Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಪಾಸ್ ವಿವಾದ, ಪೊಲೀಸ್, ಭದ್ರತಾ ಸಿಬ್ಬಂದಿ ನಡುವಿನ ಬಹುದಿನದ ಸಂಘರ್ಷ ಸ್ಫೋಟ, ವಿಡಿಯೋಗಳು ವೈರಲ್

ಪಾಸ್ ವಿವಾದ, ಪೊಲೀಸ್, ಭದ್ರತಾ ಸಿಬ್ಬಂದಿ ನಡುವಿನ ಬಹುದಿನದ ಸಂಘರ್ಷ ಸ್ಫೋಟ, ವಿಡಿಯೋಗಳು ವೈರಲ್

16/10/2022 8:38 PM
ನಿತಿನ್‌ ಕೈದೊಟ್ಲು

 SHIVAMOGGA LIVE NEWS 

SAGARA | ಕರ್ತವ್ಯ ನಿರತ ಪೊಲೀಸರು ತಮ್ಮ ಆವರಣ ಪ್ರವೇಶಿಸಲು ಪಾಸ್ (PASS CONTROVERSY) ಪಡೆದು ಬರಬೇಕು ಎಂದು ಕರ್ನಾಟಕ ಪವರ್ ಕಾರ್ಪೊರೇಷನ್ ಭದ್ರತಾ ಸಿಬ್ಬಂದಿ ಸೂಚಿಸಿದ್ದಾರೆ. ಇದರಿಂದ ವಿವಾದ ಹುಟ್ಟಿಕೊಂಡಿದೆ. ಇವುಗಳ ಮಧ್ಯೆ ಮೊಬೈಲ್ ವಿಡಿಯೋಗಳು, ಸಿಸಿಟಿವಿ ದೃಶ್ಯಗಳು ವೈರಲ್ ಆಗಿದ್ದು, ಪರ – ವಿರೋಧದ ಚರ್ಚೆಗೆ ಕಾರಣವಾಗಿದೆ.

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

Shimoga Nanjappa Hospital

ಸಾಗರ ತಾಲೂಕು ಕಾರ್ಗಲ್ ಬಳಿ ಕೆಪಿಸಿ ಚೇಕ್ ಪೋಸ್ಟ್ ನಲ್ಲಿ ಘಟನೆ ಸಂಭವಿಸಿದೆ. ಕಾರ್ಗಲ್ ಠಾಣೆ ಸಬ್ ಇನ್ಸ್ ಪೆಕ್ಟರ್ ತಿರುಮಲೇಶ್ ಮತ್ತು ಸಿಬ್ಬಂದಿ ಜೀಪಿನಲ್ಲಿ ಗಸ್ತು ತಿರುಗುತ್ತಿದ್ದರು. ಈ ಸಂದರ್ಭ ಕರ್ನಾಟಕ ಪವರ್ ಕಾರ್ಪೊರೇಷನ್ (ಕೆಪಿಸಿಎಲ್) ಭದ್ರತಾ ಸಿಬ್ಬಂದಿ ತಮ್ಮ ಆವರಣ ಪ್ರವೇಶಿಸಲು ಪಾಸ್ ಬೇಕು ಎಂದು ಕೇಳಿದ್ದಾರೆ. ಆಗ ಮಾತಿನ ಚಕಮಕಿ ನಡೆದಿದೆ. ಇದರ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

(PASS CONTROVERSY)

ಕೆಪಿಸಿಎಲ್ ಸೆಕ್ಯೂರಿಟಿ ವಾದವೇನು?

