ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಸಾಗರ: ತಾಲೂಕಿನ ಆನಂದಪುರ ಸಮೀಪದ ತ್ಯಾಗರ್ತಿ ಗ್ರಾಮದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ (laterite) ಕಲ್ಲುಗಳನ್ನು ಗಣಿಗಾರಿಕೆ ಮಾಡಿ ಸಾಗಿಸುತ್ತಿದ್ದ ಲಾರಿಯೊಂದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಜಂಬಿಟ್ಟಿಗೆ ಕಲ್ಲುಗಳನ್ನು ಲಾರಿಯಲ್ಲಿ ತುಂಬಿಸಿಕೊಂಡು ಸಾಗಿಸಲಾಗುತ್ತಿತ್ತು. ಪೊಲೀಸರು ವಾಹನವನ್ನು ತಡೆದು ನಿಲ್ಲಿಸಲು ಪ್ರಯತ್ನಿಸಿದಾಗ ಚಾಲಕ ಲಾರಿಯನ್ನು ಬಿಟ್ಟು ಸ್ಥಳದಿಂದ ಓಡಿ ಹೋಗಿದ್ದಾನೆ. ಲಾರಿಯಲ್ಲಿದ್ದ ಸುಮಾರು ₹15,000 ಮೌಲ್ಯದ ಕಲ್ಲುಗಳನ್ನು ವಶಕ್ಕೆ ಪಡೆಯಲಾಗಿದೆ. ಘಟನೆ ಸಂಬಂಧ ಆನಂದಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌

281123-Anandapura-Police-Station-Board.webp

ಇದನ್ನೂ ಓದಿ : ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

Sunrise Facility Services, Sri sai Trust Shimoga

Leave a Comment