ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಸಾಗರ: ತಾಲೂಕಿನ ಕುಡಿಗೆರೆ ಗ್ರಾಮದಲ್ಲಿ  ಅಕ್ರಮವಾಗಿ ಜಂಬಿಟ್ಟಿಗೆ ಕಲ್ಲು (Laterite Stone) ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಅಕ್ರಮ ಚಟುವಟಿಕೆಯಿಂದ ಸರ್ಕಾರಕ್ಕೆ ಸುಮಾರು ₹1,42,800 ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಲಾರಿಯಲ್ಲಿ ಜಂಬಿಟ್ಟಿಗೆ ಕಲ್ಲುಗಳನ್ನು ತುಂಬಲಾಗುತ್ತಿತ್ತು. ಅಧಿಕಾರಿಗಳನ್ನು ಕಂಡೊಡನೆ ಲಾರಿ ಚಾಲಕ ಮತ್ತು ಅಲ್ಲಿದ್ದವರು ವಾಹನ ಬಿಟ್ಟು ಓಡಿ ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಅಕ್ರಮ ಗಣಿಗಾರಿಕೆ ಸಂಬಂಧ ಜಮೀನು ಮಾಲೀಕ, ಲಾರಿ ಮಾಲೀಕ, ಚಾಲಕ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.

Sunrise Facility Services, Sri sai Trust Shimoga
ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : March 19, 2026 at 9:30 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 19, 2026

Leave a Comment