ಲಿಂಗನಮಕ್ಕಿ ಚಲೋ, ಸಾಗರದಿಂದ ಆರಂಭವಾದ ಪಾದಯಾತ್ರೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SAGARA NEWS, 24 OCTOBER 2024 : ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಮುಷ್ಕರ ಇವತ್ತು ಮಹತ್ವದ ಘಟ್ಟಕ್ಕೆ ತಲುಪಿದೆ. ದೊಡ್ಡ ಸಂಖ್ಯೆಯ ರೈತರು (Farmers) ಲಿಂಗನಮಕ್ಕಿ ಚಲೋ ಪಾದಯಾತ್ರೆ ನಡೆಸಿದರು.

ಕೆಳೆದ ಮೂರು ದಿನದಿಂದ ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ರೈತರು ಅಹೋರಾತ್ರಿ ಹೋರಾಟ ನಡೆಸುತ್ತಿದ್ದರು. ಆದರೆ ಸರ್ಕಾರ ಸೂಕ್ತ ಸ್ಪಂದನೆ ನೀಡದ ಹಿನ್ನೆಲೆ ರೈತರು ಈ ಹಿಂದೆ ಘೋಷಿಸಿದಂತೆ ಲಿಂಗನಮಕ್ಕಿ ಜಲಾಶಯದತ್ತ ಪಾದಯಾತ್ರೆ ಆರಂಭಿಸಿದರು. ಇವತ್ತು ತಾಳಗುಪ್ಪದವರೆಗೆ ಪಾದಯಾತ್ರೆ ಸಾಗಿತು.

Farmers-padayatre-to-lingnamakki-dam

ರೈತರ ಬೇಡಿಕೆಗಳು ಏನು?

ಮುಳುಗಡೆ ಸಂತ್ರಸ್ತರಿಗೆ, ಅರಣ್ಯ ಭೂಮಿ ಸಾಗುವಳಿದಾರರಿಗೆ ಭೂಮಿ ಹಕ್ಕು ನೀಡಬೇಕು. ಇದಕ್ಕಾಗಿ ಟಾಸ್ಕ್‌ಫೋರ್ಸ್‌ ರಚನೆ ಮಾಡಬೇಕು. ಭೂಮಿ ಹಕ್ಕಿನಿಂದ ವಂಚಿತವಾಗಿರುವ ರೈತರಿಗೆ ನ್ಯಾಯ ಸಿಗಬೇಕು ಎಂದು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ರೈತರು ಪಕ್ಷಾತೀತ ಹೋರಾಟ ಆರಂಭಿಸಿದ್ದಾರೆ.

ಕಳೆದ ಮೂರು ದಿನ ಏನೆಲ್ಲ ಆಯ್ತು?

ಅಕ್ಟೋಬರ್‌ 21 : ಸಾಗರದ ಮಹಾ ಗಣಪತಿ ದೇವಸ್ಥಾನದಿಂದ ರೈತರು ಮೆರವಣಿಗೆ ನಡೆಸಿದರು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೋರಾಟಕ್ಕೆ ಚಾಲನೆ ನೀಡಿದರು. ಸಾಗರ, ಸೊರಬ, ಹೊಸನಗರ, ಶಿವಮೊಗ್ಗ ತಾಲೂಕಿನ ರೈತರು ಹೋರಾಟದಲ್ಲಿ ಭಾಗವಹಿಸಿದ್ದರು. ಸಾಗರ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಅನಿರ್ದಿಷ್ಟಾವಧಿ ಸತ್ಯಾಗ್ರಹ ಆರಂಭಿಸಲಾಯಿತು.

Farmers padyathre

ಅಕ್ಟೋಬರ್‌ 22 : ಜಿಲ್ಲಾಧಿಕಾರಿ ರಜೆ ಹಿನ್ನೆಲೆ ಜಿಲ್ಲಾ ಪಂಚಾಯಿತಿ ಸಿಇಒ ಹೇಮಂತ್‌ ಕುಮಾರ್‌ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ಟಾಸ್ಕ್‌ ಫೊರ್ಸ್‌ ರಚನೆಗೆ ಜಿಲ್ಲಾಧಿಕಾರಿ ಅವರು ಸರ್ಕಾರಕ್ಕೆ ಪತ್ರ ಬರೆಯಲಿದ್ದಾರೆ. ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು. ಈ ಸಂದರ್ಭ ರೈತರು ಸಿಇಒಗೆ ಮುತ್ತಿಗೆ ಹಾಕಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇನ್ನು, ಸಂಸದ ರಾಘವೇಂದ್ರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಮಲೆನಾಡ ಸಂಸದರ ನಿಯೋಗ ಕೊಂಡೊಯ್ದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.

ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಗುಡ್‌ ನ್ಯೂಸ್‌ ನೀಡಿದ ಡಿಜಿಸಿಎ

ಅಕ್ಟೋಬರ್‌ 23 : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ಅಧಿಕಾರಿಗಳ ಜೊತೆಗೆ ಚರ್ಚಿಸುವ ಭರವಸೆ ನೀಡಿದರು.  ಇನ್ನು, ಸರ್ಕಾರಗಳು ತಮ್ಮ ಬೇಡಿಕೆ ಈಡೇರಿಸುವತ್ತ ಗಮನ ಹರಿಸದ ಹಿನ್ನೆಲೆ ಲಿಂಗನಮಕ್ಕಿ ಚಲೋ ಮಾಡಲು ನಿರ್ಧಾರ ಘೋಷಿಸಿದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 24, 2024

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment