ಮಲೆನಾಡು ಶಾಸಕರಿಂದ ವಿಧಾನಸಭೆ ಸ್ಪೀಕರ್‌ಗೆ ಪತ್ರ, ಏನಿದೆ ಪತ್ರದಲ್ಲಿ? ಎಂಎಲ್‌ಎ ಹೇಳಿದ್ದೇನು?

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಸಾಗರ: ಮುಂಬರುವ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಮಲೆನಾಡಿನ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಶೇಷ ಕಾಲವಕಾಶ ಕೋರಿ ಮಲೆನಾಡು ಭಾಗದ ಶಾಸಕರಿಂದ ಸ್ಪೀಕರ್‌ಗೆ ಪತ್ರ ಬರೆಯಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

ಸಾಗರದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಕ್ಕುಪತ್ರ, ವನ್ಯಜೀವಿಗಳ ಉಪಟಳ, ಅಡಿಕೆಗೆ ರೋಗಬಾಧೆ ಮತ್ತಿತರ ಸಮಸ್ಯೆಗಳು ಮಲೆನಾಡು ಜನರನ್ನು ಪ್ರತಿನಿತ್ಯ ಕಾಡುತ್ತಿವೆ. ಈ ಬಗ್ಗೆ ಶಾಸನ ಸಭೆಯಲ್ಲಿ ವಿವರವಾಗಿ ಚರ್ಚಿಸಿ, ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮಲೆನಾಡು ಭಾಗದ ಶಾಸಕರೆಲ್ಲರೂ ಪಕ್ಷಾತೀತವಾಗಿ ಸಹಿ ಮಾಡಿ ಸ್ಪೀಕರಿಗೆ ಪತ್ರ ತಲುಪಿಸಿದ್ದೇವೆ ಎಂದರು.

ಮಾನವ-ವನ್ಯಜೀವಿ ಸಂಘರ್ಷ ಈಚೆಗೆ ತೀವ್ರವಾಗಿದೆ. ವನ್ಯಜೀವಿಗಳಿಂದ ಆದ ನಷ್ಟಕ್ಕೆ ಸರ್ಕಾರ ಪರಿಹಾರ ನೀಡುತ್ತಿದೆ. ಮಂಗಗಳ ಹಿಡಿದು ದೊಡ್ಡ ಅರಣ್ಯಗಳಿಗೆ ಬಿಡಲು ಅವಕಾಶ ನೀಡಲಾಗಿದೆ. ಮಂಗನ ಪಾರ್ಕ್ ಬಗ್ಗೆ ಮಾಹಿತಿ ಇಲ್ಲ. ಅದು ನಮ್ಮ ಯೋಜನೆಯೂ ಅಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

Sagara-Beluru-Gopalakrishna-press-meet

ಇದನ್ನೂ ಓದಿ » ಶಿವಮೊಗ್ಗದ FDA ಬಳಿ ಕೋಟಿ ಕೋಟಿಯ ಆಸ್ತಿ, ಲೋಕಾಯುಕ್ತ ದಾಳಿಯಲ್ಲಿ ಏನೇನೆಲ್ಲ ಸಿಕ್ತು?

ನಾನೂ ಸಚಿವ ಸ್ಥಾನವನ್ನು ಕೇಳಿದ್ದೇನೆ. ಜನ ಬೆಂಬಲ, ದೇವರ ಇಚ್ಛೆ ಇದ್ದರೆ ಖಂಡಿತಾ ಸಿಗುತ್ತದೆ. ಅದಕ್ಕಾಗಿ ಹೊಸದಿಲ್ಲಿ ಯಾತ್ರೆ ಕೈಗೊಳ್ಳುವುದಿಲ್ಲ. ವರಿಷ್ಠರು ಬಹುಬೇಗ ಗೊಂದಲ ಬಗೆಹರಿಸಬೇಕು.ಗೋಪಾಲಕೃಷ್ಣ ಬೇಳೂರು, ಶಾಸಕ

ಬ್ಲಾಕ್‌ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಲಸೆ ಚಂದ್ರಪ್ಪ, ಪ್ರಮುಖರಾದ ಗಣಪತಿ ಮಂಡಗಳಲೆ, ಜಾಕೀರ್ ಉಪಸ್ಥಿತರಿದ್ದರು.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment