ಬ್ರೇಕ್‌ ಫೇಲ್‌ ಆಗಿ ಖಾಸಗಿ ಬಸ್‌ ಪಲ್ಟಿ, ಹಲವು ಪ್ರವಾಸಿಗರಿಗೆ ಗಾಯ, ಎಲ್ಲಿ? ಹೇಗಾಯ್ತು ಘಟನೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಸಾಗರ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ದರ್ಶನ ಮುಗಿಸಿ ವಡನಬೈಲು ಬಳೆ ಪದ್ಮಾವತಿ ದೇವಸ್ಥಾನಕ್ಕೆ ತೆರಳುವಾಗ ಬಸ್‌ ಬ್ರೇಕ್‌ ಫೇಲ್‌ (Break Fail) ಆಗಿ ಪಲ್ಟಿಯಾಗಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಸಾಗರ ತಾಲೂಕು ಆಡುಕಟ್ಟೆ ಸಮೀಪದ ಜೋಗಿನ ಮಠ ಬಳಿ ಬಸ್‌ ಬ್ರೇಕ್‌ ಫೇಲ್‌ ಆಗಿ ತಿರುವಿನಲ್ಲಿ ಪಲ್ಟಿಯಾಗಿದೆ. ಘಟನೆಯಲ್ಲಿ 18 ಪ್ರವಾಸಿಗರು ಗಾಯಗೊಂಡಿದ್ದಾರೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಚಿಕ್ಕಬಳ್ಳಾಪುರದ ಪ್ರವಾಸಿಗರು

ಚಿಕ್ಕಬಳ್ಳಾಪುರ ಸುಮಾರು 50 ಪ್ರವಾಸಿಗರು ಖಾಸಗಿ ಬಸ್ಸಿನಲ್ಲಿ ಸಿಗಂದೂರು, ವಡನಬೈಲು ದೇವಸ್ಥಾನಗಳಿಗೆ ಪ್ರವಾಸಕ್ಕೆ ಆಗಮಿಸಿದ್ದರು. ಇವತ್ತು ಸಿಗಂದೂರು ದರ್ಶನ ಮುಗಿಸಿ ವಡನಬೈಲಿಗೆ ತೆರಳುತ್ತಿದ್ದರು. ಈ ವೇಳೆ ಬಸ್‌ ಬ್ರೇಕ್‌ ಫೇಲ್‌ ಆಗಿ ಪಲ್ಟಿಯಾಗಿ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಕಾರ್ಗಲ್‌ ಮತ್ತು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಗಾಯಾಳುಗಳಿಗೆ ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಪಟಾಕಿ ಮಾರಾಟ ಶುರು, ಹೇಗಿದೆ ಡಿಮಾಂಡ್‌?

191025-Bus-incident-on-the-way-to-vadnbailu-from-siganduru.webp

191025-Bus-incident-on-the-way-to-vadnbailu-from-siganduru.webp

191025-Bus-incident-on-the-way-to-vadnbailu-from-siganduru.webp

191025-Bus-incident-on-the-way-to-vadnbailu-from-siganduru.webp

Break Fail

Leave a Comment