SHIVAMOGGA LIVE NEWS | 2 MAY 2023
SAGARA : ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ನೀಡದ್ದಕ್ಕೆ ಬೇಸರಗೊಂಡು ವ್ಯಕ್ತಿಯೊಬ್ಬರು ಟ್ಯಾಂಕ್ (Water Tank) ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸವಿತಾ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ 40 ವರ್ಷದಿಂದ ನಿವೇಶನ ನೀಡಿಲ್ಲ ಎಂದು ಆರೋಪಿಸಿ ಈಶ್ವರ್ ಎಂಬಾತ ಟ್ಯಾಂಕ್ ಏರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದರು.
ವರದಳ್ಳಿ ರಸ್ತೆಯಲ್ಲಿರುವ ನೀರಿನ ಟ್ಯಾಂಕ್ (Water Tank) ಏರಿದ್ದ ಈಶ್ವರ್, ತಮ್ಮ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ ಕೂಡಲೆ ನಿವೇಶನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು. ವಿಚಾರ ತಿಳಿದು ಅಗ್ನಿಶಾಮಕ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಈಶ್ವರ್ ಮನವೊಲಿಸುವ ಪ್ರಯತ್ನ ನಡೆಸಿದರು.
ಇದನ್ನೂ ಓದಿ – ಲೈಂಗಿಕ ಕಿರುಕುಳ ಆರೋಪ ಸಾಬೀತು, ಯುವಕನಿಗೆ ಜೈಲು, ದಂಡ, ಎಷ್ಟು ವರ್ಷ ಜೈಲು ಶಿಕ್ಷೆ? ದಂಡ ಎಷ್ಟು?
ದೇಸಿ ಫೌಂಡೇಶನ್ನ ಶ್ರೀಧರ ಮೂರ್ತಿ, ನಗರಸಭಾ ಸದಸ್ಯ ಗಣೇಶ್ ಪ್ರಸಾದ್, ಸವಿತಾ ಸಮಾಜದ ಅಧ್ಯಕ್ಷ ರವಿಪ್ರಕಾಶ್ ಸೇರಿ ಹಲವರು ಈಶ್ವರ್ ಅವರನ್ನು ಸಮಾಧಾನಪಡಿಸಿ ಟ್ಯಾಂಕ್ನಿಂದ ಕೆಳಗಿಳಿಸಿದರು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿತ ಸವಿತಾ ಸಮಾಜದ ತಾಲೂಕು ಅಧ್ಯಕ್ಷ ರವಿ ಪ್ರಕಾಶ್ ಅವರು, ಸಮುದಾಯ ಭವನ ನಿರ್ಮಾಣಕ್ಕೆ ನಿವೇಶನ ಮಂಜೂರು ಮಾಡುವಂತೆ ನಗರಸಭೆ, ಮುಖ್ಯಮಂತ್ರಿ , ಸಚಿವರು, ಶಾಸಕರು ಎಲ್ಲರಿಗೂ ಮನವಿ ಮಾಡಲಾಗಿದೆ. 40 ವರ್ಷದಿಂದ ಬೇಡಿಕೆ ಈಡೇರದಿದ್ದಕ್ಕೆ ಮನನೊಂದು ಈಶ್ವರ್ ಅವರು ಟ್ಯಾಂಕ್ ಏರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದೃಷ್ಟವಶಾತ್ ಅವರು ಪಾರಾಗಿದ್ದಾರೆ. ಇನ್ನಾದರೂ ನಮ್ಮ ಬೇಡಿಕೆ ಈಡೇರಲಿ ಎಂದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200