ಚಿತ್ರ ನಟಿ ಬಂಧನಕ್ಕೆ ಆಗ್ರಹಿಸಿ ಸಾಗರದಲ್ಲಿ ಪ್ರತಿಭಟನೆ, ರಾಷ್ಟ್ರಪತಿಗೆ ಮನವಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | SAGARA NEWS | 18 ನವೆಂಬರ್ 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ನಟಿ ಕಂಗನಾ ರಣಾವತ್ ಹೇಳಿಕೆಗೆ ಸಾಗರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಟಿಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕು ಮತ್ತು ಆಕೆಯನ್ನು ಬಂಧಿಸಬೇಕು ಎಂದು ಆಗ್ರಹಿಸಲಾಗಿದೆ.

AVvXsEg7D64eppM2Y2YXBDC80Q2TdBmP2uvjR kzBF IPI

ಸಾಗರದ ಉಪ ವಿಭಾಗೀಯ ಕಚೇರಿ ಮುಂದೆ ಜನಮನ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಟಿ ಕಂಗನಾ ಬಂಧನಕ್ಕೆ ಒತ್ತಾಯಿಸಿ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

‘ಅತಿರೇಕದ ಪರಮಾವಧಿ, ಯಾರನ್ನೋ ಮೆಚ್ಚಿಸಲು ಯತ್ನ’

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಾಹಿತಿ ನಾ.ಡಿಸೋಜಾ, ‘1947ರಲ್ಲಿ ನಮಗೆ ದೊರೆತಿದ್ದು ಸ್ವಾತಂತ್ರ್ಯದ ಭಿಕ್ಷೆಯಷ್ಟೆ. ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ ಎಂದು ನಟಿ ಕಂಗನಾ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಹಲವು ಮಹನೀಯರು ಬಲಿದಾನಗೈದಿದ್ದಾರೆ. ಇದರ ಬಗ್ಗೆ ಕಿಂಚಿತ್ತು ಮಾಹಿತಿ ಇಲ್ಲದೆ ನಟಿ ಕಂಗನಾ ಹೇಳಿಕೆ ನೀಡಿದಂತೆ ತೋರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು, ಈ ಹೇಳಿಕೆಯು ಅತಿರೇಕದ ಪರಮಾವಧಿಯಾಗಿದೆ. ಯಾರನ್ನೋ ಮೆಚ್ಚಿಸಲು ಈ ರೀತಿಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದರು.

ಜನಮನ ಸಂಘಟನೆ ಸಂಚಾಲಕ ಡಿ.ದಿನೇಶ್, ಸಾಹಿತಿ ವಿಲಿಯಂ, ನಗರಸಭೆ ಸದಸ್ಯೆ ಎನ್.ಲಲಿತಮ್ಮ, ಪ್ರಮುಖರಾದ ಮೊಹಮ್ಮದ್ ಖಾಸಿಂ, ಕೆ.ಸಿದ್ದಪ್ಪ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಹಾಜರಿದ್ದರು.

shivamogga live subscirbe contact

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment