ಶರಾವತಿ ಹಿನ್ನೀರು ಭಾಗದಲ್ಲಿ ಸಾಲು ಸಾಲು ಕಳ್ಳತನ, ರಸ್ತೆ ತಡೆ ಮಾಡಿ ಜನರ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 DECEMBER 2022

ಬ್ಯಾಕೋಡು : ಶರಾವತಿ ಹಿನ್ನೀರಿನ ಕರೂರು ಹೋಬಳಿಯಲ್ಲಿ (karur hobli) ಕಳ್ಳತನ ಪ್ರಕರಣಗಳು ಹೆಚ್ಚಾಗಿದೆ. ಪೊಲೀಸರು ತನಿಖೆ ಚುರುಕುಗೊಳಿಸಿ, ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

Shimoga Nanjappa Hospital

ಬ್ಯಾಕೋಡು ಸಮೀಪ ಸಸಿಗೊಳ್ಳಿಯಲ್ಲಿ ಗ್ರಾಮಸ್ಥರು ವಾಹನ ಸಂಚಾರ ತಡೆದು ಪ್ರತಿಭಟಿಸಿದರು. ಸಾಲು ಸಾಲು ಕಳ್ಳತನವಾಗುತ್ತಿದ್ದರೂ ಆರೋಪಿಗಳ ಬಂಧನವಾಗುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

(karur hobli)

ಸಾಲು ಸಾಲು ಕಳ್ಳತನ ಕೇಸ್

ಸಸಿಗೊಳ್ಳಿಯ ತರಕಾರಿ ವ್ಯಾಪಾರಿ ಬಾಬು ಜೈನ್ ಅವರ ಮನೆಗೆ ಗುರುವಾರ ರಾತ್ರಿ ಕಳ್ಳರು ನುಗ್ಗಿದ್ದಾರೆ. LIC-HOME-NEW-ADVT4.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ ಎಂದು ಹೇಳಲಾಗುತ್ತಿದೆ. ಅದೆ ರಾತ್ರಿ ಬ್ಯಾಕೋಡಿನ ರಾಘವೇಂದ್ರ ಶೇಟ್ ಅವರ ಮನೆಗೆ ನಗ್ಗಿರುವ ಕಳ್ಳರು ವಸ್ತುಗಳನ್ನು ಚಲ್ಲಾಪಿಲ್ಲಿ ಮಾಡಿದ್ದಾರೆ.

ಆರು ತಿಂಗಳ ಹಿಂದೆ ಬೇರಾಳದ ರಮೇಶ್ ಅವರ ಮನೆಯಲ್ಲಿ ಕಳ್ಳತನವಾಗಿತ್ತು. ಈಚೆಗೆ ಸುಳ್ಳಳ್ಳಿಯ ಸತೀಶ್ ಎಂಬುವವರ ಮನೆಯಲ್ಲಿ 3 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನಾಗಿತ್ತು. ಕರೂರು ಹೋಬಳಿಯ ಸುಂದರ್ ಶೇಟ್ ದಂಪತಿ ಹತ್ಯೆ ಪ್ರಕರಣದ ಆರೋಪಿಗಳು ಇನ್ನು ಸಿಕ್ಕಿಲ್ಲ.

(karur hobli)

ಆರೋಪಿಗಳ ಬಂಧನಕ್ಕೆ ಆಗ್ರಹ

ಕರೂರು ಹೋಬಳಿಯಲ್ಲಿ ನಡೆದ ಕಳ್ಳತನಗಳು ಮತ್ತು ಜೋಡಿ ಕೊಲೆ ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಬೇಕು ಎಂದು ಗ್ರಮಸ್ಥರು ಪಟ್ಟು ಹಿಡಿದರು. ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿ, ಘೋಷಣೆ ಕೂಗಿದರು. ಇದರಿಂದ ಕೆಲವು ಹೊತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

Bykodu Sasigolla Protest by Villagers

ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಕಾರ್ಗಲ್ ಠಾಣೆ ಪಿಎಸ್ಐ ತಿರುಮಲೇಶ್ ಅವರು, ಸ್ಥಳೀಯರನ್ನು https://chat.whatsapp.com/KChu2C1bGTM2v9HmZlfIkSಸಮಾಧಾನಪಡಿಸಿದರು. ಕಳ್ಳತನ ಪ್ರಕರಣದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುತ್ತದೆ. ಜೋಡಿ ಕೊಲೆ ಪ್ರಕರಣದ ತನಿಖೆ ನಡೆಯುತ್ತಿದೆ. ಎಲ್ಲವನ್ನು ಬಹಿರಂಗಪಡಿಸಿದರೆ ತನಿಖೆಗೆ ತೊಂದರೆಯಾಗಲಿದೆ ಎಂದು ಮನವರಿಕೆ ಮಾಡಿದರು. ಬಳಿಕ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟರು.

ಕುದರೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜ ಬೊಬ್ಬಿಗೆ, ಸದಸ್ಯ ಸುಧಾಕರ ಸಸಿಗೊಳ್ಳಿ, ಗಣಪತಿ ಸಿಗ್ಲು, ದೇವರಾಜ ಕಪ್ಪದೂರು, ರವಿ ಅಳುರು, ಸರೇಶ್ ಕೆರೋಡಿ, ರವಿ ಕುಣಜೆ, ಗಣಪಯ್ಯ ಸೆಟ್ಟಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ALSO READ – ರಾತ್ರಿ ಸಾರ್ವಜನಿಕರನ್ನು ಅಡ್ಡಗಟ್ಟಿ ದರೋಡೆಗೆ ಪ್ಲಾನ್, ಶಿವಮೊಗ್ಗ ಪೊಲೀಸರ ಬಲೆಗೆ ಬಿತ್ತು ತೊಟ್ಟಿ ಸೀನನ ಗ್ಯಾಂಗ್

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 3, 2022

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment