ಕೆಎಫ್‌ಡಿ ಸೋಂಕು, ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಬ್ಬರು ಸಾವು, ಸದ್ಯ ಸೋಂಕಿತರ ಸಂಖ್ಯೆ ಎಷ್ಟಿದೆ?

Published On : ಏಪ್ರಿಲ್ 9, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಕೆಎಫ್‌ಡಿ ಅಟ್ಟಹಾಸ ಮುಂದುವರಿದಿದ್ದು, ಸೋಂಕಿಗೆ ತುತ್ತಾಗಿದ್ದ ಸಾಗರ ತಾಲೂಕಿನ 72 ವರ್ಷದ ವೃದ್ಧ ಗುರುವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ (death toll).

ಸಾಗರ ತಾಲೂಕಿನ ಮಂಜಿನಕಾನು ಹೀರೆಮನೆಯ ಮಂಜಪ್ಪ (72) ಮೃತಪಟ್ಟವರು. ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದ ಇವರನ್ನು ಏಪ್ರಿಲ್ 4 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಯ ವೇಳೆ ಕೆಎಫ್‌ಡಿ ಸೋಂಕು ದೃಢಪಟ್ಟ ಹಿನ್ನೆಲೆ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ನಾಲ್ಕಕ್ಕೇರಿದ ಸಾವಿನ ಸಂಖ್ಯೆ

Health-Department-Shimoga-office

2026ರ ಸಾಲಿನಲ್ಲಿ ಕೆಎಫ್‌ಡಿ ಸೋಂಕಿಗೆ ಬಲಿಯಾದವರ ಸಂಖ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ನಾಲ್ಕಕ್ಕೇರಿದೆ. ಈ ವರ್ಷ ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 85 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಮಲೆನಾಡಿಗರನ್ನು ಆತಂಕಕ್ಕೆ ತಳ್ಳಿದೆ.

ಇದನ್ನೂ ಓದಿ : KFD ಸೋಂಕಿಗೆ ಮೊದಲ ಬಲಿ, ತೀರ್ಥಹಳ್ಳಿಯ ಯುವಕ ಮಣಿಪಾಲದಲ್ಲಿ ಸಾವು

ಸದ್ಯ ಜಿಲ್ಲೆಯಲ್ಲಿ 11 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಸೋಂಕಿತರ ಮೇಲೆ ನಿಗಾ ಇರಿಸಿದ್ದಾರೆ.

JNN College of Engineering Admissions started

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಏಪ್ರಿಲ್ 9, 2026

Leave a Comment