ಶಿವಮೊಗ್ಗ ಲೈವ್.ಕಾಂ | SAGARA | 08 ಡಿಸೆಂಬರ್ 2019
ಮಂಗನ ಕಾಯಿಲೆ ಸಂಶೋಧನೆಗೆ ಸರ್ಕಾರ ಸ್ಥಾಪಿಸಲು ಉದ್ದೇಶಿಸಿರುವ ಸಂಶೋಧನ ಕೇಂದ್ರವನ್ನು ಸಾಗರದಲ್ಲೇ ಸ್ಥಾಪಿಸುವುದು ಸೂಕ್ತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಸಾಗರ ಶಾಸಕ ಹಾಲಪ್ಪ ಅವರ ಕಚೇರಿಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಸಾಗರ ತಾಲೂಕಿನಲ್ಲಿ ಕೆಎಫ್’ಡಿಯಿಂದ ಜನರು ತತ್ತರಿಸಿದ್ದಾರೆ. ಹಾಗಾಗಿ ಇಲ್ಲಿಯೇ ಸಂಶೋಧನ ಕೇಂದ್ರ ತೆರೆಯುವುದು ಸೂಕ್ತ ಎಂದರು.
ಜಾತ್ರೆ ಬಳಿಕ ರಸ್ತೆ ಅಗಲೀಕರಣ
ಸೊರಬ ರಸ್ತೆ ಅಗಲೀಕರಣ ಕುರಿತು ಮಾತನಾಡಿದ ಸಚಿವ ಈಶ್ವರಪ್ಪ, ಶಾಸಕರು ಸ್ಥಳಕ್ಕೆ ಕರೆದೊಯ್ದು ರಸ್ತೆ ತೋರಿಸಿದ್ದಾರೆ. ಬಜೆಟ್’ನಲ್ಲಿ ಹಣ ಮೀಸಲಿಡುವಂತೆ ಸಿಎಂಗೆ ಮನವಿ ಮಾಡುತ್ತೇನೆ. ಜಾತ್ರೆಯ ಬಳಿಕ ಅಗಲೀಕರಣ ಕುರಿತು ಗಮನಹರಿಸಲಾಗುತ್ತದೆ ಎಂದರು.
ಶಾಸಕ ಹೆಚ್.ಹಾಲಪ್ಪ, ಟಿ.ಡಿ.ಮೇಘರಾಜ್, ಪ್ರಸನ್ನ ಕೆರೆಕೈ, ಲೋಕನಾಥ ಬಿಳಿಸಿರಿ, ಗಣೇಶ್ ಪ್ರಸಾದ್, ಮಹೇಶ್, ಶ್ರೀನಿವಾಸ್ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
District Incharge Minister K S Eshwarappa Visits Sagara and held meeting in MLA’s Office. He said the KFD Lab to be established in Sagara.