ನರಸೀಪುರದ ನಾಟಿ ವೈದ್ಯ ನಾರಾಯಣಮೂರ್ತಿ ಮನೆಗೆ ಸಚಿವ, ಶಾಸಕರ ಭೇಟಿ, ಏನೆಲ್ಲ ಚರ್ಚೆಯಾಯ್ತು? ಔಷಧಿ ಯಾವಾಗ ಸಿಗುತ್ತೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SAGARA NEWS | 28 ಮೇ 2020

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ನರಸೀಪುರದ ನಾಟಿ ವೈದ್ಯ ನಾರಾಯಣಮೂರ್ತಿ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿದ್ದರು. ಜನರಿಗೆ ಔಷಧಿ ಸಿಗುವಂತೆ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಇಲ್ಲಿಗೆ ಬರುವವರಿಗೆ ಯಾರೂ ಅಡ್ಡಿಪಡಿಸದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಮೇಘಾಲಯದ ಸಚಿವರಿಗೆ ಔಷಧ

ಲಾಕ್‍ಡೌನ್ ಸಂದರ್ಭದ ಮೇಘಾಲಯ ರಾಜ್ಯದ ಸಚಿವರೊಬ್ಬರು ಔಷಧ ಬೇಕು ಎಂದು ತಿಳಿಸಿದ್ದರು. ಆಪ್ತರೊಬ್ಬರ ಮೂಲಕ ಅವರಿಗೆ ಔಷಧ ಕಳುಹಿಸಿಲಾಗಿತ್ತು. ಕ್ಯಾನ್ಸರ್ ಗುಣವಾಗಿದೆ ಎಂದು ಅವರು ತಿಳಿಸಿದ್ದಾರೆ. ಇಲ್ಲಿನ ಪಾರಂಪರಿಕ ಔಷಧಿಯಿಂದ ಅನೇಕರಿಗೆ ಅನುಕೂಲವಾಗಿದೆ. ಈ ಬಗ್ಗೆ ನಂಬಿಕೆ ಇದ್ದವರಿಗೆ ಔಷಧ ನೀಡಲು ಯಾವುದೇ ಅಭ್ಯಂತರವಿಲ್ಲ ಎಂದು ಸಚಿವ ಈಶ್ವರಪ್ಪ ತಿಳಿಸಿದರು.  

ಶೌಚಗೃಹ, ರಸ್ತೆ ನಿರ್ಮಾಣ

ಔಷಧಿಗಾಗಿ ಬೇರೆ ಬೇರೆ ಕಡೆಯಿಂದ ಜನರು ಬರುತ್ತಾರೆ. ಇಲ್ಲಿಗೆ ಬಂದವರು ಊರಿನ ವಾತಾವರಣ ಕಲುಷಿತಗೊಳಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಊರಿನಲ್ಲಿ ಮೂಲ ಸೌಕರ್ಯದ ಕೊರತೆ ಇದೆ. ಇದನ್ನು ಸರಿಪಡಿಸಲು ಶೌಚಗೃಹ, ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಹರತಾಳು ಹಾಲಪ್ಪ ಸ್ಪಷ್ಟಪಡಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment