ಹೆಣ್ಣು ಒಪ್ಪಿಸುವ ಶಾಸ್ತ್ರ ಪೂರ್ಣ, ತವರು ಮನೆಯಿಂದ ರಾತ್ರಿ ಗಂಡನೆ ಮನೆಗೆ ಮಾರಿಕಾಂಬೆ, ಹೇಗಿತ್ತು ಮೆರವಣಿಗೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 FEBRURARY 2023

SAGARA : ತವರು ಮನೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಮಾರಿಕಾಂಬಾ ಮೂರ್ತಿಯನ್ನು (marikamba jathre) ಮಂಗಳವಾರ ರಾತ್ರಿ ಅದ್ಧೂರಿಯಾದ ಮೆರವಣಿಗೆ ಹಾಗೂ ರಾಜಬೀದಿ ಉತ್ಸವದ ಮುಖಾಂತರ ಗಂಡನ ಮನೆಗೆ ತರಲಾಯಿತು. ಸಾವಿರಾರು ಜನರು ತವರು ಮನೆ ದೇವಸ್ಥಾನದಲ್ಲಿ ಜಮಾಯಿಸಿದ್ದರು.

Sagara-Marikamba-jathre-procession-from-tavarumane

ಹೆಣ್ಣು ಒಪ್ಪಿಸುವ ಶಾಸ್ತ್ರ

ಮಂಗಳವಾರ ರಾತ್ರಿ 11ಕ್ಕೆ ಮಹಾಮಂಗಳಾರತಿ ನಂತರ ಪೋತರಾಜನಿಂದ ಚಾವಟಿ ಸೇವೆ ನಡೆಯಿತು. ನಂತರ ಹೆಣ್ಣು ಒಪ್ಪಿಸುವ ಧಾರ್ಮಿಕ ಪೂಜಾ ವಿಧಾನಗಳು ನಡೆದವು. ಸಹಸ್ರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರಿಂದ ನೂಕು ನುಗ್ಗಲಾಯಿತು. ಶ್ರೀ ದೇವಿಯ ದಂಡಿನ ಮೆರವಣಿಗೆಯು ಪ್ರಸಿದ್ಧ ಕಲಾತಂಡಗಳ ಪಾಲ್ಗೊಳ್ಳುವಿಕೆಯ ಜತೆಯಲ್ಲಿ ನಡೆಯಿತು. ಭಕ್ತರು ದೇವಿಯ ದರ್ಶನ ಪಡೆದರು.

Sagara Marikamba Jathre 2023

ಕಲಾ ತಂಡಗಳು ಭಾಗಿ

ಬೆಳ್ತಂಗಡಿಯ ಸೃಷ್ಠಿ ಆರ್ಟ್ಸ್ ನ ಕಲಾವಿದರ ತಂಡ, ಕೀಲುಕುದುರೆ, ಕರಗ, ರಾಜ, ರಾಣಿ, ಸಿಂಹ ಸೇರಿದಂತೆ ವಿವಿಧ ವೇಷಧಾರಿಗಳು, ಹುಬ್ಬಳ್ಳಿಯ ಬ್ಯಾಂಡ್ ಬಳಗ, ಸಿರಸಿಯ ಮುಖೇಶ್ ಆರ್ಟ್ಸ್ ಬೇಡರ ವೇಷದ ಕಲಾವಿದರು, ಅರಸಿಕೇರೆಯ ಶ್ರೀ ರಾಮ ಯುವಕರ ಕಲಾಸಂಘದ ಸದಸ್ಯರು ಸೋಮನ ಕುಣಿತ, ನಂದಿಕೋಲು ನಡೆಸಿಕೊಟ್ಟರು.

sagara%20marikamba%20jathre2

ಇದನ್ನೂ ಓದಿ – ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವೈಭವದ ಚಾಲನೆ, ಇವತ್ತಿನಿಂದ 9 ದಿನ ಸಡಗರ, ಎಲ್ಲೆಲ್ಲಿ ಏನೇನು ನಡೆಯಲಿದೆ?

ವಾದ್ಯಗಾರರು ಕಾಂತಾರ ಚಲನಚಿತ್ರದ ಗೀತೆಯನ್ನು ನುಡಿಸಿದರು. ಮಂಡ್ಯ ಕೆ.ಆರ್.ನಗರದ ಆದಿಶಕ್ತಿ ತಂಡವು ನಗಾರಿ, ಡೊಳ್ಳು ಕಲಾವಿದರು, ಚಂಡೆವಾದನ, ಮಂಗಳವಾದ್ಯ ಸೇರಿದಂತೆ ಮುಂತಾದ ಕಲಾತಂಡಗಳ ಸದಸ್ಯರು ರಾಜಬೀದಿ ಉತ್ಸವದಲ್ಲಿ ಭಾಗವಹಿಸಿದ್ದರು.

sagara%20marikamba%20jathre3

ಭವ್ಯ ರಥದಲ್ಲಿ ಮೆರವಣಿಗೆ, ಪ್ರತಿಷ್ಠಾಪನೆ

ಭವ್ಯರಥದಲ್ಲಿ ಶ್ರೀ ಮಾರಿಕಾಂಬೆಯನ್ನು (marikamba jathre) ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಬುಧವಾರ ಬೆಳಗ್ಗೆ ಗಂಡನ ಮನೆಗೆ ತರಲಾಯಿತು. ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ಸಿದ್ಧಪಡಿಸಿದ್ದ ಬೃಹತ್ ವೇದಿಕೆಯಲ್ಲಿ ಮೂರ್ತಿ ಪ್ರತಿಷ್ಠಾಪಿಸಿ ಧಾರ್ಮಿಕ ಆಚರಣೆಗಳನ್ನು ನಡೆಸಲಾಯಿತು.

sagara%20marikamba%20jathre

ಗಂಡನ ಮನೆಯಲ್ಲಿ ದರ್ಶನ

ಇಂದಿನಿಂದ ಗಂಡನ ಮನೆ ಆವರಣದಲ್ಲಿ ಶ್ರೀ ಮಾರಿಕಾಂಬಾ ದೇವರ (marikamba jathre) ದರ್ಶನಕ್ಕೆ ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಗಂಡನ ಮನೆ ದೇವಸ್ಥಾನದಲ್ಲಿ ಶ್ರೀ ದೇವಿಯ ಘಟೇವು ಪ್ರವೇಶ ನಂತರ ಮಂಗಳಾರತಿ ನಡೆಸಲಾಯಿತು. ಫೆ. 15ರವರೆಗೂ ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾರಿಕಾಂಬ ಜಾತ್ರೆಯ ಎರಡನೇ ದಿನವೂ ದೇವಿಯ ದರ್ಶನಕ್ಕೆ ಭಾರಿ ಸಂಖ್ಯೆಯಲ್ಲಿ ಜನರು ಆಗಮಿಸಿ ಪೂಜೆ ಸಲ್ಲಿಸಿದರು.

ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಕೆಲಸದ ಹೆಸರಲ್ಲಿ ಮಹಾ ಮೋಸ, ದಾಖಲಾಯಿತು ಮೊದಲ ಕೇಸ್

ಶ್ರೀ ಮಾರಿಕಾಂಬ ಜಾತ್ರಾ ಸಮಿತಿ ಅಧ್ಯಕ್ಷ ಕೆ.ಎನ್.ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಗಿರಿಧರರಾವ್, ಖಜಾಂಚಿ ನಾಗೇಂದ್ರ ಎಸ್.ಕುಮುಟಾ, ಪೋತರಾಜ ರವಿ, ಉಪಾಧ್ಯಕ್ಷರು, ಸಹ ಕಾರ್ಯದರ್ಶಿ, ವಿವಿಧ ಸಮಿತಿ ಸಂಚಾಲಕರು ಸೇರಿದಂತೆ ಎಲ್ಲ ಪದಾಧಿಕಾರಿಗಳು ಹಾಜರಿದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 8, 2023

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment