ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಕೆಎಫ್ಡಿ ಅಟ್ಟಹಾಸ ಮುಂದುವರಿದಿದ್ದು, ಸೋಂಕಿಗೆ ತುತ್ತಾಗಿದ್ದ ಸಾಗರ ತಾಲೂಕಿನ 72 ವರ್ಷದ ವೃದ್ಧ ಗುರುವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ (death toll).
ಸಾಗರ ತಾಲೂಕಿನ ಮಂಜಿನಕಾನು ಹೀರೆಮನೆಯ ಮಂಜಪ್ಪ (72) ಮೃತಪಟ್ಟವರು. ವಾಂತಿ ಮತ್ತು ಭೇದಿಯಿಂದ ಬಳಲುತ್ತಿದ್ದ ಇವರನ್ನು ಏಪ್ರಿಲ್ 4 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆಯ ವೇಳೆ ಕೆಎಫ್ಡಿ ಸೋಂಕು ದೃಢಪಟ್ಟ ಹಿನ್ನೆಲೆ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅವರು ಕೊನೆಯುಸಿರೆಳೆದಿದ್ದಾರೆ.
ನಾಲ್ಕಕ್ಕೇರಿದ ಸಾವಿನ ಸಂಖ್ಯೆ
2026ರ ಸಾಲಿನಲ್ಲಿ ಕೆಎಫ್ಡಿ ಸೋಂಕಿಗೆ ಬಲಿಯಾದವರ ಸಂಖ್ಯೆ ಶಿವಮೊಗ್ಗ ಜಿಲ್ಲೆಯಲ್ಲಿ ನಾಲ್ಕಕ್ಕೇರಿದೆ. ಈ ವರ್ಷ ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 85 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಮಲೆನಾಡಿಗರನ್ನು ಆತಂಕಕ್ಕೆ ತಳ್ಳಿದೆ.
ಸದ್ಯ ಜಿಲ್ಲೆಯಲ್ಲಿ 11 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಸೋಂಕಿತರ ಮೇಲೆ ನಿಗಾ ಇರಿಸಿದ್ದಾರೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