ಕೆಪಿಸಿಎಲ್ ಆವರಣ ಪ್ರವೇಶಿಸಲು ಪಾಸ್ (PASS CONTROVERSY) ಕಡ್ಡಾಯವೆಂದು ಭದ್ರತಾ ಸಿಬ್ಬಂದಿ ತಿಳಿಸಿದ್ದಾರೆ. ‘ಆವರಣದೊಳಗೆ ಹೋಗಲು ಪಾಸ್ ಬೇಕು. ಕೆಪಿಸಿಎಲ್ ಹಿರಿಯ ಅಧಿಕಾರಿಗಳಿಂದ ಪಾಸ್ ಪಡೆದು ಬರಬೇಕು. ಪೊಲೀಸರು ಒಳ ಪ್ರವೇಶಿಸಬೇಕಿದ್ದರೆ ತಮ್ಮ ವಾಕಿ ಟಾಕಿ ಮೂಲಕ ಹಿರಿಯ ಅಧಿಕಾರಿಗಳನ್ನ ವಿಚಾರಿಸಬೇಕಾಗುತ್ತದೆ. ಅವರು ಒಳಗೆ ಬಿಡುವಂತೆ ಸೂಚಿಸಿದರೆ ಮಾತ್ರ ಬಿಡುತ್ತೇವೆ’ ಎಂದು ಸೆಕ್ಯೂರಿಟಿ ಗಾರ್ಡ್ ವಿಡಿಯೋದಲ್ಲಿ ತಿಳಿಸಿದ್ದಾರೆ.

(PASS CONTROVERSY)

ಪೊಲೀಸ್ ಸಿಬ್ಬಂದಿ ಹೇಳೋದೇನು?

ಇತ್ತ ಕಾರ್ಗಲ್ ಠಾಣೆ ಸಬ್ ಇನ್ಸ್ ಪೆಕ್ಟರ್ ತಿರುಮಲೇಶ್ ಅವರು ಮಾತನಾಡಿರುವ ವಿಡಿಯೋ ವೈರಲ್ ಆಗಿದೆ. ಅದರಲ್ಲಿ ‘ಪೊಲೀಸರು ಕರ್ತವ್ಯ ನಿಮಿತ್ತ ಬಂದಾಗ ಪಾಸ್ ಪಡೆದು ಬರಬೇಕಾ. ಸಮವಸ್ತ್ರ ಧರಿಸಿ ಬಂದ ಪೊಲೀಸರನ್ನು ತಡೆಯುವಂತಿಲ್ಲ. ಒಳ ಬಿಡಲು ಪಾಸ್ ಬೇಕು ಎಂಬ ಆದೇಶ ಪ್ರತಿ ಇದ್ದರೆ ತೋರಿಸಿ. ನಾವು ಒಳಗೆ ಬರುವುದಿಲ್ಲ’ ಎಂದು ತಿಳಿಸಿದ್ದಾರೆ.

VIRAL VIDEO

ಸಿಸಿಟಿವಿ ದೃಶ್ಯವು ವೈರಲ್

ಕೆಪಿಸಿಎಲ್ ಭದ್ರತಾ ಸಿಬ್ಬಂದಿ ಮತ್ತು ಸಬ್ ಇನ್ಸ್ ಪೆಕ್ಟರ್ ತಿರುಮಲೇಶ್ ಅವರು ಮಾತನಾಡಿರುವ ವಿಡಿಯೋಗಳ ನಡುವೆ ಸಿಸಿಟಿವಿ ದೃಶ್ಯಾವಳಿಯೊಂದು ವೈರಲ್ ಆಗಿದೆ. ಇದು ಕೆಪಿಸಿಎಲ್ ಚೆಕ್ ಪೋಸ್ಟ್ ನಲ್ಲಿ ಅಳವಡಿಸಿರುವ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ. ಇದರಲ್ಲಿ ಸಬ್ ಇನ್ಸ್ ಪೆಕ್ಟರ್ ತಿರುಮಲೇಶ್ ಅವರು ಭದ್ರತಾ ಸಿಬ್ಬಂದಿಯನ್ನು ತಳ್ಳಿರುವ ದೃಶ್ಯವಿದೆ.

ಇದೇನು ಮೊದಲಲ್ಲ

ಪೊಲೀಸರು ಮತ್ತು ಕೆಪಿಸಿಎಲ್ ಭದ್ರತಾ ಸಿಬ್ಬಂದಿ ನಡುವಿನ ಸಂಘರ್ಷ ಇದೆ ಮೊದಲಲ್ಲ.  ಕೆಪಿಸಿಎಲ್ ಆವರಣ ಅತ್ಯಂತ ಸೂಕ್ಷ್ಮ ಪ್ರದೇಶ. ಇದೆ ಕಾರಣಕ್ಕೆ ಸಾರ್ವಜನಿಕ ಪ್ರವೇಶಕ್ಕೆ ನಿಷೇಧವಿದೆ. ಆದರೆ ಕರ್ತವ್ಯ ನಿರತ ಪೊಲೀಸರನ್ನು ಕೂಡ ಇಲ್ಲಿ ಬಿಡುವುದಿಲ್ಲ ಎಂಬ ಆರೋಪವಿದೆ. ಈ ಹಿಂದೆಯು ಹಲವು ಭಾರಿ ಪೊಲೀಸರನ್ನು ತಡೆದು, ಪಾಸ್ ಕೇಳಿ, ಹಿಂದಕ್ಕೆ ಕಳುಹಿಸಲಾಗಿದೆ ಎಂಬ ಆರೋಪವಿದೆ.

Shimoga Nanjappa Hospital

ಶಾಸಕರೆ ಒಮ್ಮೆ ಧರಣಿ ಮಾಡಿದ್ದರು

ಕೆಪಿಸಿಎಲ್ ಅಧಿಕಾರಿಗಳು ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ಈ ಹಿಂದೆ ಶಾಸಕ ಹರತಾಳು ಹಾಲಪ್ಪ ಅವರು ಧರಣಿ ನಡೆಸಿದ್ದರು. ರೈತರಿಗೆ ಕಿರುಕುಳ ನೀಡಲಾಗುತ್ತಿದೆ. ನೀರು ಪೂರೈಕೆಗೆ ಸಮಸ್ಯೆ ಉಂಟು ಮಾಡುತ್ತಿದ್ದಾರೆ ಎಂದು ಕಾರ್ಗಲ್ ಕೆಪಿಸಿ ಕಚೇರಿ ಮುಂಭಾಗ ಧರಣಿ ಮಾಡಿದ್ದರು.

ಏನಿದು ಕೆಪಿಸಿಎಲ್? ಇಲ್ಲೇನು ಸಮಸ್ಯೆ?

ಶರಾವತಿ ಹಿನ್ನೀರು ಭಾಗದಲ್ಲಿ ಜಲವಿದ್ಯುತ್ ಉತ್ಪಾದಿಸಲಾಗುತ್ತದೆ. ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ವತಿಯಿಂದ ವಿದ್ಯುತ್ ಉತ್ಪಾದನೆ ಕಾರ್ಯ ನಡೆಸಲಾಗುತ್ತಿದೆ. ಹಾಗಾಗಿ ವಿದ್ಯುತ್ ಉತ್ಪಾದನಾ ಕೇಂದ್ರ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಕೆಪಿಸಿ ಸಿಬ್ಬಂದಿ ಹೊರತು ಉಳಿದವರಾರಿಗೂ ಇಲ್ಲಿ ಪ್ರವೇಶವಿಲ್ಲ.

ಕ್ಲಿಕ್ ಮಾಡಿ ಇದನ್ನೂ ಓದಿ | ಗಾಜನೂರು ಮೀನು ಹೊಟೇಲ್ ನಲ್ಲಿ ಬಿಲ್ ವಿಚಾರವಾಗಿ ಜಗಳ, ಗ್ರಾಹಕನಿಗೆ ಗೂಸ

ಆದರೆ ಕೆಪಿಸಿ ವ್ಯಾಪ್ತಿ ಅಂಚಿನಲ್ಲಿ ಹಲವು ಗ್ರಾಮಗಳಿವೆ. ವಡನಬೈಲು, ಸುಂಕದ ಮನೆ, ಮರಾಠಿ ಕ್ಯಾಂಪ್ ಸೇರಿದಂತೆ ಒಂದೆರಡು ಗ್ರಾಮಗಳಿಗೆ ಕೆಪಿಸಿ ವ್ಯಾಪ್ತಿಯ ರಸ್ತೆಯಲ್ಲೇ ಸಂಚರಿಸಬೇಕು. ಇಲ್ಲಿಯ ನಿವಾಸಿಗಳು ಕೆಪಿಸಿ ಜಾಗದಿಂದ ಹಾದು ಹೋಗಲು ಪಾಸ್ ಪಡೆಯಬೇಕು. ಅಷ್ಟೆ ಅಲ್ಲ, ಆ ಮನೆಗಳಿಗೆ ನಂಟರು, ಇಷ್ಟರು ಬರುವುದಿದ್ದರು ಕೆಪಿಸಿ ಕಚೇರಿಯಿಂದ ಪಾಸ್ ಬೇಕು. ಇದೆ ಕಾರಣಕ್ಕೆ ಸಾರ್ವಜನಿಕರು ಕಿರಿಕಿರಿ ಅನುಭವಿಸುತ್ತಿದ್ದಾರೆ. ಇನ್ನು, ವಡನಬೈಲು ಪದ್ಮಾವತಿ ದೇವಿ ದೇವಸ್ಥಾನ ಜೈನರ ಪ್ರಮುಖ ಆರಾಧನ ಕೇಂದ್ರ. ಇಲ್ಲಿಗೆ ಬರುವ ಭಕ್ತರು ಕೂಡ ಪಾಸ್ ಪಡೆಯುವುದು ಕಡ್ಡಯವಾಗಿದೆ.

Vadanbail Shree Padmavathi Ammanavaru Temple

ಈ ಗ್ರಾಮಗಳು ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಗೆ ಬರಲಿವೆ. ಇಲ್ಲಿ ಬಂದೋಬಸ್ತ್ ಮತ್ತು ಗಸ್ತು ತಿರುಗಲು ಪೊಲೀಸರು ಸಂಚರಿಸಬೇಕು. ಆದರೆ ನಿತ್ಯ ಪಾಸ್ ಪಡೆಯಲು ಸಾಧ್ಯವೆ ಅನ್ನುವುದು ಪೊಲೀಸರ ವಾದ. ಇತ್ತ ಪಾಸ್ ಇಲ್ಲದೆ ಯಾರನ್ನೂ ಒಳಗೆ ಬಿಡುವಂತಿಲ್ಲ ಅನ್ನವುದು ಕೆಪಿಸಿ ಭದ್ರತಾ ಸಿಬ್ಬಂದಿಯ ಪಟ್ಟು. ಈ ವಿವಾದ ಈಗ ಸ್ಪೋಟಗೊಂಡಿದೆ.

JNNCE COLLEGE OF ENGINEERING

ಕ್ಲಿಕ್ ಮಾಡಿ ಇದನ್ನೂ ಓದಿ | 30 ಅಡಿ ಮೇಲಿಂದ ಬಿದ್ದ ಕಾರ್ಮಿಕ, ಮಾಲೀಕನ ವಿರುದ್ಧ ಪ್ರಕರಣ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Doddapete-Police-Station. 30 ಅಡಿ ಮೇಲಿಂದ ಬಿದ್ದ ಕಾರ್ಮಿಕ, ಮಾಲೀಕನ ವಿರುದ್ಧ ಪ್ರಕರಣ
Next Article Sagara-Bharath-Name-on-India-Book-of-Records ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸಾಗರದ ಗಾಯಕನ ಹೆಸರು, ಕಾರಣವೇನು?

ಇದನ್ನೂ ಓದಿ

-Linganamakki-Dam-General-Image
SAGARA

ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ ಒಂದು ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
areca-growers-meet-Sagara-
SAGARA

ಅಡಿಕೆ ಬೆಳೆಗಾರರ ಸಂಘದಿಂದ ಉಪ ವಿಭಾಗಾಧಿಕಾರಿ ಭೇಟಿ, ಚರ್ಚೆ, ಏನೆಲ್ಲ ಮನವಿ ಸಲ್ಲಿಸಲಾಯ್ತು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Sigandur-Bridge-work-photo
SAGARA

ಸಿಗಂದೂರು ಸೇತುವೆ, ಸಾಗರದಿಂದ ಉಡುಪಿ, ಮಂಗಳೂರಿಗೆ ಬಸ್‌ ವ್ಯವಸ್ಥೆ ಕಲ್ಪಿಸಲು ಆಗ್ರಹ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Beluru-Gopalakrishna-in-a-press-meet
SAGARA

ಸಿಗಂದೂರು ಸೇತುವೆ, ‘ನಮ್ಮ ಭೇಟಿಯ ಬಳಿಕವೇ ಉದ್ಘಾಟನೆ ದಿನಾಂಕ ನಿಗದಿʼ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
07/07/2025
-Linganamakki-Dam-General-Image
SAGARA

ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1.30 ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/07/2025
Kattinakaru-wild-pig-menace
SAGARA

ಕಟ್ಟಿಕನಾರು ಬಳಿ ಕಾಡು ಹಂದಿಗಳ ಹಾವಳಿ, ಅಡಿಕೆ ಸಸಿಗಳು ನಾಶ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
25/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?