SHIVAMOGGA LIVE NEWS, 5 DECEMBER 2024
ಸಾಗರ : ಸಾಗರದಿಂದ ಮಂಗಳೂರಿಗೆ ನೂತನವಾಗಿ ಆರಂಭಗೊಂಡಿರುವ ಕೆಎಸ್ಆರ್ಟಿಸಿ ರಾಜಹಂಸ ಬಸ್ (Rajahamsa Bus) ಸಂಚಾರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಬುಧವಾರ ಹಸಿರು ನಿಶಾನೆ ತೋರಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಬಸ್ಸಿನ ಟೈಮಿಂಗ್ ಏನು?
ನೂತನ ರಾಜಹಂಸ ಬಸ್ ಸಾಗರದಿಂದ ರಾತ್ರಿ 10.10ಕ್ಕೆ ಹೊರಡಲಿದೆ. ಬೆಳಗಿನ ಜಾವ 4ಕ್ಕೆ ಮಂಗಳೂರು, 4.45ಕ್ಕೆ ಯನಪೋಯ ಆಸ್ಪತ್ರೆ ತಲುಪುತ್ತದೆ. ಮಂಗಳೂರಿನಿಂದ ರಾತ್ರಿ 10.10ಕ್ಕೆ ಹೊರಡುವ ಬಸ್ ಬೆಳಗಿನ ಜಾವ 4.30ಕ್ಕೆ ಸಾಗರ ತಲುಪುತ್ತದೆ.
ಎಂಎಲ್ಎ ಹೇಳಿದ್ದೇನು?
ಇದೇ ವೇಳೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳುವ ರೋಗಿಗಳ ಅನುಕೂಲಕ್ಕಾಗಿ ಸರ್ಕಾರಿ ಬಸ್ ಅನ್ನು ಈಗಾಗಲೇ ಕಲ್ಪಿಸಲಾಗಿದೆ. ಈ ಭಾಗದಿಂದ ಮಂಗಳೂರಿನ ವೆನ್ ಲಾಕ್, ಎನಪೋಯಾ ಆಸ್ಪತ್ರೆಗೂ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಚಿಕಿತ್ಸೆಗೆ ತೆರಳುವುದರಿಂದ ಅವರ ಬೇಡಿಕೆಯಂತೆ ನೂತನ ಬಸ್ ಸಂಚಾರ ಆರಂಭಿಸಲಾಗಿದೆ ಎಂದರು.
ಶಕ್ತಿ ಯೋಜನೆ ಜಾರಿಗೆ ಬರುವ ಮೊದಲು ಸರ್ಕಾರಿ ಬಸ್ಗಳಲ್ಲಿದ್ದ ಪ್ರಯಾಣಿಕರ ಸಂಖ್ಯೆಗೆ ಹೋಲಿಸಿದರೆ ಈಗ ಸಾಕಷ್ಟು ಹೆಚ್ಚಳವಾಗಿದೆ. ಪ್ರಯಾಣಿಕರು ವಿರಳವಾಗಿರುತ್ತಿದ್ದ ಕೆಲವು ಮಾರ್ಗಗಳಲ್ಲೂ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದು ಸಾರಿಗೆ ಸಂಸ್ಥೆಗೆ ಲಾಭ ತರಲು ಕಾರಣವಾಗಿದೆ.
– ಬೇಳೂರು ಗೋಪಾಲಕೃಷ್ಣ, ಶಾಸಕ
ನಗರಸಭೆ ಸದಸ್ಯ ಗಣಪತಿ ಮಂಡಗಳಲೆ, ರವಿ ಲಿಂಗನಮಕ್ಕಿ, ಪ್ರಮುಖರಾದ ಐ.ಎನ್.ಸುರೇಶ್ ಬಾಬು, ಕಲಸೆ ಚಂದ್ರಪ್ಪ, ಚೇತನ್ ರಾಜ್ ಕಣ್ಣೂರು ಸೇರಿದಂತೆ ಹಲವರು ಇದ್ದರು.