ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SAGARA NEWS | 10 ಜೂನ್ 2020
ಮುಂಬೈನಿಂದ ಬಂದಿದ್ದ ಯುವಕನೊಬ್ಬನಿಗೆ ಕರೋನ ಪಾಸಿಟಿವ್ ಬಂದ ಹಿನ್ನೆಲೆ, ಸಾಗರ ತಾಲೂಕಿನಲ್ಲಿ ಆತಂಕ ಮೂಡಿದೆ. ಮುಂಬೈನಿಂದ ರೈಲಿನಲ್ಲಿ ಬಂದಿದ್ದ ಈತ ಬೈಕ್ನಲ್ಲಿ ಮನೆ ಸೇರಿದ್ದ ಎಂದು ತಿಳಿದು ಬಂದಿದೆ. ಆ ಬಳಿಕ ಈತನಲ್ಲಿ ಸೋಂಕು ಕಾಣಿಸಿಕೊಂಡಿದೆ.
ಸಾಗರ ತಾಲೂಕಿನ ಚನ್ನಗೊಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ 25 ವರ್ಷದ ಯುವಕನಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಈತ ಮುಂಬೈನ ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಮಹಾರಾಷ್ಟ್ರದಿಂದ ರೈಲಿನ ಮೂಲಕ ಬೈಂದೂರಿಗೆ ಆಗಮಿಸಿದ್ದ. ಅಲ್ಲಿಂದ ಸಹೋದರನ ಬೈಕ್ನಲ್ಲಿ ಮನೆಗೆ ಬಂದಿದ್ದ.
ಆರೋಗ್ಯ ಇಲಾಖೆ ಅಧಿಕಾರಿಗಳು ದೌಡು
ಜೂನ್ 5ರಂದು ಯುವಕ ಊರಿಗೆ ಬಂದಿದ್ದ. ಮುಂಬೈನಿಂದ ಯುವಕನೊಬ್ಬ ಗ್ರಾಮಕ್ಕೆ ಬಂದಿರುವ ವಿಚಾರ ತಿಳಿದು ಮರುದಿನವೇ ಆರೋಗ್ಯ ಇಲಾಖೆ ಸಿಬ್ಬಂದಿ ಯುವಕನ ಮನೆಗೆ ದೌಡಾಯಿಸಿದ್ದರು. ಕೂಡಲೇ ಆತನನ್ನು ಶಿವಮೊಗ್ಗಕ್ಕೆ ಕರೆತಂದು ಕ್ವಾರಂಟೈನ್ಗೆ ಒಳಪಡಿಸಿ, ಗಂಟಲು ದ್ರವ ಪರೀಕ್ಷೆ ನಡೆಸಿದ್ದರು. ಇದರ ವರದಿ ಬಂದಿದ್ದು ಯುವಕನಿಗೆ ಕರೋನ ಪಾಸಿಟಿವ್ ಕಾಣಿಸಿಕೊಂಡಿದೆ.
ಮನೆಯವರೆಲ್ಲ ಕ್ವಾರಂಟೈನ್ಗೆ
ಇನ್ನು, ಯುವಕನಿಗೆ ಸೋಂಕು ತಗುಲಿರುವುದು ದೃಢವಾಗುತ್ತಿದ್ದಂತೆ ಕುಟುಂಬದ ಐವರನ್ನು ಹೋಂ ಕ್ವಾರಂಟೈನ್ನಲ್ಲಿ ಇರುವಂತೆ ಸೂಚಿಸಲಾಗಿದೆ. ಇಡೀ ಮನೆಯನ್ನು ಅಧಿಕಾರಿಗಳು ಸ್ಯಾನಿಟೈಸ್ ಮಾಡಿದ್ದಾರೆ. ಆರೋಗ್ಯ ಸಮಸ್ಯೆ ಎದುರಾದರೆ ತಕ್ಷಣ ತಿಳಿಸುವಂತೆ ಸೂಚಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















