ಸಾಗರ: ಸಿಗಂದೂರು ಸೇತುವೆಯ (Bridge) ಅಂಬಾರಗೋಡ್ಲು ಭಾಗದಲ್ಲಿ ಗೇಟ್ ಸಿಬ್ಬಂದಿಗೆ ಈಚೆಗೆ ಪ್ರವಾಸಿಗರೊಬ್ಬರು ಮಚ್ಚು ತೋರಿಸಿ ಬೆದರಿಸಿದ್ದಾರೆ ಎಂದು ಆರೋಪಿಸಲಾಗಿದೆ. ಕೂಡಲೆ ಪ್ರವಾಸಿಗನನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು.
ಧಾರವಾಡ ಮೂಲದ ಪ್ರವಾಸಿಗನೊಬ್ಬ ಕುಟುಂಬ ಸಹಿತ ಕಾರಿನಲ್ಲಿ ಸಿಗಂದೂರಿಗೆ ಬಂದಿದ್ದರು. ಕಾರುಗಳನ್ನು ಸರದಿಯಲ್ಲಿ ಬಿಡುವ ವಿಚಾರದಲ್ಲಿ ಜಗಳವಾಗಿದೆ. ಈ ಸಂದರ್ಭ ಪ್ರವಾಸಿಗ ಮಚ್ಚು ತೋರಿಸಿ ಬೆದರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಕೂಡಲೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.
ಗೇಟ್ ಸಿಬ್ಬಂದಿ ದೂರು ನೀಡದ ಹಿನ್ನೆಲೆ, ಪ್ರವಾಸಿಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು, ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
ಇದನ್ನೂ ಓದಿ » ವಾಟ್ಸಪ್ ಗ್ರೂಪ್ ಅಡ್ಮಿನ್ಗೆ ಮೆಸೇಜ್ ಮಾಡಿದ್ದ ಟೀಚರ್ಗೆ ಕಾದಿತ್ತು ಆಘಾತ, ಠಾಣೆಗೆ ದೌಡು, ಆಗಿದ್ದೇನು?


ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200

