Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಎಸ್ಸೆಸ್ಸೆಲ್ಸಿ ಮಕ್ಕಳಿದ್ದ ಬಸ್ ಬರೋ ಹಾದಿಯಲ್ಲಿ ಬಿತ್ತು ಮರ, ಯಶೋಗಾಥೆ ಆಯ್ತು ಚಾಲಕ, ಶಿಕ್ಷಕನ ಕಾರ್ಯ, ಅಷ್ಟಕ್ಕೂ ಏನಾಯ್ತು ಗೊತ್ತಾ?

ಎಸ್ಸೆಸ್ಸೆಲ್ಸಿ ಮಕ್ಕಳಿದ್ದ ಬಸ್ ಬರೋ ಹಾದಿಯಲ್ಲಿ ಬಿತ್ತು ಮರ, ಯಶೋಗಾಥೆ ಆಯ್ತು ಚಾಲಕ, ಶಿಕ್ಷಕನ ಕಾರ್ಯ, ಅಷ್ಟಕ್ಕೂ ಏನಾಯ್ತು ಗೊತ್ತಾ?

27/06/2020 7:18 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SAGARA NEWS | 27 ಜೂನ್ 2020

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

KSRTC ಬಸ್ ಚಾಲಕರೊಬ್ಬರ ಸಮಯಪ್ರಜ್ಞೆಯಿಂದಾಗಿ ಇವತ್ತು 16 ಮಕ್ಕಳು ಸರಿಯಾದ ಸಮಯಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ತಲುಪುವಂತಾಗಿದೆ. ಚಾಲಕ ಮತ್ತು ರೂಟ್ ಆಫೀಸರ್ ಯಶೋಗಾಥೆಗೆ ಶಿಕ್ಷಣ ಇಲಾಖೆಯ ಪ್ರಶಂಸೆ ವ್ಯಕ್ತಪಡಿಸಿದೆ.

ಅಷ್ಟಕ್ಕೂ ಆಗಿದ್ದೇನು?

ಸಾಗರ ತಾಲೂಕಿನ ನಾಗವಳ್ಳಿ ಗ್ರಾಮದ 16 ಎಸ್ಸೆಸ್ಸೆಲ್ಸಿ ಮಕ್ಕಳು ಗಣಿತ ಪರೀಕ್ಷೆ ಬರೆಯಲು ಕಾರ್ಗಲ್‍ನ ಪರೀಕ್ಷಾ ಕೇಂದ್ರಕ್ಕೆ ಬರಬೇಕಿತ್ತು. ನಾಗವಳ್ಳಿಯಿಂದ ಪರೀಕ್ಷಾ ಕೇಂದ್ರವು 50 ಕಿ.ಮೀ ದೂರದಲ್ಲಿದೆ. ಹಾಗಾಗಿ KSRTC ಬಸ್ ವ್ಯವಸ್ಥೆ ಮಾಡಲಾಗಿದೆ. ಇವತ್ತು ಬೆಳಗ್ಗೆ 6.30ಕ್ಕೆ ಮಕ್ಕಳನ್ನು ಹೊತ್ತ ಬಸ್, ನಾಗವಳ್ಳಿಯಿಂದ ಕಾರ್ಗಲ್‍ಗೆ ಬರುತ್ತಿದ್ದಾಗ ಮಾರ್ಗ ಮಧ್ಯೆ ಮರ ಬಿದ್ದಿತ್ತು.

105704050 1153413281686757 3490236949486783871 o.jpg? nc cat=111& nc sid=8024bb& nc ohc=EGPDdv9q9dcAX9Lehao& nc ht=scontent.fblr11 1

ಕೈಯಲ್ಲೇ ರೆಂಬೆ ಮುರಿದರು

ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ಬಸ್ ಮುಂದಕ್ಕೆ ಹೋಗುವುಷ್ಟು ಕಷ್ಟವಿತ್ತು. ರಸ್ತೆಯ ಪಕ್ಕಕ್ಕೆ ಬಸ್ ಇಳಿಸಿದರೆ ಚಕ್ರಗಳು ಮಣ್ಣಿನಲ್ಲಿ ಹುದುಗುವ ಆತಂಕವಿತ್ತು. ಹಾಗಾಗಿ ಚಾಲಕ ಡ್ಯಾನಿ ಫರ್ನಾಂಡಿಸ್ ಬಸ್ಸಿನಿಂದ ಕೆಳಗಿಳಿದು, ಕೈಯಲ್ಲೇ ಮರದ ರೆಂಬೆಗಳನ್ನು ಮರಿಯಲು ಆರಂಭಿಸಿದ್ದರು. ರೂಟ್ ಆಫೀಸರ್ ಆಗಿದ್ದ ನಾಗವಳ್ಳಿ ಶಾಲೆಯ ಶಿಕ್ಷಕರೊಬ್ಬರು ಚಾಲಕನಿಗೆ ನೆರವಾದರು.

ಅಪದ್ಭಾಂದವನಂತೆ ಬಂತು ಬೈಕ್

ಇದೇ ವೇಳೆ ಆ ಮಾರ್ಗವಾಗಿ ಬೈಕ್‍ನಲ್ಲಿ ಬಂದ ವ್ಯಕ್ತಿಯೊಬ್ಬ, ಚಾಲಕ ಮತ್ತು ಶಿಕ್ಷಕನ ಪರಿಸ್ಥಿತಿ ಗಮನಿಸಿ, ನೆರವಿಗೆ ಧಾವಿಸಿದರು. ಶಿಕ್ಷಕರನ್ನು ಕರೆದೊಯ್ದು ಸಮೀಪದ ಹಳ್ಳಿಯೊಂದರಿಂದರಲ್ಲಿ ಪರಿಸ್ಥಿತಿ ವಿವರಿಸಿ, ಮತ್ತಿಬ್ಬರನ್ನು ಕರೆತಂದರು. ಇವರೆಲ್ಲ ಹಿಂತಿರುಗುವವರೆಗೂ ಚಾಲಕ ಡ್ಯಾನಿ ಫರ್ನಾಂಡಿಸ್ ಕೈಯಲ್ಲೆ ಮರದ ರೆಂಬೆ ತುಂಡು ಮಾಡುತ್ತಿದ್ದರು. ಕೊನೆಗೆ ಕೊಡಲಿ ಸಿಗುತ್ತಿದ್ದಂತೆ ಬಸ್ಸು ಹೋಗುವಷ್ಟು ಜಾಗ ಮಾಡಿಕೊಂಡರು.

104412637 1153413371686748 2954863081161173833 o.jpg? nc cat=105& nc sid=8024bb& nc ohc=fG9jQAlc5voAX97sM8l& nc ht=scontent.fblr11 1

ಸರಿಯಾದ ಸಮಯಕ್ಕೆ ಬಂತು ಬಸ್

ಮರ ಬಿದ್ದು ತಡವಾಗುತ್ತೆ ಅನ್ನುವ ಒತ್ತಡದಲ್ಲಿದ್ದ ವಿದ್ಯಾರ್ಥಿಗಳಿಗೆ ಶಿಕ್ಷಕ ಮತ್ತು ಚಾಲಕ ಆತ್ಮವಿಶ್ವಾಸ ತುಂಬಿದ್ದಾರೆ. ಬೆಳಗ್ಗೆ 8.20ರ ಹೊತ್ತಿಗೆ ಕಾರ್ಗಲ್ ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ತಲುಪಿಸಿದ್ದಾರೆ. ಇನ್ನು, ಮಕ್ಕಳಿಗೆ ತೊಂದರೆ ಆಗಬಾರದು ಅಂತಾ ಘಟನೆ ಕುರಿತು ಶಿಕ್ಷಣಾಧಿಕಾರಿಗೆ ಮಾಹಿತಿ ನೀಡಿದ್ದಾರೆ. ಚಾಲಕನ ಸಮಯ ಪ್ರಜ್ಞೆ, ಶಿಕ್ಷಕರು ಮತ್ತು ಗ್ರಾಮಸ್ಥರ ನೆರವಿನಿಂದಾಗಿ 16 ಮಕ್ಕಳು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ತಲುಪಿದ್ದು, ಪರೀಕ್ಷೆ ಬರೆದಿದ್ದಾರೆ.

105598899 1153413068353445 9152158535650424726 n.jpg? nc cat=107& nc sid=8024bb& nc ohc=K2LRbI1XksYAX9ZnSa3& nc ht=scontent.fblr11 1

‘ಮಕ್ಕಳನ್ನು ಸೇಫಾಗಿ ಕರೆದೊಯ್ಯಬೇಕಿತ್ತು’

ಈ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಚಾಲಕ ಡ್ಯಾನಿ ಫರ್ನಾಂಡಿಸ್, ಇಷ್ಟು ವರ್ಷ ಎಸ್ಸೆಸ್ಸೆಲ್ಸಿ ಮಕ್ಕಳು ಹತ್ತು ನಿಮಿಷ, ಕಾಲ್ ಗಂಟೆ ಮುಂಚೆ ಹೋಗಿದ್ದರೆ ಸಾಕಿತ್ತು. ಈಗ ಪರಿಸ್ಥಿತಿ ಬೇರೆ ಇದೆ. ಒಂದು ಗಂಟೆ ಮೊದಲಾದರೂ ಪರೀಕ್ಷಾ ಕೇಂದ್ರ ತಲುಪಬೇಕಿದೆ. ನಮ್ಮ ಹಿರಿಯ ಅಧಿಕಾರಿಗಳು ನಮ್ಮ ಜವಾಬ್ದಾರಿ ಬಗ್ಗೆ ತಿಳಿಸಿದ್ದಾರೆ. ತುಂಬಾ ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ. ಮಕ್ಕಳನ್ನು ಸರಿಯಾದ ಸಮಯಕ್ಕೆ ತಲುಪಿಸಬೇಕಿತ್ತು. ಅದನ್ನು ನಿಭಾಯಿಸಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

ಯಶೋಗಾಥೆಗೆ ಇಲಾಖೆ ಪ್ರಶಂಸೆ

ಮತ್ತೊಂದೆಡೆ ಚಾಲಕ ಮತ್ತು ರೂಟ್ ಆಫೀಸರ್ ಸಾಹಸಗಾಥೆಯನ್ನು ಶಿಕ್ಷಣ ಇಲಾಖೆ ಯಶೋಗಾಥೆ ಎಂದು ಬಣ್ಣಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಸಾಗರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ, ಚಾಲಕ ಮತ್ತು ರೂಟ್ ಆಫೀಸರ್ ಕಾರ್ಯಕ್ಕೆ ಅಭಿನಂದನೆ ಸಲ್ಲಿಸಿದೆ. ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | [email protected]

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 270620 Gopalagowda Layout Seal Down in Shimoga 1 ಶಿವಮೊಗ್ಗ ನಗರದ ಮತ್ತೆರಡು ರಸ್ತೆಗಳು ಇವತ್ತು ಸೀಲ್ ಡೌನ್, ಶುರುವಾಯ್ತು ಸ್ಯಾನಿಟೈಸೇಷನ್
Next Article Mc Gann Hospital Building ಶಿವಮೊಗ್ಗ ಜಿಲ್ಲೆಯಲ್ಲಿ ಒಂದೇ ದಿನ 13 ಮಂದಿಗೆ ಕರೋನ, ಸೋಂಕು ಹರಡಲು ಕಾರಣ ತಿಳಿಸದ ಸರ್ಕಾರ, ಹೆಚ್ಚಾಯ್ತು ಆತಂಕ

ಇದನ್ನೂ ಓದಿ

Tiranaga-Yathre-at-sagara-BY-Raghavendra-and-Halappa - Indian Flag
SAGARA

ಸಾಗರದಲ್ಲಿ ಒಂದು ಕಿ.ಮೀ ಉದ್ದದ ತ್ರಿವರ್ಣ ಧ್ವಜ ಹೊತ್ತು ಸಾಗಿದ ಜನ, ಹೇಗಿತ್ತು ಮೆರವಣಿಗೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
20/05/2025
Former-Minister-Haratalu-Halappa-BJP
SAGARA

ಸಾಗರದಲ್ಲಿ ಒಂದು ಕಿ.ಮೀ ಉದ್ದದ ರಾಷ್ಟ್ರಧ್ವಜದ ಮೆರವಣಿಗೆ, ಸಾರ್ವಜನಿಕ ಸಭೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/05/2025
SAGARA-NEWS-UPDATE
SAGARA

ಶರಾವತಿ ಹಿನ್ನೀರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
Minister-Madhu-Bangarappa-Press-meet-about-budget
SAGARA

ಜೋಗ ಜಲಪಾತಕ್ಕೆ ಇವತ್ತು ಮಿನಿಸ್ಟರ್‌ ಭೇಟಿ, ಅಧಿಕಾರಿಗಳ ಜೊತೆಗೆ ಮಹತ್ವದ ಮೀಟಿಂಗ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
MP-BY-Raghavendra-visits-Siganduru-Bridge
SAGARA

ಸಿಗಂದೂರು ಸೇತುವೆ ಮೇಲೆ ಕಾರಿನಲ್ಲಿ ಸಂಸದ ರಾಘವೇಂದ್ರ ಸಂಚಾರ, ಪರಿಶೀಲನೆ ಬಳಿಕ ಹೇಳಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
SAGARA-NEWS-UPDATE
SAGARA

ಬಸ್‌ ಇಳಿದು ರಸ್ತೆ ದಾಟುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಬೈಕ್‌ ಡಿಕ್ಕಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?