Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ‘ಸಿಗಂದೂರು 108’ ಆಂಬುಲೆನ್ಸ್ ಸಿಗದೆ ಮತ್ತೊಂದು ಸಾವು, 24 ಗಂಟೆಯಲ್ಲಿ ಹಾರಿ ಹೋಯ್ತು ಇಬ್ಬರ ಪ್ರಾಣ ಪಕ್ಷಿ

‘ಸಿಗಂದೂರು 108’ ಆಂಬುಲೆನ್ಸ್ ಸಿಗದೆ ಮತ್ತೊಂದು ಸಾವು, 24 ಗಂಟೆಯಲ್ಲಿ ಹಾರಿ ಹೋಯ್ತು ಇಬ್ಬರ ಪ್ರಾಣ ಪಕ್ಷಿ

16/12/2021 8:16 PM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SAGARA NEWS | 16 ಡಿಸೆಂಬರ್ 2021

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ತುರ್ತು ಸಂದರ್ಭ ಆಂಬುಲೆನ್ಸ್ ಸಿಗದೆ ಮತ್ತೊಬ್ಬರು ಕೊನೆಯುಸಿರೆಳೆದಿದ್ದಾರೆ. ತುಮರಿ ಭಾಗದಲ್ಲಿ ಆಂಬುಲೆನ್ಸ್ ಇಲ್ಲದಿರುವುದರಿಂದ ಕಳೆದ 24 ಗಂಟೆ ಅವಧಿಯಲ್ಲಿ ಇಬ್ಬರು ಜೀವ ಕಳೆದುಕೊಂಡಂತಾಗಿದೆ.

ADVT JULY NANJAPPA HOSPITAL HOME LAB TESTING

ಬೈಕ್ ಅಪಘಾತಕ್ಕೀಡಾಗಿ ತಲೆಗೆ ತೀವ್ರ ಪೆಟ್ಟಾಗಿದ್ದ ನಾರಾಯಣ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಚಿಕಿತ್ಸೆ ಫಲಿಸದೆ ನಾರಾಯಣ ಅವರು ಸಂಜೆ ಮೃತಪಟ್ಟಿದ್ದಾರೆ.

ಆಂಬುಲೆನ್ಸ್ ಸಿಗದೆ ನರಳಾಡಿದ್ದರು

ನಾರಾಯಣ ಅವರು ಬುಧವಾರ  ರಾತ್ರಿ ಬೈಕ್’ನಲ್ಲಿ ತುಮರಿಯಿಂದ ಕಳಸವಳ್ಳಿಯಲ್ಲಿರುವ ಮನೆಗೆ ತೆರಳುತ್ತಿದ್ದರು. ಈ ಸಂದರ್ಭ ದನ ಅಡ್ಡಬಂದಿದ್ದು, ಅಪಘಾತಕ್ಕೀಡಾಗಿ ನಾರಾಯಣ ಮತ್ತು ಬೈಕ್ ಚಾಲನೆ ಮಾಡುತ್ತಿದ್ದ ಬಲರಾಮ ಗಾಯಗೊಂಡಿದ್ದರು.

ಇದನ್ನೂ ಓದಿ | ಶರಾವತಿ ಹಿನ್ನೀರು, ಸಿಗಂದೂರು ಲಾಂಚ್ ಪ್ರವಾಸಿಗರಿಗಷ್ಟೇ ಸ್ವರ್ಗ, ಕಳೆದ ರಾತ್ರಿಯ ಘಟನೆ ತುಮರಿ ಜನರಲ್ಲಿ ಹೆಚ್ಚಿಸಿದೆ ಆತಂಕ

ನಾರಾಯಣ ಅವರ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವ ಉಂಟಾಗಿತ್ತು. ಬಲರಾಮನಿಗೆ ಸಣ್ಣಪುಟ್ಟ ಗಾಯವಾಗಿದೆ. ಕೂಡಲೆ ನಾರಾಯಣ ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು.

ಸಾಗರ, ಶಿವಮೊಗ್ಗ, ಮಂಗಳೂರು

ಆಂಬುಲೆನ್ಸ್ ಸಿಗದಿರುವ ಹಿನ್ನೆಲೆ ಖಾಸಗಿ ವಾಹನದ ವ್ಯವಸ್ಥೆ ಮಾಡಿ, ರಾತ್ರಿ ಲಾಂಚ್ ಮೂಲಕ ಶರಾವತಿ ನದಿ ದಾಟಿಸಲಾಗಿತ್ತು. ಸಾಗರದ ಆಸ್ಪತ್ರೆಗೆ ಕರೆದೊಯ್ದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿತ್ತು. ಬಳಿಕ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಾರಾಯಣ ಅವರು ಮೃತರಾಗಿದ್ದಾರೆ.

