ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 28 JUNE 2023
ANANDAPURA : ಇಬ್ಬರು ಹೆಣ್ಮಕ್ಕಳ ಮದುವೆಗೆ (Marriage) ಅಂತಿಮ ಸಿದ್ಧತೆ ನಡೆಸುತ್ತಿದ್ದ ವ್ಯಕ್ತಿಯೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮದುವೆ ಹಿಂದಿನ ದಿನ ಘಟನೆ ಸಂಭವಿಸಿದ್ದು, ಸಂಭ್ರಮದಲ್ಲಿರಬೇಕಾದ ಮನೆಯಲ್ಲಿ ಸೂತಕ ಆವರಿಸಿದೆ.

ಬನವಾಸಿ ನಿವಾಸಿ ಮಂಜುನಾಥ ಗೌಡ (58) ಮೃತ ದುರ್ದೈವಿ. ಆನಂದಪುರ ಸಮೀಪದ ಆಚಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಕೊಪ್ಪ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಡೆದು ಹೋಗುತ್ತಿದ್ದಾಗ ಮಂಜುನಾಥ ಗೌಡ ಅವರಿಗೆ ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡಿದ್ದ ಅವರು ಅಸುನೀಗಿದ್ದಾರೆ.

ಹೆಣ್ಮಕ್ಕಳ ಮದುವೆಗೆ ಅಂತಿಮ ಸಿದ್ಧತೆ
ಮಂಜುನಾಥ ಗೌಡ ಅವರಿಗೆ ಇಬ್ಬರು ಹೆಣ್ಣು ಮಕ್ಕಳು. ಇಬ್ಬರ ಮದುವೆಯು (Marriage) ಇಂದು ನಿಗದಿಯಾಗಿತ್ತು. ಈ ಹಿನ್ನೆಲೆ ಮದುವೆ ಕಾರ್ಯದ ಅಂತಿಮ ಸಿದ್ಧತೆ ನಡೆಸುತ್ತಿದ್ದರು. ಕಾರ್ಯಕ್ರಮಕ್ಕೆ ಬೇಕಾದ ಸಾಮಗ್ರಿ ಖರೀದಿಸಲು ಅವರು ಮಂಗಳವಾರ ಆನಂದಪುರಂಗೆ ತೆರಳಿದ್ದರು. ಅಲ್ಲಿಂದ ಮನೆಗೆ ಮರಳುವಾಗ ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲೇ ಮಡಿದಿದ್ದರು ಪತ್ನಿ
ಮಂಜುನಾಥ ಗೌಡ ಅವರ ಪತ್ನಿ ಕೂಡ ಇದೆ ರೀತಿ ದುರ್ಘಟನೆಯಲ್ಲಿ ಮೃತಪಟ್ಟಿದ್ದರು ಎಂದು ತಿಳಿದು ಬಂದುದೆ. ಮೂರು ವರ್ಷದ ಹಿಂದೆ ಬನವಾಸಿಯಲ್ಲಿ ಸಂಭವಿಸಿದ ಟ್ರ್ಯಾಕ್ಟರ್ ಅಪಘಾತದಲ್ಲಿ ಪತ್ನಿ ಮೃತಪಟ್ಟಿದ್ದರು. ಈಗ ಮಂಜುನಾಥ ಗೌಡ ಅವರ ಮೃತರಾಗಿದ್ದು, ಮಕ್ಕಳು ತಂದೆ – ತಾಯಿ ಇಬ್ಬರು ಕಳೆದುಕೊಂಡು ದುಃಖದಲ್ಲಿದ್ದಾರೆ.
ಇದನ್ನೂ ಓದಿ – ಲಂಚದ ಹಣ ಪಡೆಯುತ್ತಿದ್ದಾಗ ಮಹಿಳಾ ಅಧಿಕಾರಿ ಎದುರಿಗೆ ಲೋಕಾಯುಕ್ತ ಪೊಲೀಸರು ಪ್ರತ್ಯಕ್ಷ
ನಿಗದಿಯಂತೆ ಮದುವೆ ಕಾರ್ಯ
ಘಟನೆ ಹಿನ್ನೆಲೆ ಮದುವೆ ಕಾರ್ಯ ನಡೆಸಬೇಕೋ, ಮುಂದೂಡಬೇಕೋ ಎಂಬ ಗೊಂದಲ ಮೂಡಿತ್ತು. ಕೊನೆಗೆ ಹಿರಿಯರ ಸಮಕ್ಷಮದಲ್ಲಿ ಮದುವೆ ಕಾರ್ಯ ಮುಂದುವರೆಸಲು ನಿರ್ಧರಿಸಲಾಯಿತು. ಅದರಂತೆ ಇಂದು ಮಂಜುನಾಥ ಗೌಡ ಅವರ ಇಬ್ಬರು ಹೆಣ್ಣು ಮಕ್ಕಳ ಮದುವೆ ನಡೆಯಲಿದೆ.
ಇದನ್ನೂ ಓದಿ – ಭದ್ರಾವತಿಯ ಯುವಕನಿಗೆ 3 ವರ್ಷ ಜೈಲು, 2.88 ಲಕ್ಷ ರೂ. ದಂಡ, ಕಾರಣವೇನು?
ಮಂಜುನಾಥ ಗೌಡ ಅವರ ಮರಣೋತ್ತರ ಪರೀಕ್ಷೆ ಬಳಿಕ ಬನವಾಸಿಯಲ್ಲಿ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ. ಆನಂದಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















