ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 6 JANUARY 2025
ಸಾಗರ : ಪ್ರವಾಸಿ ಮಂದಿರದಲ್ಲಿ ಅರಣ್ಯಾಧಿಕಾರಿಗಳ ಜೊತೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸಭೆ ನಡೆಸಿದರು. ಆನೆಗಳ (Elephants) ದಾಳಿ, ಬೆಳೆ ಹಾನಿ ಕುರಿತು ಚರ್ಚೆ ನಡೆಸಿದರು.
ಸಮಾಲೋಚನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಬೇರೆ ಪ್ರದೇಶಗಳಿಂದ ಸಾಗರ ತಾಲೂಕಿಗೆ ಆನೆಗಳು ಲಗ್ಗೆ ಇಡುತ್ತಿವೆ. ಇವುಗಳ ನಿಯಂತ್ರಣದ ವಿಷಯವನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಲು ಸೂಚಿಸಿದ್ದೇನೆ ಎಂದರು.

ತಾಲ್ಲೂಕಿನ ಗೌತಮಪುರ, ಆನಂದಪುರಂ, ಗಿಳಲಗುಂಡಿ ಹಾಗೂ ಸುತ್ತಮುತ್ತಲ ಪ್ರದೇಶ ಗಳಲ್ಲಿ ಆನೆ ಹಾವಳಿಯಿಂದ ಬೆಳೆಗಳಿಗೆ ಹಾನಿ ಉಂಟಾಗಿದೆ. ಆನೆಗಳ ಹಾವಳಿ ತಡೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
ಗೋಪಾಲಕೃಷ್ಣ ಬೇಳೂರು, ಶಾಸಕ
![]()
ತಾಲೂಕಿನ ಕಾರ್ಗಲ್ ಸಮೀಪದ ಗ್ರಾಮವೊಂದರಲ್ಲಿ ಒತ್ತುವರಿ ತೆರವು ನೆಪದಲ್ಲಿ ಬೆಳೆದು ನಿಂತ ಮರಗಳ ಕಡಿತಲೆ ಮಾಡಿರುವ ಅರಣ್ಯ ಇಲಾಖೆಯ ಕ್ರಮ ಸರಿಯಲ್ಲ. ಈಗಾಗಲೆ ಬೇರೆ ಬೇರೆ ಪ್ರಕರಣಗಳಲ್ಲಿ ಈ ರೀತಿ ಬೆಳೆದು ನಿಂತ ಮರಗಳನ್ನು ಕಡಿಯಬಾರದು ಎಂದು ರಾಜ್ಯದ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಆದಾಗ್ಯೂ ಮರ ಕಡಿತಲೆ ಮಾಡಿರುವ ಅಧಿಕಾರಿಗಳ ಕ್ರಮ ಖಂಡನೀಯ ಎಂದರು.ಮರ ಕಡಿತಲೆ ಖಂಡನೀಯ
ಡಿಎಫ್ಓ ಮೋಹನ್ ಕುಮಾರ್ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಸಭೆಯಲ್ಲಿದ್ದರು.
ಇದನ್ನೂ ಓದಿ » ಆನಂದಪುರ ಬಳಿ ಕಾಡಾನೆಗಳು ಪ್ರತ್ಯಕ್ಷ, ತೋಟ, ಗದ್ದೆಯಲ್ಲಿ ಸಂಚಾರ
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು















