Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಮುಪ್ಪಾನೆ ಲಾಂಚ್‌ ಸೇವೆ ಸ್ಥಗಿತ, ಮತ್ತೆ ತೊಂದರೆಗೆ ಸಿಲುಕಿದ ಹಿನ್ನೀರಿನ ಜನ, ಲಾಂಚ್‌ ನಿಲ್ಲಲು ಕಾರಣವೇನು?

ಮುಪ್ಪಾನೆ ಲಾಂಚ್‌ ಸೇವೆ ಸ್ಥಗಿತ, ಮತ್ತೆ ತೊಂದರೆಗೆ ಸಿಲುಕಿದ ಹಿನ್ನೀರಿನ ಜನ, ಲಾಂಚ್‌ ನಿಲ್ಲಲು ಕಾರಣವೇನು?

27/08/2023 12:31 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 27 AUGUST 2023

SAGARA : ಕರೂರು ಹೋಬಳಿಯಿಂದ ಜೋಗ, ಕಾರ್ಗಲ್‌ಗೆ ಸಂಪರ್ಕ ಕಲ್ಪಿಸುವ ಹಲ್ಕೆ – ಮುಪ್ಪಾನೆ ಲಾಂಚ್‌ (Muppane Launch) ಸೇವೆ ಸ್ಥಗಿತಗೊಂಡಿದೆ. ತಾಂತ್ರಿಕ ದೋಷದಿಂದಾಗಿ ಆ.25ರಿಂದ ಕಾರ್ಯಾಚರಣೆ ನಿಲ್ಲಿಸಿದೆ. ಇದರಿಂದ ಸ್ಥಳೀಯರು ಮತ್ತು ಪ್ರವಾಸಿಗರಿಗೆ ಸಮಸ್ಯೆಯಾಗಿದೆ.

ಲಾಂಚ್‌ನ ಗೇರ್‌ ಬಾಕ್ಸ್‌ ಸೇರಿದಂತೆ ವಿವಿಧ ತಾಂತ್ರಿಕ ಸಮಸ್ಯೆಯಾಗಿದೆ. ಕೆಲವು ಬಿಡಿ ಭಾಗಗಳನ್ನು ರಿಪೇರಿಗೆ ಕಳುಹಿಸಲಾಗಿದೆ. ಇನ್ನು ನಾಲ್ಕೈದು ದಿನದಲ್ಲಿ ಸಮಸ್ಯೆ ಪರಿಹಾರವಾಗಲಿದೆ ಎಂದು ಕಡವು ನಿರೀಕ್ಷಕ ಧನೇಂದ್ರ ಕುಮಾರ್‌ ತಿಳಿಸಿದ್ದಾರೆ.

ನೀರು ಕಡಿಮೆಯಾಗಿ ನಿಂತಿತ್ತು

ಕಳೆದ ಬೇಸಿಗೆ ಹೊತ್ತಲ್ಲಿ ಶರಾವತಿ ನದಿಯಲ್ಲಿ ನೀರಿನ ಮಟ್ಟ ಇಳಿಕೆಯಾಗಿತ್ತು. ಆದ್ದರಿಂದ ಲಾಂಚ್‌ ಸೇವೆ ಸ್ಥಗಿತಗೊಂಡಿತ್ತು. ಇದರಿಂದ ಕರೂರು ಹೋಬಳಿಯ ಜನರು ತೀವ್ರ ಸಂಕಷ್ಟಕ್ಕೀಡಾಗಿದ್ದರು. ಮುಪ್ಪಾನೆ ಮಾರ್ಗದಲ್ಲಿ (Muppane Launch) ಸಣ್ಣ ಲಾಂಚ್ ಇದೆ. ಕರೂರು ಹೋಬಳಿಯ ಹಲವು ಗ್ರಾಮಗಳಿಗೆ ಈ ಲಾಂಚ್ ಸಂಪರ್ಕ ಸೇತುವೆಯಾಗಿತ್ತು. ಈಗ ಲಾಂಚ್ ಸೇವೆ ಸ್ಥಗಿತವಾಗಿದ್ದು ಹೋಬಳಿಯ ಹಲವು ಗ್ರಾಮಗಳ ಜನರಿಗೆ ಸಂಕಷ್ಟ ತಂದೊಡ್ಡಿದೆ.

Muppane Lauch - sagara - Sigandur

35 ಕಿ.ಮೀ ಬದಲು 72 ಕಿ.ಮೀ

ಕರೂರು ಹೋಬಳಿಯ ಒಳಗಿನ ಅನೇಕ ಗ್ರಾಮಗಳಿಗೆ ಮುಪ್ಪಾನೆ ಲಾಂಚ್ ಸಂಪರ್ಕ ಒದಗಿಸುತ್ತಿತ್ತು. 2017ರಲ್ಲಿ ಲಾಂಚ್‌ ಸೇವೆ ಆರಂಭವಾಗಿತ್ತು. ಮುಪ್ಪಾನೆ ಲಾಂಚ್ ಇಲ್ಲದೆ ಹೋದರೆ ಈ ಭಾಗದ ಗ್ರಾಮಸ್ಥರು ಹೋಬಳಿ ಕೇಂದ್ರ ತಲುಪಲು 72 ಕಿ.ಮೀ ಸಂಚರಿಸಬೇಕಾಗುತ್ತದೆ. ಲಾಂಚ್ ಮೂಲಕ ಶರಾವತಿ ನದಿ ದಾಟಿದರೆ ಕೇವಲ 35 ಕಿ.ಮೀ ಮೂಲಕ ತಲುಪಬಹುದಾಗಿದೆ.

ಪೊಲೀಸರು, ಪ್ರವಾಸಿಗರಿಗೂ ಅನುಕೂಲ

ತುರ್ತು ಸಂದರ್ಭದಲ್ಲಿ ಪೊಲೀಸರು, ವಿದ್ಯುತ್ ಇಲಾಖೆ ಸಿಬ್ಬಂದಿ ಕರೂರು ಹೋಬಳಿಯ ಗ್ರಾಮಗಳಿಗೆ ತಲುಪಲು ಲಾಂಚ್ ಬಳಕೆ ಮಾಡಿಕೊಳ್ಳುತ್ತಿದ್ದರು. ಶಿರಸಿ, ಸಿದ್ಧಾಪುರ ಮಾರ್ಗದಲ್ಲಿ ಓಡಾಡುವವರಿಗೂ ಲಾಂಚ್ ಅನುಕೂಲವಾಗಿತ್ತು. ಸಿಗಂದೂರು ಪ್ರವಾಸಿಗರು ಕೂಡ ಈ ಮಾರ್ಗದಲ್ಲಿ ಓಡಾಡುತ್ತಿದ್ದರು. ಮುಪ್ಪಾನೆ ಲಾಂಚ್ ಸ್ಥಗಿತಗೊಂಡಿರುವುದರಿಂದ ಜನರು ಸುತ್ತಿ ಬಳಸಿ ಓಡಾಡುವಂತಾಗಿದೆ.

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 270823 Chakravarti Sulibele to visit Shivamogga ಶಿವಮೊಗ್ಗದಲ್ಲಿ ಮೂರು ದಿನ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ – 3 ಸುದ್ದಿಗಳ ಫಟಾಫಟ್‌ ನ್ಯೂಸ್‌
Next Article Sadhbavana-Yathre-from-Shimoga-to-Holehonnuru-by-BJP-Yuva-Morcha-BY-Raghavendra. ಶಿವಮೊಗ್ಗದಿಂದ ಹೊಳೆಹೊನ್ನೂರು ತನಕ ಸದ್ಭಾವನಾ ಪಾದಯಾತ್ರೆ

ಇದನ್ನೂ ಓದಿ

Minister-Madhu-Bangarappa-Press-meet-about-budget
SAGARA

ಜೋಗ ಜಲಪಾತಕ್ಕೆ ಇವತ್ತು ಮಿನಿಸ್ಟರ್‌ ಭೇಟಿ, ಅಧಿಕಾರಿಗಳ ಜೊತೆಗೆ ಮಹತ್ವದ ಮೀಟಿಂಗ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
MP-BY-Raghavendra-visits-Siganduru-Bridge
SAGARA

ಸಿಗಂದೂರು ಸೇತುವೆ ಮೇಲೆ ಕಾರಿನಲ್ಲಿ ಸಂಸದ ರಾಘವೇಂದ್ರ ಸಂಚಾರ, ಪರಿಶೀಲನೆ ಬಳಿಕ ಹೇಳಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
SAGARA-NEWS-UPDATE
SAGARA

ಬಸ್‌ ಇಳಿದು ರಸ್ತೆ ದಾಟುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಬೈಕ್‌ ಡಿಕ್ಕಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/05/2025
car-truck-mishap-at-hubli-five-member-succumbed
SAGARA

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, ಸಾಗರದ ಐವರು ಸ್ಥಳದಲ್ಲೇ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/05/2025
Ninasam-general-image
SAGARA

ನೀಸಾಸಂನಲ್ಲಿ ಐದು ದಿನ ನಾಟಕೋತ್ಸವ, ಉಚಿತ ಪ್ರವೇಶ, ಯಾವ್ಯಾವ ದಿನ ಯಾವ ನಟಕ ಪ್ರದರ್ಶನವಾಗಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/05/2025
jog-falls-reopened
SAGARA

ಜೋಗ ಜಲಪಾತ, ಮೊದಲ ದಿನವೇ ಜಲಾಧಾರೆ ಕಣ್ತುಂಬಿಕೊಂಡ ನೂರಾರು ಜನ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?