ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ, ಸಮರ್ಪಕ ವಿದ್ಯುತ್‌ಗೆ ಎಂಎಲ್‌ಎ ಪತ್ರ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಸಾಗರ : ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಾಗರ ತಾಲೂಕು ಭಾರಂಗಿ ಹೋಬಳಿಯಲ್ಲಿ ಸಂಜೆ 6 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ನಿರಂತರ ಸಿಂಗಲ್‌ ಫೇಸ್‌ ವಿದ್ಯುತ್‌ (Power) ಪೂರೈಕೆ ಮಾಡಬೇಕು ಎಂದು ಹುಬ್ಬಳ್ಳಿಯ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮನವಿ ಮಾಡಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಭಾರಂಗಿ ಹೋಬಳಿಯ ನಾಗವಳ್ಳಿ ಭಾಗಕ್ಕೆ ಭಟ್ಕಳದಿಂದ ವಿದ್ಯುತ್‌ ಪೂರೈಕೆ ಮಾಡಲಾಗುತ್ತಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ ಹಿನ್ನೆಲೆ ವಿದ್ಯಾರ್ಥಿಗಳ ಅಧ್ಯಯನಕ್ಕೆ ತೊಂದರೆ ಆಗದಂತೆ ಮಾರ್ಚ್‌ ತಿಂಗಳು ಪೂರ್ತಿ ಸಂಜೆ 6 ರಿಂದ ರಾತ್ರಿ 10 ಗಂಟೆವರೆಗೆ ಸಿಂಗಲ್‌ ಫೇಸ್‌ ವಿದ್ಯುತ್‌ ಪೂರೈಕೆ ಮಾಡುವಂತೆ ಮನವಿ ಮಾಡಿದ್ದಾರೆ. ಇನ್ನು, ನಾಗವಳ್ಳಿ, ನೆಲಹರಿ, ಗುಡ್ಡೆಹಿತ್ಲು, ಬಾಳಿಗಾ ಭಾಗದಲ್ಲಿ ಸಾವಿರಕ್ಕೂ ಹೆಚ್ಚು ಕುಟುಂಬಗಳು ಕೃಷಿ ಮತ್ತು ತೋಟಗಾರಿಕೆಯಲ್ಲಿ ತೊಡಗಿವೆ. ಕಳೆದ ಮೂರು ತಿಂಗಳು ವಿದ್ಯುತ್‌ (Power) ಪೂರೈಕೆ ವ್ಯತ್ಯಯದಿಂದಾಗಿ ಜಮೀನಿಗೆ ನೀರು ಹಾಯಿಸಲಾಗದೆ ಬೆಳೆ ನಷ್ಟವಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಮನವಿಯಲ್ಲಿ ತಿಳಿಸಿದ್ದಾರೆ.

ರೈತರು ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿದ್ಯುತ್‌ ಪೂರೈಕೆ ಮಾಡುವಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಮನವಿ ಮಾಡಿದರು. ಕಾಂಗ್ರೆಸ್‌ ಪಕ್ಷದ ಯುವ ಮುಖಂಡ ಅಶೋಕ್‌ ಬೇಳೂರು ನೇತೃತ್ವದ ನಿಯೋಗ ಹುಬ್ಬಳ್ಳಿಯಲ್ಲಿ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರನ್ನು ಭೇಟಿಯಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಮನವಿ ಪತ್ರ ಹಸ್ತಾಂತರ ಮಾಡಿದರು.

Ashok-Beluru-submits-memorandum-to-Hescom-md.
ಹುಬ್ಬಳ್ಳಿಯ ಹೆಸ್ಕಾಂ ಕಚೇರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದ ಅಶೋಕ್‌ ಬೇಳೂರು.

ಪ್ರಮುಖರಾದ ವಾಸು, ಚಂದ್ರಶೇಖರ್, ವೀರಪ್ಪ, ವೆಂಕಟೇಶ್, ಮಂಜುನಾಥ್, ದೇವೇಂದ್ರ, ಲಿಂಗರಾಜ್ ಉಪಸ್ಥಿತರಿದ್ದರು.

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಗೋಧಿಗಾಗಿ ಲಕ್ಷ ಲಕ್ಷ ಹಣ ಕಳೆದುಕೊಂಡ ಶಿವಮೊಗ್ಗದ ಉದ್ಯಮಿ, ಆಗಿದ್ದೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment