‘ಸಿಗಂದೂರು ಸೇತುವೆ ನಿರ್ಮಾಣಕ್ಕಿದ್ದ ಅಡೆತಡೆಯಲ್ಲೆ ಕ್ಲಿಯರ್, ಟೆಂಡರ್ ಪ್ರಕ್ರಿಯೆ ಇನ್ನು ಸುಗಮ’

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | 26 ಫೆಬ್ರವರಿ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಅಂಬರಗೋಡ್ಲು – ಕಳಸವಳ್ಳಿ ನಡುವಿನ ಸೇತುವೆಗೆ ಇದ್ದ ಅಡೆತಡೆಗಳೆಲ್ಲ ನಿವಾರಣೆಯಾಗಿದೆ. ಮೂರ್ನಾಲ್ಕು ದಿನದಲ್ಲಿ ಸಿಗಂದೂರು ಸೇತುವೆಗೆ ಕೇಂದ್ರ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಲಿದೆ ಅಂತಾ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ತುಮರಿಯಲ್ಲಿ ಡಿಜಿಟಲ್ ಗ್ರಾಮಕ್ಕೆ ಚಾಲನೆ ನೀಡಿದ ರಾಘವೇಂದ್ರ, ಕಳೆದ ವರ್ಷ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, 470 ಕೋಟಿಯ ಸಿಗಂದೂರು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ವನ್ಯಜೀವಿ ಸಂರಕ್ಷಣಾ ಇಲಾಖೆ ಮತ್ತು ಕೆಪಿಸಿ ಅಡ್ಡಗಾಲು ಹಾಕಿದ್ದರಿಂದ ಆತಂಕ ಸೃಷ್ಟಿಯಾಗಿತ್ತು. ಆದರೆ ಮಾಜಿ ಸಿಎಂ ಯಡಿಯೂರಪ್ಪ ಮತ್ತು ಶಾಸಕ ಹಾಲಪ್ಪ ಅವರ ಪ್ರಯತ್ನದಿಂದಾಗಿ, ಸಮಸ್ಯೆಗಳು ನಿವಾರಣೆಯಾಗಿದೆ ಎಂದರು.

ಟೆಂಡರ್ ಹಾದಿ ಸುಗಮ

ಸಿಗಂದೂರು ಸೇತುವೆ ನಿರ್ಮಾಣ ಕಾಮಗಾರಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿದೆ. ಹಾಗಾಗಿ ಟೆಂಡರ್ ಪ್ರಕ್ರಿಯೆ ಸುಗಮವಾಗಿ ನಡೆಯಲಿದೆ ಎಂದು ಸಂಸದರ ರಾಘವೇಂದ್ರ ಸ್ಪಷ್ಟಪಡಿಸಿದರು.

ಶಾಸಕ ಹರತಾಳು ಹಾಲಪ್ಪ, ತಾಲೂಕ ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಟಿ.ಸತ್ಯನಾರಾಯಣ, ಡಿಜಿಟಲ್ ಇಂಡಿಯಾ ಯೋಜನೆಯ ರಾಜ್ಯ ಮುಖ್ಯಸ್ಥ ರಾಬರ್ಟ್ ಡಿ ನೆಲ್ಸನ್, ತಾಲೂಕು ಪಂಚಾಯಿತಿ ಸದಸ್ಯೆ ಸವಿತಾ ದೇವರಾಜ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment