| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಸಾಗರ: ಮುಂಬರುವ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಲೆನಾಡಿನ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಶೇಷ ಕಾಲವಕಾಶ ಕೋರಿ ಮಲೆನಾಡು ಭಾಗದ ಶಾಸಕರಿಂದ ಸ್ಪೀಕರ್ಗೆ ಪತ್ರ ಬರೆಯಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಸಾಗರದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಕ್ಕುಪತ್ರ, ವನ್ಯಜೀವಿಗಳ ಉಪಟಳ, ಅಡಿಕೆಗೆ ರೋಗಬಾಧೆ ಮತ್ತಿತರ ಸಮಸ್ಯೆಗಳು ಮಲೆನಾಡು ಜನರನ್ನು ಪ್ರತಿನಿತ್ಯ ಕಾಡುತ್ತಿವೆ. ಈ ಬಗ್ಗೆ ಶಾಸನ ಸಭೆಯಲ್ಲಿ ವಿವರವಾಗಿ ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಲೆನಾಡು ಭಾಗದ ಶಾಸಕರೆಲ್ಲರೂ ಪಕ್ಷಾತೀತವಾಗಿ ಸಹಿ ಮಾಡಿ ಸ್ಪೀಕರಿಗೆ ಪತ್ರ ತಲುಪಿಸಿದ್ದೇವೆ ಎಂದರು.
ಮಾನವ-ವನ್ಯಜೀವಿ ಸಂಘರ್ಷ ಈಚೆಗೆ ತೀವ್ರವಾಗಿದೆ. ವನ್ಯಜೀವಿಗಳಿಂದ ಆದ ನಷ್ಟಕ್ಕೆ ಸರ್ಕಾರ ಪರಿಹಾರ ನೀಡುತ್ತಿದೆ. ಮಂಗಗಳ ಹಿಡಿದು ದೊಡ್ಡ ಅರಣ್ಯಗಳಿಗೆ ಬಿಡಲು ಅವಕಾಶ ನೀಡಲಾಗಿದೆ. ಮಂಗನ ಪಾರ್ಕ್ ಬಗ್ಗೆ ಮಾಹಿತಿ ಇಲ್ಲ. ಅದು ನಮ್ಮ ಯೋಜನೆಯೂ ಅಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
![]()
ಇದನ್ನೂ ಓದಿ » ಶಿವಮೊಗ್ಗದ FDA ಬಳಿ ಕೋಟಿ ಕೋಟಿಯ ಆಸ್ತಿ, ಲೋಕಾಯುಕ್ತ ದಾಳಿಯಲ್ಲಿ ಏನೇನೆಲ್ಲ ಸಿಕ್ತು?
ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಲಸೆ ಚಂದ್ರಪ್ಪ, ಪ್ರಮುಖರಾದ ಗಣಪತಿ ಮಂಡಗಳಲೆ, ಜಾಕೀರ್ ಉಪಸ್ಥಿತರಿದ್ದರು.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
- ಅಡಿಕೆ ಧಾರಣೆ | 4 ಡಿಸೆಂಬರ್ 2025 | ಯಾವ್ಯಾವ ಅಡಿಕೆಗೆ ಎಷ್ಟಿತ್ತು ರೇಟ್?
- ಶಿವಮೊಗ್ಗ ಸಿಟಿಯ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್ ಇರಲ್ಲ
![]()