ಸಿಗಂದೂರಿಗೆ ಹೊಸ ಬಸ್‌, ಸಾಗರಕ್ಕೆ ನಗರ ಸಾರಿಗೆ ಆರಂಭ, ಎಲ್ಲೆಲ್ಲಿ ಸಂಚರಿಸಲಿದೆ ಸಿಟಿ ಬಸ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಸಾಗರ: ಸಿಗಂದೂರು (Siganduru) ಸೇತುವೆ ಆದ ನಂತರ ಹಿನ್ನೀರು ಭಾಗದ ಮಹಿಳೆಯರು ನಮ್ಮ ಭಾಗಕ್ಕೆ ಸರ್ಕಾರಿ ಬಸ್ ಬರುತ್ತಿಲ್ಲ. ಇದರಿಂದ ಗ್ಯಾರಂಟಿ ಸೌಲಭ್ಯ ನಮಗೆ ಪಡೆಯಲು ಆಗುತ್ತಿಲ್ಲ ಎಂದು ದೂರಿದ್ದರು. ಇದನ್ನು ಮನಗಂಡು ಸಿಗಂದೂರಿಗೆ ನೂತನ ಬಸ್ ಸೌಲಭ್ಯ ಒದಗಿಸಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಇಲ್ಲಿನ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಸಾಗರ – ಸಿಗಂದೂರು ಮತ್ತು ಸಾಗರ ನಗರ ಸಾರಿಗೆ ಬಸ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.

MLA-Beluru-Gopalakrishna-inaugurates-KSRTC-Bus.

ಈ ತನಕ ಬಸ್ ಸೌಲಭ್ಯವನ್ನೇ ಕಾಣದ ಕುಗ್ರಾಮ ಮರಾಠಿಗೆ ಬಸ್ ಸೌಲಭ್ಯ ಸಿಕ್ಕಂತೆ ಆಗಿದೆ. ಜನರಿಗೆ ಸಾರಿಗೆ ಸಂಪರ್ಕ ಸಿಕ್ಕರೆ ಅವರ ಬದುಕು ಸುಧಾರಿಸುತ್ತದೆ ಎಂದು ತಿಳಿಸಿದರು.

ಒಂದು ನಗರ ಸಾರಿಗೆ ಆರಂಭ

ನಗರ ಸಾರಿಗೆಗಾಗಿ ಸಾರಿಗೆ ಸಚಿವರಿಗೆ ಮನವಿ ಮಾಡಿಕೊಂಡ ಮೇರೆಗೆ ಒಂದು ನಗರ ಸಾರಿಗೆ ಬಸ್‌ಗೆ ಅವಕಾಶ ಕಲ್ಪಿಸಿದ್ದಾರೆ. ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರು ಓಡಾಡಲು ಇದರಿಂದ ಅನುಕೂಲವಾಗಲಿದೆ. ರಾಮನಗರ, ಇಕ್ಕೇರಿ ವೃತ್ತ, ಜೋಗ ರಸ್ತೆ ಸೇರಿ ಬೇರೆಬೇರೆ ಭಾಗಗಳಲ್ಲಿ ನಗರ ಸಾರಿಗೆ ಸಂಚರಿಸಲಿದೆ. ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತವಾಗಿ ಸಂಚರಿಸಲು ಅವಕಾಶವಿದೆ ಎಂದು ಹೇಳಿದರು.

ಇದನ್ನೂ ಓದಿ – ಮಹಿಳೆಯರೆ ಹುಷಾರ್‌, ಶಿವಮೊಗ್ಗದಲ್ಲಿ ಡಬ್ಬಿ ಚಮತ್ಕಾರ, ಮರಳಾದರೆ ಚಿನ್ನಾಭರಣವೇ ಮಾಯ, ಏನಿದು?

ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಆರ್.ಜಯಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ಸುರೇಶ್ ಬಾಬು, ಗಣಪತಿ ಮಂಡಗಳ, ಚೇತನರಾಜ್ ಕಣ್ಣೂರು ಮತ್ತಿತರರು ಹಾಜರಿದ್ದರು.

JNNCE-COLLEGE-ADVT.

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment