Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » BREAKING NEWS | ಜೋಗ ಜಲಪಾತದಲ್ಲಿ ಅಧಿಕಾರಿಗಳ ದಾಳಿ, ಹೋಂ ಗಾರ್ಡ್’ಗಳು ಸೇರಿ ಏಳು ಮಂದಿ ವಿರುದ್ಧ ಕೇಸ್

BREAKING NEWS | ಜೋಗ ಜಲಪಾತದಲ್ಲಿ ಅಧಿಕಾರಿಗಳ ದಾಳಿ, ಹೋಂ ಗಾರ್ಡ್’ಗಳು ಸೇರಿ ಏಳು ಮಂದಿ ವಿರುದ್ಧ ಕೇಸ್

21/08/2021 8:30 AM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SAGARA NEWS | 21 ಆಗಸ್ಟ್ 2021

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಜೋಗ ಜಲಪಾತದ ಮೇಲೆ ಪೊಲೀಸರ ವಿಶೇಷ ತಂಡ ದಾಳಿ ನಡೆಸಿದೆ. ಕರೋನ ನಿಯಮ ಉಲ್ಲಂಘಿಸಿ ಪ್ರವಾಸಿಗರನ್ನು ಜಲಪಾತ ವೀಕ್ಷಣೆಗೆ ಬಿಟ್ಟ ಆರೋಪದಡಿ ಏಳು ಮಂದಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಈ ಪೈಕಿ ಮೂವರು ಹೋಂ ಗಾರ್ಡ್ ಸಿಬ್ಬಂದಿಗಳಿದ್ದಾರೆ.

ಜೋಗ ಜಲಪಾತ ವೀಕ್ಷಣೆಗೆ ಬರುವವರಿಗೆ RTPCR ನೆಗೆಟಿವ್ ವರದಿ ಅಥವಾ ಎರಡನೇ ಡೋಸ್ ಲಸಿಕೆ ಪಡೆದ ವರದಿ ಕಡ್ಡಾಯಗೊಳಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಆದರೆ ಇಲ್ಲಿನ ಸೆಕ್ಯೂರಿಟಿ ಗಾರ್ಡ್’ಗಳು ಈ ಆದೇಶಕ್ಕೆ ಕ್ಯಾರೆ ಅನ್ನದೆ, ಬಂದ ಪ್ರವಾಸಿಗರನ್ನು ಒಳಬಿಡುತ್ತಿದ್ದರು.

ದಿಢೀರ್ ದಾಳಿ ನಡೆಸಿದ ಆಫೀಸರ್ಸ್

ಜೋಗ ಗೇಟ್’ನಲ್ಲಿ ಸೆಕ್ಯೂರಿಟಿ ಗಾರ್ಡ್’ಗಳ ನಿರ್ಲಕ್ಷ್ಯದ ಕುರಿತು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರಿಗೆ ದೂರು ಬಂದಿತ್ತು. ಈ ಹಿನ್ನಲೆಯಲ್ಲಿ ಪರಿಶೀಲನೆ ನಡೆಸುವಂತೆ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ಸೂಚನೆ ನೀಡಿದ್ದರು. ಅದರಂತೆ ಸಾಗರ ಡಿವೈಎಸ್’ಪಿ ಅವರು ವಿಶೇಷ ತಂಡ ರಚಿಸಿ, ದಾಳಿಗೆ ಸೂಚಿಸಿದ್ದರು. ಪ್ರವಾಸಿಗರ ರೂಪದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಪ್ರವಾಸಿಗರಂತೆ ಒಳಗೆ ಹೋದರು

ಪೊಲೀಸರ ವಿಶೇಷ ತಂಡ ಪ್ರವಾಸಿಗರಂತೆ ಜೋಗ ಜಲಪಾತಕ್ಕೆ ತೆರಳಿದ್ದರು. ಇವರಿಗೆ ಕೋವಿಡ್ ನೆಗೆಟಿವ್ ವರದಿಯಾಗಲಿ, ಲಸಿಕೆ ಪಡೆದ ರಿಪೋರ್ಟಾಗಿ ವಿಚಾರಿಸಲಿಲ್ಲ. ನೇರವಾಗಿ ಜೋಗ ಜಲಪಾತ ವೀಕ್ಷಣೆಗೆ ಕಳುಹಿಸಲಾಗಿತ್ತು. ಹಾಗಾಗಿ ಕೂಡಲೆ ಸೆಕ್ಯೂರಿಟಿ ಗಾರ್ಡ್ ಮತ್ತು ಅಂಗಡಿ ಮಾಲೀಕರೊಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ.

ADVT JULY NANJAPPA HOSPITAL HOME LAB TESTING

ಯಾರೆಲ್ಲರ ವಿರುದ್ಧ ಪ್ರಕರಣ ದಾಖಲಾಗಿದೆ?

ಜೋಗದ ಸೆಕ್ಯೂರಿಟಿಗೆ ನಿಯೋಜನೆಗೊಂಡಿದ್ದ ಸಿಬ್ಬಂದಿಗಳು, ಗೈಡ್ ಒಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಚಂದ್ರಶೇಖರ್, ಹೋಂ ಗಾರ್ಡ್’ಗಳಾದ ಮಂಜುನಾಥ, ಕೃಷ್ಣಪ್ಪ, ಮಂಜುನಾಥ, ಸೆಕ್ಯೂರಿಟಿ ಗಾರ್ಡ್’ಗಳಾದ ರಾಕೇಶ, ಪ್ರಭುದಾಸ, ಅಂಗಡಿ ಮಾಲೀಕ ಸಂಜು ಅಲಿಯಾಸ್ ಮಂಜುನಾಥ್ ಎಂಬುವವರ ವಿರುದ್ಧ ಜೋಗ ಪೊಲೀಸ್ ಠಾಣೆಯಲ್ಲಿ ವಿಶೇಷ ತಂಡ ಪ್ರಕರಣ ದಾಖಲು ಮಾಡಿದೆ.

ಗೇಟಲ್ಲಿ ಏನಾಗುತಿತ್ತು ಗೊತ್ತಾ?

ಕರೋನ ಮೂರನೆ ಅಲೆಯ ಭೀತಿ ಎದುರಾದ ಹಿನ್ನೆಲೆ, ಜೋಗ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಅವರು ಕೆಲವು ಷರತ್ತು ವಿಧಿಸಿದ್ದರು. ಗೇಟ್’ನಲ್ಲಿ ಪ್ರವಾಸಿಗರ ಕೋವಿಡ್ ವರದಿ ಅಥವಾ ಲಸಿಕೆ ಪಡೆದ ವರದಿಯನ್ನು ಪರಿಶೀಲಿಸಬೇಕಿತ್ತು. ಆರಂಭದಲ್ಲಿ ವರದಿ ಕಡ್ಡಾಯವಾಗಿ ಪರಿಶೀಲನೆ ನಡೆಸುತ್ತಿದ್ದರು. ಆ ಬಳಿಕ ಪ್ರಭಾವ ಬೀರಿದವರಿಗೆ ಯಾವುದೆ ರಿಪೋರ್ಟ್ ಕೇಳದೆ ಒಳಗೆ ಬಿಡುತ್ತಿರುವ ಕುರಿತು ಆರೋಪಗಳು ಕೇಳಿ ಬಂದಿದ್ದವು.

238274473 1178430235970218 2635873810325074933 n.jpg? nc cat=106&ccb=1 5& nc sid=730e14& nc ohc=7G7n5HbKhU4AX8BXM9N& nc ht=scontent.fblr1 3

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article ಶಿವಮೊಗ್ಗ ನಗರದಲ್ಲಿ ಮತ್ತೆರಡು ಕಂಟೈನ್ಮೆಂಟ್ ಜೋನ್ ರಚನೆ
Next Article 210821 Bolero Accident at sagara road near mc gann hospital ಮೆಗ್ಗಾನ್ ಆಸ್ಪತ್ರೆ ಮುಂಭಾಗ ಬೊಲೆರೋ ಪಲ್ಟಿ, ಗಾಯಾಳುಗಳನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಇದನ್ನೂ ಓದಿ

-Linganamakki-Dam-General-Image
SAGARA

ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ ಒಂದು ಅಡಿ ಹೆಚ್ಚಳ, ಇವತ್ತು ಎಷ್ಟಿದೆ ಒಳ ಹರಿವು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Police-Jeep-at-Shimoga-General-Image
CRIME DIARYSHIVAMOGGA CITY

ಸೋಮಿನಕೊಪ್ಪ ಸಮೀಪ ಕೆಲಸ ಮುಗಿಸಿ ಮನೆಗೆ ಬಂದ ದಂಪತಿಗೆ ಕಾದಿತ್ತು ಶಾಕ್

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
areca-growers-meet-Sagara-
SAGARA

ಅಡಿಕೆ ಬೆಳೆಗಾರರ ಸಂಘದಿಂದ ಉಪ ವಿಭಾಗಾಧಿಕಾರಿ ಭೇಟಿ, ಚರ್ಚೆ, ಏನೆಲ್ಲ ಮನವಿ ಸಲ್ಲಿಸಲಾಯ್ತು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Sigandur-Bridge-work-photo
SAGARA

ಸಿಗಂದೂರು ಸೇತುವೆ, ಸಾಗರದಿಂದ ಉಡುಪಿ, ಮಂಗಳೂರಿಗೆ ಬಸ್‌ ವ್ಯವಸ್ಥೆ ಕಲ್ಪಿಸಲು ಆಗ್ರಹ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
09/07/2025
Crime-News-General-Image
CRIME DIARYSHIVAMOGGA CITY

ನಿಲ್ದಾಣದಲ್ಲಿಯೇ ಸಿಟಿ ಬಸ್‌ ಕಂಡಕ್ಟರ್‌ಗಳ ಮಧ್ಯೆ ಕಿರಿಕ್‌, ಕೈ ಕೈ ಮಿಲಾಯಿಸಿದ ನಿರ್ವಾಹಕರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Police-Van-Jeep-at-Shimoga-Nehru-Road
CRIME DIARYSHIVAMOGGA CITY

ಬೈಕ್‌ನಲ್ಲಿ ಬಂದು ಆಟೋ ಅಡಗಟ್ಟಿದ ದುಷ್ಕರ್ಮಿಗಳು, ಹಿಂಬದಿ ಕುಳಿತಿದ್ದ ವ್ಯಕ್ತಿ ಬಳಿ ಇದ್ದ ಬ್ಯಾಗ್‌ ಕಸಿದು ಪರಾರಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
08/07/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?