ಶಿವಮೊಗ್ಗ ಲೋಕಾಯುಕ್ತ ಪೊಲೀಸರ ದಾಳಿ, ಲಂಚದ ಹಣ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಅಧಿಕಾರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 9 DECEMBER 2022

ಸಾಗರ : ಲಂಚ ಪಡೆಯುತ್ತಿದ್ದ ವೇಳೆ ಅಧಿಕಾರಿಯೊಬ್ಬನ ಮೇಲೆ ಲೋಕಾಯುಕ್ತ ದಾಳಿಯಾಗಿದೆ (lokayuktha raid). ಸರ್ವೆಯರ್ ರಂಗನಾಥ್ ಹಣ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

Shimoga Nanjappa Hospital

ಸಾಗರದ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸರ್ವೇಯರ್ ರಂಗನಾಥ್ ಲೋಕಾಯುಕ್ತ ಬಲೆಗೆ ಬಿದಿದ್ದಾರೆ. ಗುರುವಾರ ಸಂಜೆ ಲಂಚದ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

(lokayuktha raid)

ಮೊದಲು 500 ರೂ. ಪಡೆದಿದ್ದ

ಸಾಗರದಲ್ಲಿ ಹಾರ್ಡ್ ವೇರ್ ಶಾಪ್ ನಡೆಸುತ್ತಿರುವ ಉಮೇಶ್ ಅವರ ತಾಯಿ ಹೆಸರಿನಲ್ಲಿ ತ್ಯಾಗರ್ತಿಯಲ್ಲಿ ಸೈಟ್ ಇದೆ. ಅದಕ್ಕೆ ಈ ಸ್ವತ್ತು ಮಾಡಿಸಲು ಅರ್ಜಿ ಸಲ್ಲಿಸಿದ್ದರು. ಇದಕ್ಕಾಗಿ 800 ರೂ.ಗಳನ್ನು ಕಟ್ಟಿದ್ದರು. ಇದರ ಕಡತ ಸರ್ವೇಯರ್ ರಂಗನಾಥ್ ಅವರ ಬಳಿ ಇತ್ತು. ಆ ಸೈಟಿನ ಸರ್ವೆ ಮಾಡಲು ಸರ್ವೇಯರ್ ರಂಗನಾಥ್ 5 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಆಗ ಉಮೇಶ್ ತಮ್ಮ ಬಳಿ ಇದ್ದ 500 ರುಪಾಯಿಯನ್ನು ರಂಗನಾಥ್ ಗೆ ಕೊಟ್ಟಿದ್ದರು.

(lokayuktha raid)

ಮೊಬೈಲ್ ನಲ್ಲಿ ರೆಕಾರ್ಡ್ ಆಗಿತ್ತು

ಸರ್ವೆ ಮಾಡುವ ಕುರಿತು ಉಮೇಶ್ ಅವರು ಡಿ.6ರಂದು ರಂಗನಾಥ್ ಗೆ ಕರೆ ಮಾಡಿದ್ದರು. ಆಗ ಉಮೇಶ್ ಅವರನ್ನು ತನ್ನ ಮನೆಗೆ ಕರೆಯಿಸಿಕೊಂಡ ರಂಗನಾಥ್, ‘5 ಸಾವಿರ ಅಲ್ಲದಿದ್ದರೆ 3 ಸಾವಿರ ರೂ. ಕೊಡುವಂತೆ’ ಸೂಚಿಸಿದ್ದಾನೆ ಎಂದು ಲೋಕಾಯುಕ್ತ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಈ ವೇಳೆ ರಂಗನಾಥ್ ಬಳಿ 1 ಸಾವಿರ ರೂ. ಹಣವಿತ್ತು. ಅದನ್ನು ಅವರು ರಂಗನಾಥ್ ಗೆ ಕೊಟ್ಟಿದ್ದಾರೆ. ಆಗ ರಂಗನಾಥ್ ಇನ್ನೂ 1,500 ರೂ. ಬೇಕು ಎಂದು ತಿಳಿಸಿದ್ದಾರೆ. ಉಮೇಶ್ ಅವರು ಇದನ್ನೆಲ್ಲ ತಮ್ಮ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದರು.

(lokayuktha raid)

ಪ್ರಕರಣ ದಾಖಲಿಸಿಕೊಂಡು ದಾಳಿ

ಉಮೇಶ್ ಅವರು ತಮ್ಮ ಮೊಬೈಲ್ ನಲ್ಲಿ ರೆಕಾರ್ಡ್ ಆಗಿದ್ದ ವಿಡಿಯೋವನ್ನು ಲೋಕಯುಕ್ತ ಅಧಿಕಾರಿಗಳಿಗೆ ತೋರಿಸಿದ್ದರು. ಲಂಚ ಪಡೆದಿರುವುದು ಮತ್ತು ಹೆಚ್ಚುವರಿ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಮೊಬೈಲ್ ವಿಡಿಯೋದಿಂದ ಸಾಬೀತಾಗಿತ್ತು. ಈ ಹಿನ್ನೆಲೆ ಸರ್ವೇಯರ್ ರಂಗನಾಥ್ ವಿರುದ್ಧ ಶಿವಮೊಗ್ಗ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಯಿತು.

ಗುರುವಾರ ಸಂಜೆ ಸಾಗರದಲ್ಲಿರುವ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಸರ್ವೇಯರ್ ರಂಗನಾಥ್ ಗೆ ಉಮೇಶ್ ಅವರು 1500 ರೂ. ಲಂಚ ಕೊಟ್ಟಿದ್ದಾರೆ. ಆಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ರಂಗನಾಥ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಹಣವನ್ನು ವಶಕ್ಕೆ ಪಡೆದು, ರಂಗನಾಥ್ ನನ್ನು ಬಂಧಿಸಲಾಗಿದೆ.

[su_animate type=”bounceInUp”][su_button url=”https://chat.whatsapp.com/KChu2C1bGTM2v9HmZlfIkS” target=”blank” style=”glass” background=”#0b00a1″ color=”#ffffff” size=”6″ wide=”yes” radius=”10″ icon=”https://shivamoggalive.com/wp-content/uploads/2022/11/Whatspp-Logo.png”]CLICK & JOIN – SHIVAMOGGA LIVE COMMUNITY[/su_button][/su_animate]

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ ಅವರ ಮಾರ್ಗದರ್ಶನದಲ್ಲಿ ಟ್ರ್ಯಾಪ್ ಕಾರ್ಯಾಚರಣೆ ನಡೆಸಲಾಯಿತು. ಲೋಕಾಯುಕ್ತ ಡಿ.ವೈ.ಎಸ್.ಪಿ ಮೃತ್ಯುಂಜಯ, ಇನ್ಸ್ ಪೆಕ್ಟರ್ ಹೆಚ್.ರಾಧಾಕೃಷ್ಣ, ಸಿಬ್ಬಂದಿ ಎಸ್.ಕೆ.ಪ್ರಸನ್ನ, ವಿ.ಎ.ಮಹಾಂತೇಶ, ಬಿ.ಲೋಕೇಶಪ್ಪ, ಸಾವಿತ್ರಮ್ಮ, ಪುಟ್ಟಮ್ಮ, ಚನ್ನೇಶ, ಪ್ರಶಾಂತ್ ಕುಮಾರ್, ಅರುಣ್ ಕುಮಾರ್, ತರುಣ್ ಕುಮಾರ್, ಪ್ರದೀಪ್, ಬಿ.ಕೆ.ಗಂಗಾಧರ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ದರೋಡೆಗೆ ಪ್ಲಾನ್, ತಲ್ವಾರ್, ರಾಡ್, ಖಾರದ ಪುಡಿ ಸಹಿತ ಸಿಕ್ಕಿಬಿದ್ದ ಟೀಮ್

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 9, 2022

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

Leave a Comment