ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಆಗಸ್ಟ್ 2020
ವಿವಸ್ತ್ರಳಾಗಿ ಓಡಾಡುತ್ತಿದ್ದ ಮಹಿಳೆಯೊಬ್ಬರಿಗೆ ಎಎಸ್ಐ ಒಬ್ಬರು ಬಟ್ಟೆ ತೊಡಿಸಿ, ಊಟ ಮಾಡಿಸಿ, ಊರಿಗೆ ಬಸ್ಸು ಹತ್ತಿಸಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಎಸ್ಐ ಕ್ರಮಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
ತಾಳಗುಪ್ಪದಲ್ಲಿ ಮಹಿಳೆಯೊಬ್ಬರು ಬಟ್ಟೆ ಇಲ್ಲದೆ ಓಡಾಡುತ್ತಿದ್ದರು. ಬಕ್ರಿದ್ ಬಂದೋಬಸ್ತ್ ಡ್ಯೂಟಿಯಲ್ಲಿದ್ದ ಎಎಸ್ಐ ಮೀರಾಬಾಯಿ ಇದನ್ನು ಗಮನಿಸಿ, ಮಹಿಳೆಗೆ ಬಟ್ಟೆ ತೊಡಿಸಿ, ಊಟ, ತಿಂಡಿ ಕೊಡಿಸಿ, ಆಪ್ತ ಸಮಾಲೋಚನೆ ಮಾಡಿ, ಊರಿಗೆ ಕಳುಹಿಸಿದ್ದಾರೆ.
ಮಹಿಳೆ ತಮಿಳುನಾಡು ಮೂಲದವಳು ಎಂದು ತಿಳಿದು ಬಂದಿದೆ. ಆಕೆಯೊಂದಿಗೆ ಆಪ್ತವಾಗಿ ಮಾತನಾಡಿದ ಬಳಿಕ ತನ್ನ ಊರಿನ ಬಗ್ಗೆ ತಿಳಿಸಿದ್ದಾಳೆ. ಹಾಗಾಗಿ ತಾಳಗುಪ್ಪದಿಂದ ಸಾಗರದವರೆಗೆ ತಮ್ಮ ಕಾರಿನಲ್ಲೆ ಕರೆದೊಯ್ದು, ಅಲ್ಲಿ ಬೆಂಗಳೂರಿಗೆ ಬಸ್ ಹತ್ತಿಸಿದ್ದಾರೆ. ಎಎಸ್ಐ ಮೀರಾಬಾಯಿ ಅವರ ಮಾನವೀಯ ಕಾರ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಹೆಡ್ ಕಾನ್ಸ್ಟೇಬಲ್ ರಘು ಶೆಟ್ಟಿ, ಮಂಜುನಾಥ್, ವಿನಾಯಕ್ ಅವರು ಎಎಸ್ಐ ಮೀರಾಬಾಯಿ ಅವರಿಗೆ ನೆರವಾದವರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200