SHIVAMOGGA LIVE NEWS, 6 JANUARY 2025
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಸಾಗರ : ಪ್ರವಾಸಿ ಮಂದಿರದಲ್ಲಿ ಅರಣ್ಯಾಧಿಕಾರಿಗಳ ಜೊತೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸಭೆ ನಡೆಸಿದರು. ಆನೆಗಳ (Elephants) ದಾಳಿ, ಬೆಳೆ ಹಾನಿ ಕುರಿತು ಚರ್ಚೆ ನಡೆಸಿದರು.
ಸಮಾಲೋಚನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಬೇರೆ ಪ್ರದೇಶಗಳಿಂದ ಸಾಗರ ತಾಲೂಕಿಗೆ ಆನೆಗಳು ಲಗ್ಗೆ ಇಡುತ್ತಿವೆ. ಇವುಗಳ ನಿಯಂತ್ರಣದ ವಿಷಯವನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಲು ಸೂಚಿಸಿದ್ದೇನೆ ಎಂದರು.

ತಾಲ್ಲೂಕಿನ ಗೌತಮಪುರ, ಆನಂದಪುರಂ, ಗಿಳಲಗುಂಡಿ ಹಾಗೂ ಸುತ್ತಮುತ್ತಲ ಪ್ರದೇಶ ಗಳಲ್ಲಿ ಆನೆ ಹಾವಳಿಯಿಂದ ಬೆಳೆಗಳಿಗೆ ಹಾನಿ ಉಂಟಾಗಿದೆ. ಆನೆಗಳ ಹಾವಳಿ ತಡೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
ಗೋಪಾಲಕೃಷ್ಣ ಬೇಳೂರು, ಶಾಸಕ
![]()
ತಾಲೂಕಿನ ಕಾರ್ಗಲ್ ಸಮೀಪದ ಗ್ರಾಮವೊಂದರಲ್ಲಿ ಒತ್ತುವರಿ ತೆರವು ನೆಪದಲ್ಲಿ ಬೆಳೆದು ನಿಂತ ಮರಗಳ ಕಡಿತಲೆ ಮಾಡಿರುವ ಅರಣ್ಯ ಇಲಾಖೆಯ ಕ್ರಮ ಸರಿಯಲ್ಲ. ಈಗಾಗಲೆ ಬೇರೆ ಬೇರೆ ಪ್ರಕರಣಗಳಲ್ಲಿ ಈ ರೀತಿ ಬೆಳೆದು ನಿಂತ ಮರಗಳನ್ನು ಕಡಿಯಬಾರದು ಎಂದು ರಾಜ್ಯದ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಆದಾಗ್ಯೂ ಮರ ಕಡಿತಲೆ ಮಾಡಿರುವ ಅಧಿಕಾರಿಗಳ ಕ್ರಮ ಖಂಡನೀಯ ಎಂದರು.ಮರ ಕಡಿತಲೆ ಖಂಡನೀಯ
ಡಿಎಫ್ಓ ಮೋಹನ್ ಕುಮಾರ್ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸಭೆಯಲ್ಲಿದ್ದರು.
ಇದನ್ನೂ ಓದಿ » ಆನಂದಪುರ ಬಳಿ ಕಾಡಾನೆಗಳು ಪ್ರತ್ಯಕ್ಷ, ತೋಟ, ಗದ್ದೆಯಲ್ಲಿ ಸಂಚಾರ
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





