾಜ್ ತಂದೆಯ ಪಾತ್ರ ಸೇರಿದಂತೆ ಕನ್ನಡದ 35 ಕ್ಕೂ ಹೆಚ್ಚು ಚಿತ್ರಗಳಲ್ಲಿ ಯೇಸು ಪ್ರಕಾಶ್ ಅಭಿನಯಿಸಿದ್ದಾರೆ.

ಇದನ್ನೂ ಓದಿ – ಆಯನೂರು ಮಂಜುನಾಥ್‌ ವಿರುದ್ಧ ಡಾ. ಧನಂಜಯ ಸರ್ಜಿ ಗರಂ, ತಕ್ಕ ಪಾಠದ ಭವಿಷ್ಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 31, 2024

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ದುರಸ್ತಿ ವೇಳೆ ಲೈನ್‌ ಮ್ಯಾನ್‌ಗೆ ಕರೆಂಟ್‌ ಶಾಕ್‌, ಸ್ಥಳದಲ್ಲೆ ಸಾವು

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

Leave a Comment