Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಸಿಗಂದೂರು ಸೇತುವೆ ಮೇಲೆ ಕಾರಿನಲ್ಲಿ ಸಂಸದ ರಾಘವೇಂದ್ರ ಸಂಚಾರ, ಪರಿಶೀಲನೆ ಬಳಿಕ ಹೇಳಿದ್ದೇನು?

ಸಿಗಂದೂರು ಸೇತುವೆ ಮೇಲೆ ಕಾರಿನಲ್ಲಿ ಸಂಸದ ರಾಘವೇಂದ್ರ ಸಂಚಾರ, ಪರಿಶೀಲನೆ ಬಳಿಕ ಹೇಳಿದ್ದೇನು?

08/05/2025 2:53 PM
ನಿತಿನ್‌ ಕೈದೊಟ್ಲು

ಸಾಗರ: ಸಿಗಂದೂರು ಸೇತುವೆ (Sigandur Bridge) ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಇವತ್ತು ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಮುಖಂಡರು ಸೇತುವೆ ಮೇಲೆ ವಾಹನದಲ್ಲಿ ಸಂಚರಿಸಿದರು.

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಇದೇ ವೇಳೆ ಸಂಸದ ರಾಘವೇಂದ್ರ ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದರು. ಇಂಜಿನಿಯರ್‌ಗಳು, ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದರು. ಜೂ.15ರ ಒಳಗೆ ಸೇತುವೆ ಕಾಮಗಾರಿ ಪೂರ್ಣಗೊಳ್ಳಬೇಕು ಎಂದು ಸೂಚಿಸಿದರು. (ಮತ್ತಷ್ಟು ಸುದ್ದಿ ಈ ಜಾಹೀರಾತುಗಳ ಕೆಳಗಿದೆ)

SLV-BOOK-SHOP-SHIMOGA

JNNCE-ADMISSION-2025-26

ಸಂಸದ ರಾಘವೇಂದ್ರ ಹೇಳಿದ್ದೇನು? ಇಲ್ಲಿದೆ ಪಾಯಿಂಟ್ಸ್‌

Point 1 F1F1F1ಕಳಸವಳ್ಳಿ – ಅಂಬಾರಗೋಡ್ಲು ಮಧ್ಯೆ ಸೇತುವೆ ಆಗಬೇಕು ಎಂಬುದು ಬಹು ವರ್ಷದ ಕನಸಾಗಿತ್ತು. ಸಂಜೆ ನಂತರ ಇಲ್ಲಿಂದ ಹೊರ ಪ್ರಪಂಚಕ್ಕೆ ಸಂಪರ್ಕ ಇರಲಿಲ್ಲ. ಅನೇಕ ವರ್ಷ ಹೋರಾಟ ನಡೆಸಿದ್ದರು.

MP BY Raghavendra Visits sigandur Bridge

point-2ಹಾಗಾಗಿ ಗ್ರಾಮ ಪಂಚಾಯಿತಿ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲಾಯಿತು. ಸಾಗರ – ಮರಕುಟಿಕ ರಸ್ತೆಗೆ ಎನ್‌.ಹೆಚ್‌ 369 ಇ ಎಂದು ಘೋಷಿಸಲಾಯಿತು. ಯಡಿಯೂರಪ್ಪ ಅವರು ಪ್ರಯತ್ನಪಟ್ಟು ಕೇಂದ್ರದಿಂದ 550 ಕೋಟಿ ರೂ. ಹಣ ತರಿಸಿಕೊಟ್ಟಿದ್ದರು.

MP BY Raghavendra Visits sigandur Bridge

point-3ಒಟ್ಟು 423 ಕೋಟಿ ರೂ. ವೆಚ್ಚದಲ್ಲಿ ಸಿಗಂದೂರು ಸೇತುವೆ ನಿರ್ಮಾಣವಾಗುತ್ತಿದೆ. ನಾಲ್ಕೂವರೆ ವರ್ಷ ಕಾಮಗಾರಿ ನಡೆಯಿತು. ಕಾಮಗಾರಿ ಪೂರ್ಣಗೊಳ್ಳಲು ಆಗಸ್ಟ್‌ ತಿಂಗಳವರೆಗೆ ಕಾಲವಕಾಶವಿದೆ. ಆದರೆ ಅದಕ್ಕು ಮುಂಚೆಯೇ ಈ ಮಳೆಗಾಲದಲ್ಲಿಯೇ ಸೇತುವೆ ಉದ್ಘಾಟನೆ ಆಗಬೇಕು ಎಂಬುದು ನಮ್ಮ ಅಪೇಕ್ಷೆಯಾಗಿದೆ.

MP BY Raghavendra Visits sigandur Bridge

point-4ಪ್ರಧಾನಿ ನರೇಂದ್ರ ಮೋದಿ ಸಿಗಂದೂರು ಸೇತುವೆಯನ್ನು ಲೋಕಾರ್ಪಣೆ ಮಾಡಬೇಕು. ಈ ಸಂಬಂಧ ಭೂ ಸಾರಿಗೆ ಸಚಿವ ನಿತಿನ ಗಡ್ಕರಿ ಅವರಿಗೆ ಮನವಿ ಮಾಡಿದ್ದೆ. ಈ ಹಿನ್ನೆಲೆ ಕೇಂದ್ರದಿಂದ ರೀಜನಲ್‌ ಆಫೀಸರ್‌ ಶರ್ಮಾ ಎಂಬುವವರ ನೇತೃತ್ವದ ತಂಡ ಪರಿಶೀಲಿಸಿದರು. ಜೂ.15ರ ಒಳಗೆ ಸಂಪೂರ್ಣ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಆದೇಶ ಬಂದಿದೆ.

The-Team-PU-College-scaled

point-5ಸಿಗಂದೂರು ಸೇತುವೆಗೆ ಸಂಪರ್ಕ ಕಲ್ಪಿಸುವ ರಸ್ತೆಯ ಅಭಿವೃದ್ಧಿಗೆ 900 ಕೋಟಿ ರೂ. ನಿಗದಿಪಡಿಸಲಾಗಿದೆ. ಇನ್ನು 15 ದಿನದೊಳಗೆ ಸಂಪರ್ಕ ರಸ್ತೆ ಸಂಬಂಧ ಯೋಜನೆ ಸಿದ್ಧವಾಗಲಿದೆ.

MP-BY-Raghavendra-visits-Siganduru-Bridge

ಇವತ್ತು ನಾವೆಲ್ಲ ಸಿಗಂದೂರು ಸೇತುವೆ ಮೇಲೆ ವಾಹನಗಳಲ್ಲಿಯೇ ತೆರಳಿದೆವು. ಗುರುವಾರ ರಾಯರ ವಾರ. ಇದೇ ದಿನ ಅಧಿಕಾರಿಗಳು ಇಂತಹ ಅವಕಾಶ ಮಾಡಿಕೊಟ್ಟರು. ಸಿಗಂದೂರು ದೇವಿ ಸನ್ನಿಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತೇವೆ.

– ಬಿ.ವೈ.ರಾಘವೇಂದ್ರ, ಸಂಸದ

Whatsapp Group and Number 1 Website

point-6ಕೇಂದ್ರ ಸರ್ಕಾರ ಈ ಭಾಗದಲ್ಲಿ ಹಲವು ಸೇತುವೆ ನಿರ್ಮಾಣಕ್ಕೆ ಸಾವಿರಾರು ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಸುತ್ತಾ ಸೇತುವೆ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ 766 ಸಿ ಆಗಿ ಮೇಲ್ದರ್ಜೆಗೇರಿಸಿ ಒಂದು ಕಿ.ಮೀ ಹೊಸನಗರ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. ಮುಕ್ಕಾಲು ಕಿ.ಮೀ.ನ ಬೆಕ್ಕೋಡಿ ಸೇತುವೆ, ಹಾಲಪ್ಪ ಅವರ ಅವಧಿಯಲ್ಲಿ ಪಟಗುಪ್ಪ ಸೇತುವೆ, ಕಾಗೋಡು ತಿಮ್ಮಪ್ಪ ಅವರ ಶ್ರಮದಿಂದ ಹಸಿರುಮಕ್ಕಿ ಸೇತುವೆ ಸೇರಿದಂತೆ ನಾನಾ ಕಾಮಗಾರಿ ನಡೆಸಲಾಗಿದೆ. ಮಲೆನಾಡು ಮತ್ತು ಕರಾವಳಿ ಸಂಪರ್ಕಕ್ಕೆ ಅನುಕೂಲ ಮಾಡಲಾಗಿದೆ. ಅನೇಕ ಯಾತ್ರ ಸ್ಥಳಕ್ಕೆ ತೆರಳಲು ಅವಕಾಶವಾಗಲಿದೆ.

MP BY Raghavendra Visits sigandur Bridge

ಇದನ್ನೂ ಓದಿ » ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಸಾರ್ವಜನಿಕ ಪ್ರವೇಶ ನಿರ್ಬಂಧ, ಯಾವ ಸಮಯದಲ್ಲಿ ನಿರ್ಬಂಧ? ಯಾಕೆ?

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Shimoga-Freedom-Park ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಸಾರ್ವಜನಿಕ ಪ್ರವೇಶ ನಿರ್ಬಂಧ, ಯಾವ ಸಮಯದಲ್ಲಿ ನಿರ್ಬಂಧ? ಯಾಕೆ?
Next Article ADIKE-RATE-SHIVAMOGGA-LIVE-NEWS ಅಡಿಕೆ ಧಾರಣೆ | 8 ಮೇ 2025 | ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ಧಾರಣೆ?

ಇದನ್ನೂ ಓದಿ

Minister-Madhu-Bangarappa-Press-meet-about-budget
SAGARA

ಜೋಗ ಜಲಪಾತಕ್ಕೆ ಇವತ್ತು ಮಿನಿಸ್ಟರ್‌ ಭೇಟಿ, ಅಧಿಕಾರಿಗಳ ಜೊತೆಗೆ ಮಹತ್ವದ ಮೀಟಿಂಗ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
SAGARA-NEWS-UPDATE
SAGARA

ಬಸ್‌ ಇಳಿದು ರಸ್ತೆ ದಾಟುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಬೈಕ್‌ ಡಿಕ್ಕಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/05/2025
car-truck-mishap-at-hubli-five-member-succumbed
SAGARA

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, ಸಾಗರದ ಐವರು ಸ್ಥಳದಲ್ಲೇ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/05/2025
Ninasam-general-image
SAGARA

ನೀಸಾಸಂನಲ್ಲಿ ಐದು ದಿನ ನಾಟಕೋತ್ಸವ, ಉಚಿತ ಪ್ರವೇಶ, ಯಾವ್ಯಾವ ದಿನ ಯಾವ ನಟಕ ಪ್ರದರ್ಶನವಾಗಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/05/2025
jog-falls-reopened
SAGARA

ಜೋಗ ಜಲಪಾತ, ಮೊದಲ ದಿನವೇ ಜಲಾಧಾರೆ ಕಣ್ತುಂಬಿಕೊಂಡ ನೂರಾರು ಜನ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/05/2025
JOG FALLS GENERAL IMAGE
SAGARA

ಜೋಗ ಪ್ರವಾಸಿಗರಿಗೆ ಗುಡ್‌ ನ್ಯೂಸ್‌, ಸಾರ್ವಜನಿಕ ಪ್ರವೇಶಕ್ಕೆ ಅವಕಾಶ, ಯಾವಾಗ ಶುರು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/04/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?