ಶಿವಮೊಗ್ಗ ಲೈವ್.ಕಾಂ | SAGARA NEWS | 1 MAY 2021
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಜಾತ್ರೆ, ಸಮಾರಂಭ, ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧವಿದೆ. ಹಾಗಿದ್ದೂ ಸಾಗರದ ಆಜಾರ್ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸಲಾಗಿದೆ. ಈ ಸಂಬಂಧ ಮಾಹಿತಿ ಲಭ್ಯವಾಗುತ್ತಿದ್ದಂತೆ ಅಧಿಕಾರಿಗಳು ದಾಳಿ ನಡೆಸಿ, ಪ್ರಾರ್ಥನೆಯಲ್ಲಿ ಭಾಗವಹಿಸಿದ್ದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಸುಮಾರು 25 ಮಂದಿ ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದರು. ಈ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ದಿಢೀರ್ ದಾಳಿ ನಡೆಸಿದ ಪೊಲೀಸರು ಸಾಮೂಹಿಕ ಪ್ರಾರ್ಥನೆಯಲ್ಲಿ ತೊಡಗಿದ್ದವರನ್ನು ವಶಕ್ಕೆ ಪಡೆದರು.
ಇದನ್ನೂ ಓದಿ – ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಕರೋನಾಘಾತ, ಸಾರ್ವಜನಿಕರಿಗಿಲ್ಲ ಪ್ರವೇಶ
ಡಿವೈಎಸ್ಪಿ ವಿನಾಯಕ ಶೇಟಗೆರಿ ನೇತೃತ್ವದಲ್ಲಿ ಸಾಗರ ನಗರ ಠಾಣೆ ಇನ್ಸ್ಪೆಕ್ಟರ್ ಅಶೋಕ್ ಕುಮಾರ್ ಮತ್ತು ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.
ತಹಶೀಲ್ದಾರ್ ಚಂದ್ರೇಖರ್ ನಾಯಕ್, ಸಿಡಿಪಿಒ ಸಂತೋಷ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೆಚ್ಚು ಜನರು ಒಂದೆಡೆ ಸೇರುವುದರಿಂದ ಸೋಂಕು ವ್ಯಾಪಕವಾಗಿ ಹರಡುವ ಸಾದ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆ, ಜಾತ್ರೆಗಳುನ್ನು ಸರ್ಕಾರ ನಿರ್ಬಂಧಿಸಿದೆ.
ಇದನ್ನೂ ಓದಿ – ತೀರ್ಥಹಳ್ಳಿಯ ಎರಡು ಅಂಗಡಿಗಳ ಮೇಲೆ ದಿಢೀರ್ ದಾಳಿ, ಮಾಲೀಕರ ವಿರುದ್ಧ ಕೇಸ್, ಕಾರಣವೇನು?

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






