ಶಿವಮೊಗ್ಗ ಲೈವ್.ಕಾಂ | ಸಾಗರ | 26 ಸೆಪ್ಟೆಂಬರ್ 2019
ಸಾಗರದ ಗಣಪತಿ ಕೆರೆ ಕಾಮಗಾರಿ ಸ್ಥಳವನ್ನು ಶಾಸಕ ಹರತಾಳು ಹಾಲಪ್ಪ ಪರಿಶೀಲನೆ ನಡೆಸಿದರು. ಕೆರೆ ಭಾಗ ಒತ್ತುವರಿ ಆಗದಂತೆ ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಗಣಪತಿ ಕೆರೆ ಸುತ್ತಲು ಡ್ರೈನೇಜ್ ತೆಗೆಸಲಾಗುತ್ತಿದೆ. ಕೊಳಚೆ ನೀರು ಗಣಪತಿ ಕೆರೆ ಸೇರಬಾರದು ಮತ್ತು ಕೆರೆ ಜಾಗ ಒತ್ತವರಿ ಮಾಡಬಾರದು ಅನ್ನುವ ಉದ್ದೇಶದಿಂದ ಡ್ರೈನೇಜ್ ತೆಗೆಸಲಾಗುತ್ತಿದೆ.
ಈಗಾಗಲೆ ಒಂದು ಭಾಗದಲ್ಲಿ ಡ್ರೈನೇಜ್ ಕೆಲಸ ಪೂರ್ಣಗೊಂಡಿದೆ. ಮತ್ತೊಂದು ಭಾಗದಲ್ಲಿ ಡ್ರೈನೇಜ್ ತೆಗೆಸಲು ಸ್ಥಳ ಪರಿಶೀಲನೆ ನಡೆಸಲಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದ್ದಾರೆ. ಪರಿಶೀಲನೆ ವೇಳೆ ಉಪವಿಭಾಗಾಧಿಕಾರಿ ಡಾ.ಎಲ್.ನಾಗರಾಜ್, ಪೌರಾಯುಕ್ತ ಎಸ್.ರಾಜು, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತ ಹೆಚ್.ಕೆ.ನಾಗಪ್ಪ, ನಗರಸಭೆ ಸದಸ್ಯರಾದ ಟಿ.ಡಿ.ಮೇಘರಾಜ್, ಆರ್.ಶ್ರೀನಿವಾಸ್, ವಿ.ಮಹೇಶ್, ಅರವಿಂದ ರಾಯ್ಕರ್, ವಿನಾಯಕ ರಾವ್, ಬಿ.ಟಿ.ರವೀಂದ್ರ ಸೇರಿದಂತೆ ಹಲವರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200