ಕೆಲಸ ಮಾಡುತ್ತಿದ್ದ ಫೈನಾನ್ಸ್‌ ಸಂಸ್ಥೆಗೇ ₹3,00,000 ವಂಚಿಸಿದ ಕ್ವಾಲಿಟಿ ಮ್ಯಾನೇಜರ್‌, ಏನಿದು ಕೇಸ್‌?

ಸಾಗರ: ಗ್ರಾಹಕರು ಮರುಪಾವತಿ ಮಾಡಿದ್ದ ಸಾಲದ ಕಂತಿನ ಹಣವನ್ನು ಫೈನಾನ್ಸ್‌ (Finance) ಸಂಸ್ಥೆಗೆ ಕಟ್ಟದೆ ವಂಚಿಸಿದ ಬ್ರಾಂಚ್‌ ಕ್ವಾಲಿಟಿ ಮ್ಯಾನೇಜರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಲೆಕ್ಕ ಪರಿಶೋಧನೆ ಮಾಡಿದಾಗ ಕ್ವಾಲಿಟಿ ಮ್ಯಾನೇಜರ್‌ ₹3.03 ಲಕ್ಷ ವಂಚಿಸಿರುವು ಬೆಳಕಿಗೆ ಬಂದಿದೆ.

ಫೈನಾನ್ಸ್‌ ಸಂಸ್ಥೆಯೊಂದು ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ವಿತರಿಸುತ್ತದೆ. ಅವರು ಸಾಲ ಮರುಪಾವತಿ ಮಾಡಿದ್ದನ್ನು ಕ್ವಾಲಿಟಿ ಮ್ಯಾನೇಜರ್‌ ಫೈನಾನ್ಸ್‌ ಸಂಸ್ಥೆಗೆ ಮರುಪಾವತಿಸಬೇಕು. 2024ರ ಡಿಸೆಂಬರ್‌ 10 ರಿಂದ 2025ರ ಮೇ 12ರವರೆಗೆ ₹3.03 ಲಕ್ಷವನ್ನು ಫೈನಾನ್ಸ್‌ ಸಂಸ್ಥೆಗೆ ಪಾವತಿಸದೆ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಲೆಕ್ಕ ಪರಿಶೋಧನೆ ವೇಳೆ ಈ ವಿಷಯ ಗೊತ್ತಾಗಿದೆ. ಹಣವ ಪಾವತಿಸುವಂತೆ ಸೂಚಿಸಿದರು ಕ್ವಾಲಿಟಿ ಮ್ಯಾನೇಜರ್‌ ಹಣ ಕಟ್ಟಿಲ್ಲ. ಈ ಹಿನ್ನೆಲೆ ಸಾಗರ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » 15 ನಿಮಿಷದ ಬಳಿಕ ಗಾಂಧಿ ಪಾರ್ಕ್‌ ಗೇಟ್‌ ಬಳಿ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

JNNCE-Admission-Advt-scaled

Manager scams Finance institute

Sagara Police Station Building

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment