SHIVAMOGGA LIVE NEWS | 10 JULY 2024
SAGARA : ಸೊಪ್ಪು ತರಲು ಕಾಡಿಗೆ (forest) ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡು ಹಂದಿ ದಾಳಿ ಮಾಡಿದೆ. ಕೂಡೂರಿನ ಚೌಡನಾಯ್ಕ (52) ಗಾಯಗೊಂಡವರು.
ತುಮರಿ ಸಮೀಪದ ಕಟ್ಟಿನಕಾರು ಗ್ರಾಮದ ಕೂಡೂರಿನ ಬಳಿ ಸೊಪ್ಪಿನ ಬೆಟ್ಟದಲ್ಲಿ ಸೊಪ್ಪು ತರಲು ಹೋಗಿದ್ದಾಗ ಘಟನೆ ಸಂಭವಿಸಿದೆ. ಚೌಡನಾಯ್ಕ ಮೇಲೆ ದಾಳಿ ನಡೆಸಿದ ಹಂದಿ ಕಚ್ಚಿ ಗಾಯಗೊಳಿಸಿದೆ. ರಕ್ತಸ್ರಾವವಾಗಿ ನಿತ್ರಾಣಗೊಂಡಿದ್ದ ಚೌಡನಾಯ್ಕ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಕಾಡು ಹಂದಿಯಿಂದ ಜನರು ಭಯದಲ್ಲಿ ಬದುಕುವಂತಾಗಿದೆ. ಬೆಳೆ ನಷ್ಟ ಉಂಟಾಗುತ್ತಿದೆ. ಹಾಗಾಗಿ ಅದನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇದನ್ನೂ ಓದಿ – ಭದ್ರಾವತಿಯಲ್ಲಿ ಜಂಗ್ಲಿ ಸೇರಿ ಇಬ್ಬರು ಅರೆಸ್ಟ್, ನಗದು ವಶಕ್ಕೆ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200