AVvXsEgs2CAQQwFXPEeKJ0M8TIYSuTjC1YFP87yReiHpVPmRryODfVeCXuFAqftB8kOZ5mPWZitv CEgSxJ 0UftK 3Xtg FQnjiLvzYXdPYIyMcbnCizoegDYgVDMGV3v1L2lUIeE2 3X339z1W9X2I3kEIgBbfYiP ZYP9tZPaJV64qH Ith d6U8fBL4P5A=s926

ದಿನಸಿ ಖರೀದಿಸಿ ಮನೆಗೆ ಹೋಗುತ್ತಿದ್ದರು

ಪ್ಲಾಂಟೇಷನ್’ಗಳಲ್ಲಿ ಅಕೇಷಿಯಾ ಮರಗಳ ಕಡಿತಲೆ ಕೆಲಸದಲ್ಲಿ ನಾರಾಯಣ ತೊಡಗಿಸಿಕೊಂಡಿದ್ದರು. ಅವರ ಮಗ ಬಲರಾಮ ಅವರು ಲಾಂಚ್’ನಲ್ಲಿ ಹೊರಗುತ್ತಿಗೆ ನೌಕರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಾತ್ರಿ ಕೆಲಸ ಮುಗಿಸಿ, ಮನೆಗೆ ದಿನಸಿ ಖರೀದಿ ಮಾಡಿಕೊಂಡು ಇಬ್ಬರು ತುಮರಿಯಿಂದ ಕಳಸವಳ್ಳಿಯಲ್ಲಿರುವ ತಮ್ಮ ಮನೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿತ್ತು.

ತುಮರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿದ್ದ 108 ಆಂಬುಲೆನ್ಸ್ ಇದ್ದಿದ್ದರೆ ನೇರವಾಗಿ ಕುಂದಾಪುರ ಅಥವಾ ಮಂಗಳೂರಿಗೆ ನಾರಾಯಣ ಅವರು ನೇರವಾಗಿ ಕರೆದೊಯ್ಯಬಹುದಾಗಿತ್ತು. ತುರ್ತು ಚಿಕಿತ್ಸೆ ಲಭಿಸುವ ಸಾಧ್ಯತೆ ಇತ್ತು ಎಂಬುದು ಸ್ಥಳೀಯರ ಅಭಿಪ್ರಾಯವಾಗಿದೆ.

ಸಕಾಲಕ್ಕೆ ಆಂಬುಲೆನ್ಸ್ ಸಿಗದೆ ನವಜಾತ ಶಿಶುವೊಂದು ಕಳೆದ ರಾತ್ರಿ ಅಸುನೀಗಿದೆ. ಅದರ ಕಂಪ್ಲೀಟ್ ಮಾಹಿತಿ ಓದಲು ಲಿಂಕ್ ಕ್ಲಿಕ್ ಮಾಡಿ | ಶರಾವತಿ ಹಿನ್ನೀರು, ಸಿಗಂದೂರು ಲಾಂಚ್ ಪ್ರವಾಸಿಗರಿಗಷ್ಟೇ ಸ್ವರ್ಗ, ಕಳೆದ ರಾತ್ರಿಯ ಘಟನೆ ತುಮರಿ ಜನರಲ್ಲಿ ಹೆಚ್ಚಿಸಿದೆ ಆತಂಕ

shivamogga live subscribe New Kannada

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article 161221 Bank Employees protest in Shimoga ಶಿವಮೊಗ್ಗದ ಎರಡು ಬ್ಯಾಂಕುಗಳ ಮುಂದೆ ನೌಕರರ ಪ್ರತಿಭಟನೆ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ
Next Article crime name image ಶಿವಮೊಗ್ಗದ ಕುವೆಂಪು ನಗರದಲ್ಲಿ ಪೊಲೀಸರ ದಾಳಿ, ಬೀರನಕೆರೆ ತಾಂಡಾದ ಮೂವರು ಅರೆಸ್ಟ್

ಇದನ್ನೂ ಓದಿ

Minister-Madhu-Bangarappa-Press-meet-about-budget
SAGARA

ಜೋಗ ಜಲಪಾತಕ್ಕೆ ಇವತ್ತು ಮಿನಿಸ್ಟರ್‌ ಭೇಟಿ, ಅಧಿಕಾರಿಗಳ ಜೊತೆಗೆ ಮಹತ್ವದ ಮೀಟಿಂಗ್‌

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
12/05/2025
MP-BY-Raghavendra-visits-Siganduru-Bridge
SAGARA

ಸಿಗಂದೂರು ಸೇತುವೆ ಮೇಲೆ ಕಾರಿನಲ್ಲಿ ಸಂಸದ ರಾಘವೇಂದ್ರ ಸಂಚಾರ, ಪರಿಶೀಲನೆ ಬಳಿಕ ಹೇಳಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/05/2025
SAGARA-NEWS-UPDATE
SAGARA

ಬಸ್‌ ಇಳಿದು ರಸ್ತೆ ದಾಟುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಬೈಕ್‌ ಡಿಕ್ಕಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/05/2025
car-truck-mishap-at-hubli-five-member-succumbed
SAGARA

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ, ಸಾಗರದ ಐವರು ಸ್ಥಳದಲ್ಲೇ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/05/2025
Ninasam-general-image
SAGARA

ನೀಸಾಸಂನಲ್ಲಿ ಐದು ದಿನ ನಾಟಕೋತ್ಸವ, ಉಚಿತ ಪ್ರವೇಶ, ಯಾವ್ಯಾವ ದಿನ ಯಾವ ನಟಕ ಪ್ರದರ್ಶನವಾಗಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/05/2025
jog-falls-reopened
SAGARA

ಜೋಗ ಜಲಪಾತ, ಮೊದಲ ದಿನವೇ ಜಲಾಧಾರೆ ಕಣ್ತುಂಬಿಕೊಂಡ ನೂರಾರು ಜನ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?