ಸಾಗರ:ಲಿಂಗನಮಕ್ಕಿ ಜಲಾಶಯದ (Linganamakki Dam) ಐದು ರೇಡಿಯಲ್ ಗೇಟ್ಗಳನ್ನು ಇಂದು ಪುನಃ ಮೇಲೆತ್ತಲಾಯಿತು. 3500 ಕ್ಯೂಸೆಕ್ ನೀರನ್ನು ಹೊರಬಿಡಲಾಯಿತು.
ಸಚಿವ ಮಧು ಬಂಗಾರಪ್ಪ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ, ವಿಧಾನ ಪರಿಷತ್ ಸದಸ್ಯೆ ಬಲ್ಕಿಸ್ ಬಾನು ರೇಡಿಯಲ್ ಗೇಟ್ಗಳನ್ನು ಮೇಲೆತ್ತುವ ಸ್ವಿಚ್ ಒತ್ತಿದರು. ಜಲಾಶಯದಿಂದ ಕೆಲಕಾಲ ನೀರು ಹೊರಗೆ ಹಾಯಿಸಲಾಯಿತು.
ಇವತ್ತು ಲಿಂಗನಮಕ್ಕಿ ಜಲಾಶಯಕ್ಕೆ 12,568 ಕ್ಯೂಸೆಕ್ ಒಳ ಹರಿವು ಇತ್ತು. ಒಟ್ಟು 8,612 ಕ್ಯೂಸೆಕ್ ನೀರು ಹೊರ ಹರಿವು ಇದೆ. ನೀರಿನ ಮಟ್ಟ 1817 ಅಡಿ ಇದೆ. ಇಲ್ಲಿವೆ ಇಂದಿನ ಫೋಟೊಗಳು.
Linganamakki Dam Gates Opened
ಸಚಿವ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಲ್ಕಿಸ್ ಬಾನು ಅವರು ಲಿಂಗನಮಕ್ಕಿ ಜಲಾಶಯಕ್ಕೆ ಪುಷ್ಪ ನಮನ ಸಲ್ಲಿಸಿದರು.ಲಿಂಗನಮಕ್ಕಿ ಡ್ಯಾಮ್ನ ಪ್ರತಿ ಗೇಟ್ ತೆರೆದಾಗಲು ಜನರು ಕೂಗಿ ಖುಷಿ ಪಟ್ಟರು.ಲಿಂಗನಮಕ್ಕಿ ಜಲಾಶಯದ ಐದು ಗೇಟ್ಗಳ ಮೂಲಕ ನೀರು ಹೊರಕ್ಕೆ.ಜಲಾಶಯದಿಂದ ನೀರು ಹೊರಬಿಡುವಾಗ ಸೆಲ್ಫಿ ಕ್ಲಿಕ್ಕಿಸಿಕೊಂಡ ಕುಟುಂಬ.ಲಿಂಗನಮಕ್ಕಿ ಜಲಾಶಯದ ಮುಂದೆ ಸ್ನೇಹಿತರ ಸೆಲ್ಫಿಲಿಂಗನಮಕ್ಕಿ ಜಲಾಶಯದ ಮುಂದೆ ಪುಟಾಣಿಯ ಪೋಸ್ಲಿಂಗನಮಕ್ಕಿ ಜಲಾಶಯದ ಹಿನ್ನೀರುಲಿಂಗನಮಕ್ಕಿ ಡ್ಯಾಮ್ ಮುಂಭಾಗ ಯುವತಿಯರ ಸೆಲ್ಫಿ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?