ರೈತರಿಗೆ ನೊಟೀಸ್, ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿಪಾದಯಾತ್ರೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | SAGARA | 9 ಜೂನ್ 2022 padayatra 

ಅರಣ್ಯ ಭೂಮಿ ಸಾಗುವಳಿದಾರರಿಗೆ ಸರ್ಕಾರ ನೊಟೀಸ್ ನೀಡುತ್ತಿರುವ ಕ್ರಮ ಖಂಡಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಪಾದಯಾತ್ರೆ (padayatra) ನಡೆಸಲಾಗುತ್ತದೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.

Shimoga Nanjappa Hospital

ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಅವರು, ಅರಣ್ಯ ಭೂಮಿ ಸಾಗುವಳಿದಾರರಿಗೆ ನೊಟೀಸ್ ನೀಡಲಾಗುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಸರ್ಕಾರದ ನಡೆ ಖಂಡಿಸಿ ಪಾದಯಾತ್ರೆ ನಡೆಸಲು ಚಿಂತಿಸಲಾಗಿದೆ ಎಂದು ತಿಳಿಸಿದರು.

ಸುಳ್ಳು ಹೇಳುತ್ತಿದ್ದಾರೆ ಸಚಿವ

ರೈತರಿಗೆ ನೊಟೀಸ್ ನೀಡಲಾಗುತ್ತಿದೆ. ಬೆಂಗಳೂರಿನ ಭೂಕಬಳಿಕೆ ನ್ಯಾಯಾಲಯಕ್ಕೆ ಅಲೆಸಲಾಗುತ್ತಿದೆ. ರೈತರು ಇದ್ದಬದ್ದ ಹಣವನ್ನೆಲ್ಲ ಖರ್ಚು ಮಾಡಿಕೊಳ್ಳುವಂತೆ ಮಾಡಲಾಗುತ್ತಿದೆ. 192ಎ ಕಾಯ್ದೆ ರದ್ದುಪಡಿಸಿರುವುದಾಗಿ ಕಂದಾಯ ಸಚಿವರು ಹೇಳುತ್ತಾರೆ. ಆದರೆ ರೈತರಿಗೆ ನಿರಂತರವಾಗಿ ನೊಟೀಸ್ ನೀಡಲಾಗುತ್ತಿದೆ.ಇದನ್ನು ಗಮನಿಸಿದರೆ ಕಂದಾಯ ಸಚಿವರು ಸುಳ್ಳು ಹೇಳುತ್ತಿದ್ದಾರೆ ಅನ್ನುವುದು ಸ್ಪಷ್ಟವಾಗುತ್ತದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ ಕುಮಾರಿ, ನಗರಸಭೆ ವಿಪಕ್ಷ ನಾಯಕ ಗಣಪತಿ ಮಂಡಗಳಲೆ, ಪ್ರಮುಖರಾದ ಸಂತೋಷ್ ಸದ್ಗುರು, ರವಿಕುಮಾರ್, ಯಶವಂತ ಪಣಿ, ನಾರಾಯಣಪ್ಪ, ಮಹಾಬಲೇಶ ಶೆಟ್ಟಿ, ಅನ್ವರ್ ಭಾಷಾ ಇದ್ದರು.

ಇದನ್ನೂ ಓದಿ – ಆನಂದಪುರ ಹೋಬಳಿಯ 300ಕ್ಕೂ ಹೆಚ್ಚು ರೈತರಿಗೆ ನೊಟೀಸ್

Shimoga Gangothri College PUC

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment