ಮುರುಘ ಮಠ ಸರ್ಕಲ್‌ನಲ್ಲಿ ರಸ್ತೆ ಬದಿ ನಿಂತಿದ್ದ ಆಟೋಗೆ KSRTC ಬಸ್‌ ಡಿಕ್ಕಿ

SHIVAMOGGA LIVE NEWS | 20 DECEMBER 2023➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ANANDAPURA : ರಸ್ತೆ ಬದಿ ನಿಂತಿದ್ದ ಗೂಡ್ಸ್‌ ಆಟೋಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್‌ ಯಾವುದೆ ಪ್ರಾಣಹಾನಿ ಸಂಭವಿಸಿಲ್ಲ. ಆನಂದಪುರ ಮುರುಘ ಮಠ ಸರ್ಕಲ್‌ ಬಳಿ ಘಟನೆ ಸಂಭವಿಸಿದೆ.

ಮಂಗಳವಾರ ರಾತ್ರಿ ಶಿವಮೊಗ್ಗ – ಸಾಗರ ಮಾರ್ಗದ ಕೆಎಸ್‌ಆರ್‌ಟಿಸಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದಿದೆ. ಆಟೋದ ಹಿಂಬದಿ ಜಖಂ ಆಗಿದೆ. ಘಟನೆಯಲ್ಲಿ ಯಾರಿಗೂ ಹಾನಿಯಾಗಿಲ್ಲ. ಅಪಘಾತದ ಹಿನ್ನೆಲೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರಿಂದ ಈ ಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.

ಇದನ್ನೂ ಓದಿ – ವಾಹನ ಸವಾರರೆ ಗಮನಿಸಿ, ರೈಲ್ವೆ ಗೇಟ್‌ ತಾಂತ್ರಿಕ ಪರಿಶೀಲನೆ, ಡಿ.25ರಂದು ವಾಹನಗಳಿಗೆ ಪರ್ಯಾಯ ಮಾರ್ಗ

Leave a Comment