ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 4 JANUARY 2024
SAGARA : ಎದುರಿನಿಂದ ಬಂದ ಗೂಡ್ಸ್ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಖಾಸಗಿ ಬಸ್ ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ನುಗ್ಗಿದೆ. ಶಿವಮೊಗ್ಗ – ಸಾಗರ ರಸ್ತೆಯ ಗಿಳಾಲಗುಂಡಿ ಸಮೀಪ ಘಟನೆ ಸಂಭವಿಸಿದೆ.
ಬಸ್ಸು ಸಾಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿತ್ತು. ಬಸ್ಸಿನಲ್ಲಿ ಶಾಲೆ, ಕಾಲೇಜು ವಿದ್ಯಾರ್ಥಿಗಳು, ಆನಂದಪುರದಲ್ಲಿ ನಾಟಿ ಔಷಧಿ ಖರೀದಿಗೆ ತೆರಳುವವರು ಹೆಚ್ಚಿದ್ದರು ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಬಸ್ ಚಾಲಕನಿಗೆ ಗಂಭೀರ ಪೆಟ್ಟಾಗಿದೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮತ್ತು ಅದೇ ಮಾರ್ಗದಲ್ಲಿ ತೆರಳುತ್ತಿದ್ದವರು ನೆರವಿಗೆ ಧಾವಿಸಿದ್ದಾರೆ.
ಇದನ್ನೂ ಓದಿ – ನಿವೃತ್ತ ಯೋಧರಿಗೆ ಅದ್ಧೂರಿ ಸ್ವಾಗತ, ಆನಂದಪುರ, ರಿಪ್ಪನ್ಪೇಟೆಯಲ್ಲಿ ಮೆರವಣಿಗೆ
ತಿರುವಿನಲ್ಲಿ ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಗೂಡ್ಸ್ ಆಟೋ ಎದುರಿಗೆ ಬಂದಿದೆ. ಅದಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬಸ್ ಚಾಲಕ ಯತ್ನಿಸಿದ್ದು, ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






